ಬ್ರೇಕಿಂಗ್ ನ್ಯೂಸ್
18-12-20 12:16 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.18: ವಿಧಾನ ಪರಿಷತ್ ಸದನದಲ್ಲಿ ಡಿ.15ರಂದು ನಡೆದ ಘಟನೆ ಹಿನ್ನೆಲೆಯಲ್ಲಿ ಮತ್ತು ಅಂದಿನ ಅಧಿವೇಶನ ಸಂದರ್ಭ ಬೇಜವಾಬ್ದಾರಿಯಿಂದ ವರ್ತಿಸಿದ ಆರೋಪದಲ್ಲಿ ವಿಧಾನ ಪರಿಷತ್ ಕಾರ್ಯದರ್ಶಿ ಕೆ.ಆರ್. ಮಹಾಲಕ್ಷ್ಮೀ ಅವರಿಗೆ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿಯವರು ಶೋಕಾಸ್ ನೋಟಿಸ್ ನೀಡಿದ್ದಾರೆ.
ಬುಧವಾರವೇ ನೋಟಿಸ್ ನೀಡಿರುವ ಸಭಾಪತಿ, ಸೂಕ್ತ ದಾಖಲೆಗಳೊಂದಿಗೆ 48 ಗಂಟೆಗಳೊಳಗೆ ಉತ್ತರ ನೀಡುವಂತೆ ಕಾರ್ಯದರ್ಶಿಗೆ ಸೂಚಿಸಿದ್ದಾರೆ. ‘‘ಡಿ.15ರಂದು ನಾನು ಸದನಕ್ಕೆ ಬರದಂತೆ ತಡೆದಿರುವುದು ಮತ್ತು ಕಲಾಪಗಳ ನಿಯಮಾವಳಿಗಳನ್ನು ಗಾಳಿಗೆ ತೂರಿ ವ್ಯತಿರಿಕ್ತವಾಗಿ ವರ್ತಿಸಿರುವ ಘಟನೆ ಕುರಿತು ಸಮೂಹ ಮಾಧ್ಯಮಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಈ ಘಟನೆಯಿಂದ ಶತಮಾನದ ಇತಿಹಾಸವುಳ್ಳ ವಿಧಾನ ಪರಿಷತ್ತಿನ ಗೌರವ, ಸಂಪ್ರದಾಯ ಮತ್ತು ಪರಂಪರೆಗೆ ಧಕ್ಕೆಯಾಗಿದೆ ಎಂದು ಸಭಾಪತಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.


ಡಿ.15ರಂದು ಕೋರಂ ಬೆಲ್ ಮುಗಿಯುವ ಮುನ್ನವೇ ಉಪ ಸಭಾಪತಿಯವರು ಸಭಾಪತಿ ಪೀಠ ಏರಿದ್ದರು. ನಾನು ಸದನಕ್ಕೆ ಬರದಂತೆ ಬಾಗಿಲು ಮುಚ್ಚಿ ಅಡ್ಡಿಪಡಿಸಲಾಗಿತ್ತು. ನಿಯಮಬಾಹಿರವಾಗಿ ಪೀಠದಲ್ಲಿ ಕುಳಿತಿದ್ದ ಉಪ ಸಭಾಪತಿಗೆ ದಾಖಲೆಗಳನ್ನು ಒದಗಿಸುವ ಮೂಲಕ, ಕಾನೂನಿಗೆ ವಿರುದ್ಧವಾಗಿ ಸದನ ನಡೆಸಲು ಪಿತೂರಿ ಮಾಡಿದ್ದನ್ನು ಹಲವು ಸಾಕ್ಷ್ಯಗಳಲ್ಲಿ ಗಮನಿಸಿರುತ್ತೇನೆ ಎಂದು ಸಭಾಪತಿ ನೋಟಿಸ್ ನಲ್ಲಿ ತಿಳಿಸಿದ್ದಾರೆ.
ನಿಯಮಬಾಹಿರ, ಕರ್ತವ್ಯ ನಿರ್ಲಕ್ಷ, ಬೇಜವಾಬ್ದಾರಿ ಮತ್ತು ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೆ ಅಧಿಕಾರ ವ್ಯಾಪ್ತಿ ಮೀರಿರುವ ನಿಮ್ಮ ವಿರುದ್ಧ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿ ಅಡಿಯಲ್ಲಿ ಏಕೆ ಕ್ರಮ ಜರುಗಿಸಬಾರದು?’’ ಎಂದು ನೋಟಿಸ್ನಲ್ಲಿ ಕೇಳಿದ್ದಾರೆ.

ಸಾರ್ವಜನಿಕ ಚರ್ಚೆ, ಟೀಕೆ, ಪತ್ರಿಕಾ ಸಂಪಾದಕೀಯಗಳು, ಸದನದ ಹಿಂದಿನ ಸಭಾಪತಿಯವರ ಅಭಿಪ್ರಾಯಗಳಿಗೆ ಸದನದ ಮುಖ್ಯಸ್ಥನಾದ ನಾನು ನೈಜ ಸಂಗತಿಗಳ ಆಧಾರದಲ್ಲಿ ವಿವರಣೆ ನೀಡಬೇಕಿದೆ. ಆದ್ದರಿಂದ ನಾನು ಸದನಕ್ಕೆ ಬಂದು ಕಲಾಪವನ್ನು ಮುಂದೂಡುವ ವರೆಗೆ ನನ್ನ ಅನುಪಸ್ಥಿತಿಯಲ್ಲಿ ಮತ್ತು ಕಲಾಪ ಮುಂದೂಡಿ ನಿರ್ಗಮಿಸಿದ ಬಳಿಕ ನಡೆದ ಘಟನಾವಳಿಗಳಿಗೆ ನೀವು ಪ್ರತ್ಯಕ್ಷದರ್ಶಿಯಾಗಿದ್ದಿರಿ. ಈ ಘಟನೆಗಳಿಗೆ ಸಂಬಂಧಿಸಿದ ಸಂಕ್ಷಿಪ್ತ ವರದಿಯನ್ನು ಕೂಡಲೇ ಸಲ್ಲಿಸಬೇಕು ಎಂದು ಪತ್ರದಲ್ಲಿ ಸಭಾಪತಿ ಸೂಚಿಸಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 05:32 pm
Mangalore Correspondent
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm