ಬ್ರೇಕಿಂಗ್ ನ್ಯೂಸ್
18-12-20 12:16 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.18: ವಿಧಾನ ಪರಿಷತ್ ಸದನದಲ್ಲಿ ಡಿ.15ರಂದು ನಡೆದ ಘಟನೆ ಹಿನ್ನೆಲೆಯಲ್ಲಿ ಮತ್ತು ಅಂದಿನ ಅಧಿವೇಶನ ಸಂದರ್ಭ ಬೇಜವಾಬ್ದಾರಿಯಿಂದ ವರ್ತಿಸಿದ ಆರೋಪದಲ್ಲಿ ವಿಧಾನ ಪರಿಷತ್ ಕಾರ್ಯದರ್ಶಿ ಕೆ.ಆರ್. ಮಹಾಲಕ್ಷ್ಮೀ ಅವರಿಗೆ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿಯವರು ಶೋಕಾಸ್ ನೋಟಿಸ್ ನೀಡಿದ್ದಾರೆ.
ಬುಧವಾರವೇ ನೋಟಿಸ್ ನೀಡಿರುವ ಸಭಾಪತಿ, ಸೂಕ್ತ ದಾಖಲೆಗಳೊಂದಿಗೆ 48 ಗಂಟೆಗಳೊಳಗೆ ಉತ್ತರ ನೀಡುವಂತೆ ಕಾರ್ಯದರ್ಶಿಗೆ ಸೂಚಿಸಿದ್ದಾರೆ. ‘‘ಡಿ.15ರಂದು ನಾನು ಸದನಕ್ಕೆ ಬರದಂತೆ ತಡೆದಿರುವುದು ಮತ್ತು ಕಲಾಪಗಳ ನಿಯಮಾವಳಿಗಳನ್ನು ಗಾಳಿಗೆ ತೂರಿ ವ್ಯತಿರಿಕ್ತವಾಗಿ ವರ್ತಿಸಿರುವ ಘಟನೆ ಕುರಿತು ಸಮೂಹ ಮಾಧ್ಯಮಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಈ ಘಟನೆಯಿಂದ ಶತಮಾನದ ಇತಿಹಾಸವುಳ್ಳ ವಿಧಾನ ಪರಿಷತ್ತಿನ ಗೌರವ, ಸಂಪ್ರದಾಯ ಮತ್ತು ಪರಂಪರೆಗೆ ಧಕ್ಕೆಯಾಗಿದೆ ಎಂದು ಸಭಾಪತಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.


ಡಿ.15ರಂದು ಕೋರಂ ಬೆಲ್ ಮುಗಿಯುವ ಮುನ್ನವೇ ಉಪ ಸಭಾಪತಿಯವರು ಸಭಾಪತಿ ಪೀಠ ಏರಿದ್ದರು. ನಾನು ಸದನಕ್ಕೆ ಬರದಂತೆ ಬಾಗಿಲು ಮುಚ್ಚಿ ಅಡ್ಡಿಪಡಿಸಲಾಗಿತ್ತು. ನಿಯಮಬಾಹಿರವಾಗಿ ಪೀಠದಲ್ಲಿ ಕುಳಿತಿದ್ದ ಉಪ ಸಭಾಪತಿಗೆ ದಾಖಲೆಗಳನ್ನು ಒದಗಿಸುವ ಮೂಲಕ, ಕಾನೂನಿಗೆ ವಿರುದ್ಧವಾಗಿ ಸದನ ನಡೆಸಲು ಪಿತೂರಿ ಮಾಡಿದ್ದನ್ನು ಹಲವು ಸಾಕ್ಷ್ಯಗಳಲ್ಲಿ ಗಮನಿಸಿರುತ್ತೇನೆ ಎಂದು ಸಭಾಪತಿ ನೋಟಿಸ್ ನಲ್ಲಿ ತಿಳಿಸಿದ್ದಾರೆ.
ನಿಯಮಬಾಹಿರ, ಕರ್ತವ್ಯ ನಿರ್ಲಕ್ಷ, ಬೇಜವಾಬ್ದಾರಿ ಮತ್ತು ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೆ ಅಧಿಕಾರ ವ್ಯಾಪ್ತಿ ಮೀರಿರುವ ನಿಮ್ಮ ವಿರುದ್ಧ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿ ಅಡಿಯಲ್ಲಿ ಏಕೆ ಕ್ರಮ ಜರುಗಿಸಬಾರದು?’’ ಎಂದು ನೋಟಿಸ್ನಲ್ಲಿ ಕೇಳಿದ್ದಾರೆ.

ಸಾರ್ವಜನಿಕ ಚರ್ಚೆ, ಟೀಕೆ, ಪತ್ರಿಕಾ ಸಂಪಾದಕೀಯಗಳು, ಸದನದ ಹಿಂದಿನ ಸಭಾಪತಿಯವರ ಅಭಿಪ್ರಾಯಗಳಿಗೆ ಸದನದ ಮುಖ್ಯಸ್ಥನಾದ ನಾನು ನೈಜ ಸಂಗತಿಗಳ ಆಧಾರದಲ್ಲಿ ವಿವರಣೆ ನೀಡಬೇಕಿದೆ. ಆದ್ದರಿಂದ ನಾನು ಸದನಕ್ಕೆ ಬಂದು ಕಲಾಪವನ್ನು ಮುಂದೂಡುವ ವರೆಗೆ ನನ್ನ ಅನುಪಸ್ಥಿತಿಯಲ್ಲಿ ಮತ್ತು ಕಲಾಪ ಮುಂದೂಡಿ ನಿರ್ಗಮಿಸಿದ ಬಳಿಕ ನಡೆದ ಘಟನಾವಳಿಗಳಿಗೆ ನೀವು ಪ್ರತ್ಯಕ್ಷದರ್ಶಿಯಾಗಿದ್ದಿರಿ. ಈ ಘಟನೆಗಳಿಗೆ ಸಂಬಂಧಿಸಿದ ಸಂಕ್ಷಿಪ್ತ ವರದಿಯನ್ನು ಕೂಡಲೇ ಸಲ್ಲಿಸಬೇಕು ಎಂದು ಪತ್ರದಲ್ಲಿ ಸಭಾಪತಿ ಸೂಚಿಸಿದ್ದಾರೆ.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm