ಬ್ರೇಕಿಂಗ್ ನ್ಯೂಸ್
18-03-25 02:30 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.18: ರಸ್ತೆ ಕಾಮಗಾರಿ ವೇಳೆ ವಿದ್ಯುತ್ ಕಂಬ ಮುರಿದು ಬಿದ್ದು ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೈಯ್ಯಪ್ಪನಹಳ್ಳಿಯಲ್ಲಿ ನಡೆದಿದೆ. ಸುದ್ದಗುಂಟೆಪಾಳ್ಯ ನಿವಾಸಿಗಳಾದ ಸುಮತಿ (35) ಹಾಗೂ ಸೋನಿ ಕುಮಾರಿ (35) ಮೃತಪಟ್ಟಿದ್ದಾರೆ. ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ.
ಸುದ್ದಗುಂಟೆಪಾಳ್ಯ ಮುಖ್ಯರಸ್ತೆಯ ದುರಸ್ತಿ ಕಾಮಗಾರಿ ನಡೆಯುತ್ತಿದ್ದಾಗ ಜೆಸಿಬಿ ವಾಹನ ಹಿಮ್ಮುಖವಾಗಿ ಚಲಿಸುವಾಗ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಇದರಿಂದ ವಿದ್ಯುತ್ ಕಂಬ ಮುರಿದು ನಡೆದು ಬರುತ್ತಿದ್ದ ಇಬ್ಬರು ಮಹಿಳೆಯರ ಮೇಲೆ ಬಿದ್ದಿದೆ. ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಓರ್ವ ಮಹಿಳೆ ನಾಲ್ಕು ತಿಂಗಳ ಗರ್ಭಿಣಿ:
ಬಿಹಾರದ ಸೋನಿ ಕುಮಾರಿ ಕಳೆದ ಎಂಟು ವರ್ಷಗಳಿಂದ ಇಬ್ಬರು ಮಕ್ಕಳೊಂದಿಗೆ ಬೆಂಗಳೂರಿನಲ್ಲಿ ನೆಲೆಸಿದ್ದರು. ಸದ್ಯ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದರು ಎಂದು ತಿಳಿದು ಬಂದಿದೆ. ತಮಿಳುನಾಡಿನ ಸುಮತಿ, ಪತಿ ಹಾಗೂ ಇಬ್ಬರು ಮಕ್ಕಳೊಂದಿಗೆ ಸುದ್ದಗುಂಟೆಪಾಳ್ಯದಲ್ಲಿ ನೆಲೆಸಿದ್ದರು. ಇಬ್ಬರೂ ಮಹಿಳೆಯರು ಸೋಮವಾರ ಸಂಜೆ ತಮ್ಮ ಮಕ್ಕಳನ್ನು ಟ್ಯೂಷನ್ನಿಂದ ಕರೆದುಕೊಂಡು ಬರುತ್ತಿದ್ದಾಗ ಅವಘಡ ಸಂಭವಿಸಿದೆ.
ರಸ್ತೆ ಕಾಮಗಾರಿಯ ವೇಳೆ ಜೆಸಿಬಿ ಡ್ರೈವರ್ ಕಿವಿಗೆ ಹೆಡ್ಫೋನ್ ಹಾಕಿಕೊಂಡು ಕೆಲಸ ಮಾಡುತ್ತಿದ್ದ. ಈ ವೇಳೆ ಲೈಟ್ ಕಂಬದಿಂದ ಮನೆಗೆ ಬೇರೆ ಕಡೆಗೆ ಕನೆಕ್ಟ್ ಮಾಡಿದ್ದ ವೈಯರ್ಗೆ ಜೆಸಿಬಿಯ ಮುಂಭಾಗ ಟಚ್ ಆಗಿದೆ. ಜನ ಜೋರಾಗಿ ಕೂಗಿಕೊಂಡರೂ ಡ್ರೈವರ್ ಕೇಳಿಸಿಕೊಳ್ಳದೇ ವೈಯರ್ ಎಳೆದಿರುವುದೇ ಘಟನೆಗೆ ಕಾರಣ ಎಂದು ಆರೋಪಿಸಲಾಗಿದೆ.
ಬೈಯ್ಯಪ್ಪನಹಳ್ಳಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ಜೆಸಿಬಿ ಯಂತ್ರವನ್ನು ಜಪ್ತಿ ಮಾಡಿದ್ದಾರೆ. ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಬೈಯಪ್ಪನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
JCB Driver Rams Into Electric Pole, Two killed Including Pregnant Woman in Bangalore at Sadduguntepalya.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 08:12 pm
Mangalore Correspondent
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm