ಬ್ರೇಕಿಂಗ್ ನ್ಯೂಸ್
18-03-25 02:30 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.18: ರಸ್ತೆ ಕಾಮಗಾರಿ ವೇಳೆ ವಿದ್ಯುತ್ ಕಂಬ ಮುರಿದು ಬಿದ್ದು ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೈಯ್ಯಪ್ಪನಹಳ್ಳಿಯಲ್ಲಿ ನಡೆದಿದೆ. ಸುದ್ದಗುಂಟೆಪಾಳ್ಯ ನಿವಾಸಿಗಳಾದ ಸುಮತಿ (35) ಹಾಗೂ ಸೋನಿ ಕುಮಾರಿ (35) ಮೃತಪಟ್ಟಿದ್ದಾರೆ. ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ.
ಸುದ್ದಗುಂಟೆಪಾಳ್ಯ ಮುಖ್ಯರಸ್ತೆಯ ದುರಸ್ತಿ ಕಾಮಗಾರಿ ನಡೆಯುತ್ತಿದ್ದಾಗ ಜೆಸಿಬಿ ವಾಹನ ಹಿಮ್ಮುಖವಾಗಿ ಚಲಿಸುವಾಗ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಇದರಿಂದ ವಿದ್ಯುತ್ ಕಂಬ ಮುರಿದು ನಡೆದು ಬರುತ್ತಿದ್ದ ಇಬ್ಬರು ಮಹಿಳೆಯರ ಮೇಲೆ ಬಿದ್ದಿದೆ. ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಓರ್ವ ಮಹಿಳೆ ನಾಲ್ಕು ತಿಂಗಳ ಗರ್ಭಿಣಿ:
ಬಿಹಾರದ ಸೋನಿ ಕುಮಾರಿ ಕಳೆದ ಎಂಟು ವರ್ಷಗಳಿಂದ ಇಬ್ಬರು ಮಕ್ಕಳೊಂದಿಗೆ ಬೆಂಗಳೂರಿನಲ್ಲಿ ನೆಲೆಸಿದ್ದರು. ಸದ್ಯ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದರು ಎಂದು ತಿಳಿದು ಬಂದಿದೆ. ತಮಿಳುನಾಡಿನ ಸುಮತಿ, ಪತಿ ಹಾಗೂ ಇಬ್ಬರು ಮಕ್ಕಳೊಂದಿಗೆ ಸುದ್ದಗುಂಟೆಪಾಳ್ಯದಲ್ಲಿ ನೆಲೆಸಿದ್ದರು. ಇಬ್ಬರೂ ಮಹಿಳೆಯರು ಸೋಮವಾರ ಸಂಜೆ ತಮ್ಮ ಮಕ್ಕಳನ್ನು ಟ್ಯೂಷನ್ನಿಂದ ಕರೆದುಕೊಂಡು ಬರುತ್ತಿದ್ದಾಗ ಅವಘಡ ಸಂಭವಿಸಿದೆ.
ರಸ್ತೆ ಕಾಮಗಾರಿಯ ವೇಳೆ ಜೆಸಿಬಿ ಡ್ರೈವರ್ ಕಿವಿಗೆ ಹೆಡ್ಫೋನ್ ಹಾಕಿಕೊಂಡು ಕೆಲಸ ಮಾಡುತ್ತಿದ್ದ. ಈ ವೇಳೆ ಲೈಟ್ ಕಂಬದಿಂದ ಮನೆಗೆ ಬೇರೆ ಕಡೆಗೆ ಕನೆಕ್ಟ್ ಮಾಡಿದ್ದ ವೈಯರ್ಗೆ ಜೆಸಿಬಿಯ ಮುಂಭಾಗ ಟಚ್ ಆಗಿದೆ. ಜನ ಜೋರಾಗಿ ಕೂಗಿಕೊಂಡರೂ ಡ್ರೈವರ್ ಕೇಳಿಸಿಕೊಳ್ಳದೇ ವೈಯರ್ ಎಳೆದಿರುವುದೇ ಘಟನೆಗೆ ಕಾರಣ ಎಂದು ಆರೋಪಿಸಲಾಗಿದೆ.
ಬೈಯ್ಯಪ್ಪನಹಳ್ಳಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ಜೆಸಿಬಿ ಯಂತ್ರವನ್ನು ಜಪ್ತಿ ಮಾಡಿದ್ದಾರೆ. ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಬೈಯಪ್ಪನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
JCB Driver Rams Into Electric Pole, Two killed Including Pregnant Woman in Bangalore at Sadduguntepalya.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 01:29 pm
HK News Desk
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
18-06-25 10:24 am
Mangalore Correspondent
Mangalore DC Mullai Muhilan Transferred, Dars...
17-06-25 09:57 pm
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm