ಬ್ರೇಕಿಂಗ್ ನ್ಯೂಸ್
18-03-25 02:30 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.18: ರಸ್ತೆ ಕಾಮಗಾರಿ ವೇಳೆ ವಿದ್ಯುತ್ ಕಂಬ ಮುರಿದು ಬಿದ್ದು ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೈಯ್ಯಪ್ಪನಹಳ್ಳಿಯಲ್ಲಿ ನಡೆದಿದೆ. ಸುದ್ದಗುಂಟೆಪಾಳ್ಯ ನಿವಾಸಿಗಳಾದ ಸುಮತಿ (35) ಹಾಗೂ ಸೋನಿ ಕುಮಾರಿ (35) ಮೃತಪಟ್ಟಿದ್ದಾರೆ. ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ.
ಸುದ್ದಗುಂಟೆಪಾಳ್ಯ ಮುಖ್ಯರಸ್ತೆಯ ದುರಸ್ತಿ ಕಾಮಗಾರಿ ನಡೆಯುತ್ತಿದ್ದಾಗ ಜೆಸಿಬಿ ವಾಹನ ಹಿಮ್ಮುಖವಾಗಿ ಚಲಿಸುವಾಗ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಇದರಿಂದ ವಿದ್ಯುತ್ ಕಂಬ ಮುರಿದು ನಡೆದು ಬರುತ್ತಿದ್ದ ಇಬ್ಬರು ಮಹಿಳೆಯರ ಮೇಲೆ ಬಿದ್ದಿದೆ. ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಓರ್ವ ಮಹಿಳೆ ನಾಲ್ಕು ತಿಂಗಳ ಗರ್ಭಿಣಿ:
ಬಿಹಾರದ ಸೋನಿ ಕುಮಾರಿ ಕಳೆದ ಎಂಟು ವರ್ಷಗಳಿಂದ ಇಬ್ಬರು ಮಕ್ಕಳೊಂದಿಗೆ ಬೆಂಗಳೂರಿನಲ್ಲಿ ನೆಲೆಸಿದ್ದರು. ಸದ್ಯ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದರು ಎಂದು ತಿಳಿದು ಬಂದಿದೆ. ತಮಿಳುನಾಡಿನ ಸುಮತಿ, ಪತಿ ಹಾಗೂ ಇಬ್ಬರು ಮಕ್ಕಳೊಂದಿಗೆ ಸುದ್ದಗುಂಟೆಪಾಳ್ಯದಲ್ಲಿ ನೆಲೆಸಿದ್ದರು. ಇಬ್ಬರೂ ಮಹಿಳೆಯರು ಸೋಮವಾರ ಸಂಜೆ ತಮ್ಮ ಮಕ್ಕಳನ್ನು ಟ್ಯೂಷನ್ನಿಂದ ಕರೆದುಕೊಂಡು ಬರುತ್ತಿದ್ದಾಗ ಅವಘಡ ಸಂಭವಿಸಿದೆ.
ರಸ್ತೆ ಕಾಮಗಾರಿಯ ವೇಳೆ ಜೆಸಿಬಿ ಡ್ರೈವರ್ ಕಿವಿಗೆ ಹೆಡ್ಫೋನ್ ಹಾಕಿಕೊಂಡು ಕೆಲಸ ಮಾಡುತ್ತಿದ್ದ. ಈ ವೇಳೆ ಲೈಟ್ ಕಂಬದಿಂದ ಮನೆಗೆ ಬೇರೆ ಕಡೆಗೆ ಕನೆಕ್ಟ್ ಮಾಡಿದ್ದ ವೈಯರ್ಗೆ ಜೆಸಿಬಿಯ ಮುಂಭಾಗ ಟಚ್ ಆಗಿದೆ. ಜನ ಜೋರಾಗಿ ಕೂಗಿಕೊಂಡರೂ ಡ್ರೈವರ್ ಕೇಳಿಸಿಕೊಳ್ಳದೇ ವೈಯರ್ ಎಳೆದಿರುವುದೇ ಘಟನೆಗೆ ಕಾರಣ ಎಂದು ಆರೋಪಿಸಲಾಗಿದೆ.
ಬೈಯ್ಯಪ್ಪನಹಳ್ಳಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ಜೆಸಿಬಿ ಯಂತ್ರವನ್ನು ಜಪ್ತಿ ಮಾಡಿದ್ದಾರೆ. ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಬೈಯಪ್ಪನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
JCB Driver Rams Into Electric Pole, Two killed Including Pregnant Woman in Bangalore at Sadduguntepalya.
18-10-25 09:11 pm
HK News Desk
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
ಆರೆಸ್ಸೆಸ್ ಚಟುವಟಿಕೆ ಕಡಿವಾಣಕ್ಕೆ ಕೌಂಟರ್ ; ಸಾರ್ವಜ...
17-10-25 05:27 pm
ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಬ್ರೇಕ...
16-10-25 09:04 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
18-10-25 11:01 pm
Mangalore Correspondent
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
Ullal, Someshwara, Pillar: ಸೋಮೇಶ್ವರ ಪಿಲಾರಿನಲ್...
17-10-25 09:36 pm
1971ರ ಭಾರತ - ಪಾಕ್ ಯುದ್ಧದಲ್ಲಿ ಹೆಲಿಕಾಪ್ಟರ್ ನಿಂದ...
16-10-25 10:37 pm
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
19-10-25 01:26 pm
Bangalore Correspondent
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm
Fake Gold Scam, Belthangady Anugraha Society:...
18-10-25 03:27 pm
Illegal Arms Case, Mahesh Shetty Timarodi: ಅಕ...
18-10-25 01:52 pm