ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ 14 ಎಕರೆ ಭೂ ಒತ್ತುವರಿ ; ತೆರವಿಗೆ ಮುಂದಾದ ರಾಜ್ಯ ಸರ್ಕಾರ, ಮತ್ತೆ ರಾಜಕೀಯ ಜಟಾಪಟಿಗೆ ವೇದಿಕೆ   

18-03-25 10:34 pm       Bangalore Correspondent   ಕರ್ನಾಟಕ

ಕೇಂದ್ರ ಸಚಿವ ಹೆಚ್​​. ಡಿ.ಕುಮಾರಸ್ವಾಮಿ ವಿರುದ್ಧ ರಾಮನಗರದ ಬಿಡದಿ ಎಸ್ಟೇಟ್ ಬಳಿಯಲ್ಲಿ ಭೂ ಒತ್ತುವರಿ ಮಾಡಿಕೊಂಡ ಆರೋಪ ಕೇಳಿಬಂದಿತ್ತು. ಒತ್ತುವರಿ ತೆರವು ಮಾಡುವಂತೆ ಹೈಕೋರ್ಟ್ ಆದೇಶವನ್ನೂ ನೀಡಿತ್ತು.

ಬೆಂಗಳೂರು, ಮಾ.18: ಕೇಂದ್ರ ಸಚಿವ ಹೆಚ್​​. ಡಿ.ಕುಮಾರಸ್ವಾಮಿ ವಿರುದ್ಧ ರಾಮನಗರದ ಬಿಡದಿ ಎಸ್ಟೇಟ್ ಬಳಿಯಲ್ಲಿ ಭೂ ಒತ್ತುವರಿ ಮಾಡಿಕೊಂಡ ಆರೋಪ ಕೇಳಿಬಂದಿತ್ತು. ಒತ್ತುವರಿ ತೆರವು ಮಾಡುವಂತೆ ಹೈಕೋರ್ಟ್ ಆದೇಶವನ್ನೂ ನೀಡಿತ್ತು. ಇದರಂತೆ,  ರಾಜ್ಯ ಸರ್ಕಾರ ಕಂದಾಯ ಇಲಾಖೆ ಮೂಲಕ ಒತ್ತುವರಿ ಕಾರ್ಯಾಚರಣೆಗೆ ಮುಂದಾಗಿದೆ.

ಕಂದಾಯ ಇಲಾಖೆ ಒತ್ತುವರಿ ತೆರವು ಕಾರ್ಯಾಚರಣೆಗೆ ಮುಂದಾಗಿರುವುದು ಜಟಾಪಟಿಗೆ ಕಾರಣವಾಗಲಿದೆ. ಪ್ರಭಾವಿ ರಾಜಕಾರಣಿಯೊಬ್ಬರ ವಿರುದ್ಧ ಒತ್ತುವರಿ ಕೆಲವು ಕಾರ್ಯಾಚರಣೆಗೆ ಮುಂದಾಗಿರುವುದು ಅಪರೂಪದ ಪ್ರಕರಣವಾಗಿದೆ.

ಪ್ರಕರಣ ಸಂಬಂಧ ಕಂದಾಯ ಇಲಾಖೆ ಎಸ್​ಐಟಿ ರಚನೆ ಮಾಡಿಕೊಂಡಿತ್ತು. ಬಿಡದಿಯ ಕೇತಗಾನಹಳ್ಳಿಯ ಸರ್ವೆ ನಂಬರ್ 7,8,9,10,16,17 ಮತ್ತು 79ರಲ್ಲಿ ಭೂ ಒತ್ತುವರಿಯಾಗಿದೆ ಎಂದು ಆರೋಪ ಕೇಳಿಬಂದಿತ್ತು. 14 ಎಕರೆ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಳ್ಳಲಾಗಿದೆ ಎಂಬ ಆರೋಪದ ವಿಚಾರದಲ್ಲಿ ತೆರವು ಕಾರ್ಯಾಚರಣೆ ಮಾಡಲು ಹೈಕೋರ್ಟ್ ಆದೇಶ ನೀಡಿತ್ತು.

ಕಂದಾಯ ಇಲಾಖೆ ಹಾಗೂ ಸರ್ವೆ ಇಲಾಖೆಯಿಂದ ಜಂಟಿ ಸರ್ವೇ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿ ಒತ್ತುವರಿ ಭೂಮಿಯ ತೆರವು ಕಾರ್ಯಾಚರಣೆಗೆ ಕಂದಾಯ ಇಲಾಖೆ ಮುಂದಾಗಿದೆ. ಹೆಚ್​​.ಡಿ ಕುಮಾರಸ್ವಾಮಿ ಅವರ ತೋಟದ ಮನೆಯ ಸುತ್ತಮುತ್ತಲಿನ ಒತ್ತುವರಿ ಜಾಗದ ತೆರವಿಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

Union Minister for Steel and Heavy Industries H D Kumaraswamy suffered a setback on Tuesday as Karnataka’s revenue department initiated measures to clear land at Kethaganahalli in Ramanagara district that he had allegedly encroached on. He has denied any wrongdoing.