ಬ್ರೇಕಿಂಗ್ ನ್ಯೂಸ್
18-03-25 11:02 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.18 : ಗಡಿಭಾಗದಲ್ಲಿ ಎಂಇಎಸ್ ಪುಂಡಾಟಿಕೆಗೆ ಕಡಿವಾಣ ಹಾಕಬೇಕು, ಖಾಸಗಿ ಕ್ಷೇತ್ರಗಳಲ್ಲು ಕನ್ನಡಿಗರಿಗೆ ಉದ್ಯೋಗ ನೀಡಬೇಕು, ಕನ್ನಡಿಗರ ಮೇಲೆ ಪರಭಾಷಿಕರ ದಾಳಿ ನಿಲ್ಲಿಸ ಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಆಗ್ರಹಿಸಿ ಇದೇ ಮಾ.22ರಂದು ಕರ್ನಾಟಕ ಬಂದ್ ಮಾಡುವುದಾಗಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
ಕರ್ನಾಟಕ ಬಂದ್ಗೆ ಸಂಬಂಧಿಸಿ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಮಂಗಳವಾರ ಸಭೆ ನಡೆಸಿದ್ದು ಹಲವು ಕನ್ನಡಪರ ಸಂಘಟನೆಯ ಮುಖಂಡರು ಪಾಲ್ಗೊಂಡಿದ್ದರು. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಾಟಾಳ್ ನಾಗರಾಜ್, ಅಂದು ಬೆಳಗ್ಗೆ 6ರಿಂದ ಸಂಜೆ 6 ಗಂಟೆ ವರೆಗೂ ಕರ್ನಾಟಕ ಬಂದ್ ನಡೆಸಲಾಗುವುದು. ಬೆಳಗ್ಗೆ 10:30ಕ್ಕೆ ಟೌನ್ ಹಾಲ್ನಿಂದ ಫ್ರೀಡಂ ಪಾರ್ಕ್ ತನಕ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದೇವೆ ಎಂದು ತಿಳಿಸಿದರು.
ಯಾವುದೇ ಕಾರಣಕ್ಕೂ ಬಂದ್ ಹಿಂಪಡೆಯುವುದಿಲ್ಲ. ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ಪದೇ ಪದೇ ಹಲ್ಲೆ ನಡೆಯುತ್ತಿದೆ. ಈ ಬಂದ್ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಗಮನ ಸೆಳೆಯಲು ನಿರ್ಧರಿಸಲಾಗಿದೆ. ಬಹುತೇಕ ಕನ್ನಡ ಪರ ಸಂಘಟನೆಗಳು ಬಂದ್ಗೆ ಬೆಂಬಲ ಸೂಚಿಸಿವೆ. ಆಟೋ ಚಾಲಕರ ಸಂಘಟನೆಗಳು, ಕ್ಯಾಬ್, ಒಲಾ, ಉಬರ್, ಹೋಟೆಲ್ ಮಾಲೀಕರು ಸೇರಿ ಎಲ್ಲರೂ ಬಂದ್ಗೆ ಬೆಂಬಲ ನೀಡಬೇಕು. ನಮ್ಮ ಮೆಟ್ರೋ, ಮಾಲ್ಗಳೂ ಬಂದ್ ಆಗಬೇಕು. ಇಲ್ಲದಿದ್ದರೇ ನಾವೇ ಬಂದ್ ಮಾಡಿಸುತ್ತೇವೆ ಎಂದು ಎಚ್ಚರಿಕೆ ನೀಡಿದರಲ್ಲದೇ ಕರ್ನಾಟಕ ಬಂದ್ಗೆ ನಮ್ಮದು ನೈತಿಕ ಬೆಂಬಲ ಅನ್ನುವವರು ಮನೆಯಲ್ಲೇ ಕುಳಿತುಕೊಳ್ಳಿ ಎಂದು ಹೇಳಿದರು.
ರಾಜ್ಯದಲ್ಲಿ ದಿನೇ ದಿನೇ ಕನ್ನಡಿಗರ ಮೇಲೆ ಪರಭಾಷಿಗರ ದಾಳಿ ಹೆಚ್ಚಾಗುತ್ತಿದೆ. ಬೆಂಗಳೂರು, ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ಹಲ್ಲೆ ನಡೆಯುತ್ತಿದೆ. ಬಿಹಾರ, ಬಂಗಾಳ, ತಮಿಳು, ತೆಲುಗು, ಮಾರ್ವಾಡಿಯವರು ರಾಜ್ಯದಲ್ಲಿ ಸುಮಾರು 2 ಕೋಟಿ ಜನ ಇದ್ದಾರೆ. ತಲೆಬೋಳಿಸೋದ್ರಿಂದ ಹಿಡಿದು ಪಾನಿಪುರಿ ಮಾರೋನು ಕೂಡ ಅನ್ಯ ರಾಜ್ಯದವರಿದ್ದಾರೆ. ಇದನ್ನೆಲ್ಲ ಯಾರು ಕೇಳೋದು? ಇದೆಲ್ಲದರ ವಿರುದ್ಧ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಅಲ್ಲದೇ ಎಂಇಎಸ್, ಶಿವಸೇನೆಯನ್ನು ರಾಜ್ಯದಲ್ಲಿ ನಿಷೇಧ ಮಾಡಬೇಕು. ಬೆಳಗಾವಿ ನಮ್ಮದು. ಬೆಳಗಾವಿಯಲ್ಲಿ ಶಿವಾಜಿ, ಸಂಭಾಜಿ ಪ್ರತಿಮೆ ಬೇಕಾ? ಪರಭಾಷಿಗರು ಕನ್ನಡಿಗರ ಮೇಲೆ ದೌರ್ಜನ್ಯ ನಡೆಸುವುದನ್ನು ನಿಲ್ಲಿಸಬೇಕು. ಕರ್ನಾಟಕದಲ್ಲಿದ್ದು ಕನ್ನಡಿಗರ ಮೇಲೆ ಹಲ್ಲೆ ನಡೆಸುವವರು ರಾಜ್ಯ ಬಿಟ್ಟು ಹೋಗಬೇಕು ಎಂದು ಆಗ್ರಹಿಸಿದರು.
Pro-Kannada organisations have called for a Karnataka bandh on March 22 to protest the recent assault on a bus crew and the "brazen violence" by pro-Marathi activists
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm