ಬ್ರೇಕಿಂಗ್ ನ್ಯೂಸ್
19-03-25 12:44 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.19 : ''ಹೆಂಗಸರಿಗೆ ಮಾಸಿಕ 2 ಸಾವಿರ, ಓಡಾಟಕ್ಕೆ ಬಸ್ ಫ್ರೀ ಎಲ್ಲವನ್ನೂ ಕೊಟ್ಟಿದ್ದೀರಿ. ಇದಕ್ಕೆ ಕೊಡುತ್ತಿರುವುದು ಖಜಾನೆ ದುಡ್ಡು ಅಲ್ಲವೇ? ಹೆಂಗಸರಿಗೆ ಖುಷಿಪಡಿಸುವಂತೆ ಕುಡಿಯುವ ಗಂಡಸರಿಗೂ ವಾರಕ್ಕೆ ಎರಡು ಬಾಟಲಿ ಮದ್ಯ ಫ್ರೀ ಕೊಡಿ. ಸೊಸೈಟಿಗಳ ಮೂಲಕ ಇದನ್ನು ಹಂಚಿಕೆ ಮಾಡಿ. ಹೀಗೆಂದು ಜೆಡಿಎಸ್ ಶಾಸಕ ಎಂ.ಟಿ ಕೃಷ್ಣಪ್ಪ ಕಾಂಗ್ರೆಸ್ ಸರ್ಕಾರಕ್ಕೆ ಸಲಹೆ ಮಾಡಿದ್ದಾರೆ.
ಬಜೆಟ್ ಮೇಲಿನ ಚರ್ಚೆ ಸಂದರ್ಭದಲ್ಲಿ ಸರಕಾರ ಮದ್ಯ ಮಾರಾಟದ ಟಾರ್ಗೆಟ್ ಹೆಚ್ಚಿಸಿ, ಅಬಕಾರಿ ಆದಾಯವನ್ನು 40 ಸಾವಿರ ಕೋಟಿಗೆ ನಿಗದಿ ಮಾಡಿರುವುದು ಪಾಪದ ಕೆಲಸವಲ್ಲವೇ? ಹೆಂಗಸರಿಗೆ ಫ್ರೀ ಕೊಟ್ಟು ಗಂಡಸರಿಂದ ಹಣ ಪೀಕುವುದು ತಪ್ಪಲ್ಲವೇ? ಸಂಪೂರ್ಣ ಪಾನ ನಿಷೇಧ ಜಾರಿ ಏಕೆ ಸಾಧ್ಯವಿಲ್ಲ? ಇಂತಹ ಹಲವು ವಾದ -ಪ್ರತಿವಾದಗಳಿಗೆ ವಿಧಾನಸಭೆ ಸಾಕ್ಷಿಯಾಯ್ತು. ಈ ವೇಳೆ, ಜೆಡಿಎಸ್ ಶಾಸಕ ಎಂಟಿ ಕೃಷ್ಣಪ್ಪ ಮತ್ತು ಕಾಂಗ್ರೆಸ್ ಶಾಸಕ ಬಿ.ಆರ್ ಪಾಟೀಲ್ ಅಬಕಾರಿ ಸುಂಕ ಹೆಚ್ಚಿಸಿ ಮದ್ಯದ ಮೂಲಕ ಆದಾಯ ಸಂಗ್ರಹಕ್ಕಿಳಿದಿರುವುದನ್ನು ವಿರೋಧಿಸಿದರು. ಅಲ್ಲದೆ, ಸಂಪೂರ್ಣ ಮದ್ಯ ನಿಷೇಧ ಯಾಕೆ ಸಾಧ್ಯವಿಲ್ಲ ಎಂದು ಪ್ರಶ್ನಿಸಿದರು.
ಕೃಷ್ಣಪ್ಪ ಮಾತಿಗೆ, ಮುಂದೆ ಚುನಾವಣೆಯಲ್ಲಿ ಗೆದ್ದು ಬಂದು ಮದ್ಯ ನಿಷೇಧ ಮಾಡಿ ಎಂದು ಸಚಿವ ಕೆ.ಜೆ.ಜಾರ್ಜ್ ಸಲಹೆ ಮಾಡಿದರು. ''ಈಗಲೇ ಈ ಸ್ಥಿತಿಯಾಗಿದೆ, ಇನ್ನು ಫ್ರೀ ಮದ್ಯ ಕೊಟ್ಟರೆ ಏನಾಗಬಹುದು? ಎಂದು ಸ್ಪೀಕರ್ ಹಾಸ್ಯ ಚಟಾಕಿ ಹಾರಿಸಿದರು. ತಮ್ಮ ವಾದವನ್ನು ಬಿಟ್ಟುಕೊಡದ ಕೃಷ್ಣಪ್ಪ, ''ಈಗೇನಾಗಿದೆ? ನಮ್ಮ 224 ಶಾಸಕರಲ್ಲಿ ಯಾರು ಕುಡಿಯಲ್ಲಾ ಹೇಳಿಬಿಡಲಿ ಎಂದು ಮರು ಪ್ರಶ್ನೆ ಹಾಕಿದರು. ಈ ಮಾತಿಗೆ ಜೆಡಿಎಸ್ ಗುಂಪಿನ ಉಪನಾಯಕಿ ಶಾರದಾ ನಾಯಕ್, 224 ಶಾಸಕರು ಎಂದು ನಮ್ಮನ್ನೂ ಯಾಕೆ ಸೇರಿಸಿಕೊಳ್ತೀರಿ ಎಂದು ಆಕ್ಷೇಪಿಸಿದರು.
ಆಡಳಿತಾರೂಢ ಕಾಂಗ್ರೆಸ್ನ ಬಿ.ಆರ್.ಪಾಟೀಲ್ ಮಾತನಾಡಿ, ನಮ್ಮ ಭಾಗದ ಮಹಿಳೆಯರು ಅನ್ನಭಾಗ್ಯ, ಗೃಹಲಕ್ಷ್ಮೀ ಸೇರಿ ಯಾವ ಉಚಿತ ಯೋಜನೆಯೂ ಬೇಡ ಸ್ವಾಮಿ.. ಮದ್ಯ ಮಾರಾಟ ಬಂದ್ ಮಾಡಿ. ನಮ್ಮ ಸಂಸಾರ ಉಳಿಸಿ ಎಂದು ಬೇಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೂ ತಂದಿದ್ದೇನೆ. ಆದರೆ, ಕೇಳಿಲ್ಲ ಎಂದು ಅಲವತ್ತುಕೊಂಡರು. ''ನನಗೊಂದು ವೇಳೆ ಸರ್ವಾಧಿಕಾರಿಯಾಗುವ ಅವಕಾಶ ಸಿಕ್ಕರೆ ಎರಡು ತಾಸಿನಲ್ಲಿ ಸಂಪೂರ್ಣ ಪಾನ ನಿಷೇಧ ಜಾರಿ ಮಾಡುತ್ತೇನೆ. ಪಾಪದ ಹಣದಿಂದ ಅಭಿವೃದ್ಧಿ ಮಾಡಬೇಕೇ? ಎಂದು ಪ್ರಶ್ನೆ ಮಾಡಿದರು.
Legislative Assembly Sparks Heated Debate Over Alcohol Ban. "Just like women are given free, give men two free bottles a week..." "Women are asking for no freebies, ban alcohol." Heated debate in the Legislative Assembly over alcohol ban. Make news tittle
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 08:12 pm
Mangalore Correspondent
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm