ಬ್ರೇಕಿಂಗ್ ನ್ಯೂಸ್
23-03-25 06:02 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.23: ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರ ಮೇಲೆ ಹನಿಟ್ರ್ಯಾಪ್ ಮಾಡಲಾಗಿದೆ ಎಂಬ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಪ್ರಕರಣ ಇದೀಗ ಕಾಂಗ್ರೆಸ್ ಹೈಕಮಾಂಡ್ ತಲುಪಿದೆ. ಹೀಗಾಗಿ ಇದೇ ವಿಚಾರ ಮುಂದಿಟ್ಟು ಕೆಲವರನ್ನು ತುಳಿಯುವ ಪ್ರಯತ್ನ ನಡೆದಿದ್ಯಾ ಎನ್ನುವ ವಿಚಾರ ಚರ್ಚೆಗೀಡಾಗಿದೆ.
ನಿನ್ನೆಯಷ್ಟೇ ರಾಜಣ್ಣ ಅವರ ಪುತ್ರ ಹಾಗೂ ಎಂಎಲ್ಸಿ ರಾಜೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ತಮ್ಮ ತಂದೆ ಮೇಲೆ ನಡೆದಿರುವ ಹನಿಟ್ರ್ಯಾಪ್ ಯತ್ನ ವಿಚಾರವನ್ನು ಪ್ರಸ್ತಾಪಿಸಿ, ಸಾಕ್ಷ್ಯವಾಗಿ ಕೆಲ ಡಿಜಿಟಲ್ ದಾಖಲೆಗಳನ್ನೂ ನೀಡಿದ್ದಾರೆ. ಅಲ್ಲದೆ, ಹನಿಟ್ರ್ಯಾಪ್ ಪ್ರಕರಣದ ಹಿಂದೆ ಪ್ರಭಾವಿ ಸಚಿವರೊಬ್ಬರ ಕೈವಾಡವಿದೆ ಎಂದೂ ಆರೋಪಿಸಿದ್ದಾರೆ ಎನ್ನಲಾಗುತ್ತಿದೆ.
ಈ ನಡುವೆ ಸಾರ್ವಜನಿಕ ಸಭೆಯಲ್ಲಿ ರಾಜೇಂದ್ರ ಈ ವಿಚಾರ ಪ್ರಸ್ತಾಪಿಸಿ ಅವರಿಗೆ ಹೆಂಡತಿ, ಮಕ್ಕಳಿಲ್ಲವೇ? ನಮಗೇಕೆ ಹನಿಟ್ರ್ಯಾಪ್ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಪ್ರಶ್ನೆ ಮಾಡಿದ್ದಾರೆ. ಗೃಹ ಸಚಿವರಿಗೆ ದೂರು ನೀಡುತ್ತೇವೆ, ಮುಖ್ಯಮಂತ್ರಿ ಏನು ಹೇಳುತ್ತಾರೋ ಅದನ್ನು ಪಾಲಿಸುತ್ತೇವೆ ಎಂದು ತಿಳಿಸಿದರು.
ಪ್ರಕರಣ ಸಂಬಂಧ ರಾಜಣ್ಣ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸದ್ಯದಲ್ಲೇ ನವದೆಹಲಿಗೆ ತೆರಳಲಿದ್ದು, ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಲಿದ್ದಾರೆಂದು ತಿಳಿದುಬಂದಿದೆ. ರಾಜಕೀಯವಾಗಿ ತಮ್ಮನ್ನು ತುಳಿಯಲು ಪಕ್ಷದ ನಾಯಕರು ಹನಿಟ್ರ್ಯಾಪ್ ಮಾಡಲು ಪಿತೂರಿ ನಡೆಸಿದ್ದಾರೆಂದು ದೂರು ಹೇಳಲಿದ್ದಾರೆಂದು ತಿಳಿದುಬಂದಿದೆ. ಹನಿಟ್ರ್ಯಾಪ್ ವಿಚಾರ ಭಾರೀ ಬಿರುಗಾಳಿ ಎಬ್ಬಿಸಿರುವುದರಿಂದ ಹೈಕಮಾಂಡ್ ನಾಯಕರು ತಮ್ಮದೇ ಮೂಲಗಳಿಂದ ಮಾಹಿತಿ ಸಂಗ್ರಹಿಸಿದ್ದು ಪ್ರಕರಣ ನಿಭಾಯಿಸಲು ತಲೆ ಕೆಡಿಸಿಕೊಂಡಿದ್ದಾರೆ.
Honey trap, consideration to lodge complaints against party members to high command leaders. The Congress high command is said to be disappointed with the manner in which the Siddaramaiah-led government in Karnataka handled the political storm that erupted in the Legislative Assembly, following Cooperation Minister K.N. Rajanna’s allegation that vested interests had honey-trapped 48 people, including legislators, central leaders, and judges.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 09:04 pm
Mangalore Correspondent
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm