ಬ್ರೇಕಿಂಗ್ ನ್ಯೂಸ್
23-03-25 11:01 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.23 : ಚಿನ್ನದ ರಿಕವರಿ ಹೆಸರಲ್ಲಿ ಚಿನ್ನದ ಗಟ್ಟಿ ಪಡೆದು ದುರ್ಬಳಕೆ ಮಾಡಿದ ಆರೋಪದಲ್ಲಿ ಪಿಎಸ್ಐ ಓರ್ವರನ್ನು ಅಮಾನತು ಮಾಡಿರುವ ಘಟನೆ ನಡೆದಿದೆ.
ಕಾಟನ್ ಪೇಟೆ ಠಾಣೆಯ ಪಿಎಸ್ಐ ಸಂತೋಷ್ ಅಮಾನತಾಗಿದ್ದು ಬೆಂಗಳೂರು ಪೊಲೀಸ್ ಕಮಿಷನರ್ ದಯಾನಂದ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಸಂತೋಷ್ ಅವರು 2022ರಲ್ಲಿ ಹೊಸೂರು ಗೇಟ್ ಠಾಣೆ ಪಿಎಸ್ಐ ಆಗಿದ್ದಾಗ ಪ್ರಕರಣ ಒಂದರಲ್ಲಿ ರಿಕವರಿ ಮಾಡಿದ್ದ ಚಿನ್ನವನ್ನು ದುರ್ಬಳಕೆ ಮಾಡಿಕೊಂಡಿದ್ದರು ಎಂಬ ಆರೋಪ ಕೇಳಿಬಂದಿದೆ.
ಚಿನ್ನದ ಅಂಗಡಿ ಮಾಲೀಕರೊಬ್ಬರ ಬಳಿ ರಿಕವರಿ ಚಿನ್ನ ತೋರಿಸಬೇಕಿದೆ ಎಂದು ಹೇಳಿ 950 ಗ್ರಾಂ ಚಿನ್ನದ ಗಟ್ಟಿ ಕೊಡು, ಫೋಟೋ ತೆಗೆಸಿ ಹಿಂದಿರುಗಿಸುತ್ತೇನೆ ಎಂದು ಹೇಳಿ ಚಿನ್ನದ ಗಟ್ಟಿ ಪಡೆದು ಎಸ್ಕೇಪ್ ಆಗಿದ್ದರು. ಬಳಿಕ ಅಂಗಡಿ ಮಾಲೀಕ ಚಿನ್ನ ಕೇಳಿದಾಗ ಹಣ ಕೊಡುತ್ತೇನೆಂದು ಚೆಕ್ ಕೊಟ್ಟಿದ್ದರು. ಆದರೆ ಚೆಕ್ ಬೌನ್ಸ್ ಆಗಿತ್ತು. ಮತ್ತೆ ಚಿನ್ನದ ಅಂಗಡಿ ಮಾಲೀಕ ಕೇಳಿದಾಗ ಬೆದರಿಕೆ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಪಿಎಸ್ ಐ ಮೇಲೆ ದೂರು ದಾಖಲಾಗಿತ್ತು. ಎಫ್ಐಆರ್ ದಾಖಲಾದ ಹಿನ್ನೆಲೆಯಲ್ಲಿ ಪಿಎಸ್ ಐ ಸಂತೋಷ್ ಅವರನ್ನು ಅಮಾನತು ಮಾಡಲಾಗಿದೆ.
ಚಿನ್ನದ ಅಂಗಡಿ ಮಾಲೀಕನಿಗೆ ಬೆದರಿಕೆ
ಈ ನಡುವೆ ಜಮೀನಿನ ಕರಾರು ಪತ್ರವನ್ನು ಚಿನ್ನದ ಅಂಗಡಿ ಮಾಲೀಕನಿಗೆ ಸಂತೋಷ್ ನೀಡಿದ್ದರು. ಆದರೆ ಆ ಜಾಗವನ್ನು ಬೇರೆಯವರಿಗೆ ಮಾರಾಟ ಮಾಡಿದ್ದರು. ಇದನ್ನು ಚಿನ್ನದ ಅಂಗಡಿ ಮಾಲೀಕ ಪ್ರಶ್ನಿಸಿದ ವೇಳೆ ಆತನಿಗೆ ಇನ್ಸ್ಪೆಕ್ಟರ್ ಸಂತೋಷ್ ಖಾಲಿ ಚೆಕ್ ನೀಡಿದ್ದರು. ನಂತರ, ಚೆಕ್ ಕೂಡ ಬೌನ್ಸ್ ಆಗಿತ್ತು. ಮತ್ತೆ ಹಣ ಅಥವಾ ಚಿನ್ನ ಕೇಳಿದಾಗ ಸಂತೋಷ್ ಅವರು ಚಿನ್ನದ ಅಂಗಡಿ ಮಾಲೀಕನಿಗೆ ಬೆದರಿಕೆ ಹಾಕಿದ್ದರು. ಹೀಗಾಗಿ, ಹಲಸೂರು ಗೇಟ್ ಠಾಣೆಯಲ್ಲಿ ಪಿಎಸ್ಐ ಸಂತೋಷ್ ವಿರುದ್ಧ ಅಧಿಕಾರ ದುರುಪಯೋಗ ಮತ್ತು ವಂಚನೆ ಪ್ರಕರಣ ದಾಖಲಾಗಿತ್ತು.
Bangalore 950 Grams of Gold Seized in Recovery Scam, Cottonpet Police station PSI Santosh Suspended Following FIR.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
18-04-26 10:37 pm
HK News Staffer
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm