ಬ್ರೇಕಿಂಗ್ ನ್ಯೂಸ್
26-03-25 06:07 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.26 : ಬಿಜೆಪಿಯಲ್ಲಿ ರೆಬೆಲ್ ಶಾಸಕನೆಂದೇ ಗುರುತಿಸಲ್ಪಟ್ಟು ರಾಜ್ಯ ಬಿಜೆಪಿಗೆ ಬಿಸಿ ತುಪ್ಪವಾಗಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ. ಇದೇ ವೇಳೆ, ಯತ್ನಾಳ್ ಜೊತೆಗೆ ಗುರುತಿಸಿಕೊಂಡಿದ್ದ ಶಾಸಕ ಬಿಪಿ ಹರೀಶ್ ಮತ್ತು ಕೆಲವರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ.
ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6 ವರ್ಷಗಳ ಅವಧಿಗೆ ಉಚ್ಚಾಟಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಆದೇಶ ಹೊರಡಿಸಿದೆ. ಕೇಂದ್ರ ಶಿಸ್ತು ಸಮಿತಿ ಎರಡು ಬಾರಿ ಶೋಕಾಸ್ ನೋಟಿಸ್ ನೀಡಿದ್ದರೂ ಪದೇ ಪದೇ ಪಕ್ಷದ ಶಿಸ್ತು ಉಲ್ಲಂಘನೆ ಮಾಡುತ್ತಿದ್ದರು. ಕೊನೆಗೆ ಫೆಬ್ರವರಿ 10 ರಂದು ಶೋಕಾಸ್ ನೋಟಿಸ್ಗೆ ಯತ್ನಾಳ್ ಉತ್ತರ ನೀಡಿದ್ದರು.
ಆನಂತರ, ಆರೆಸ್ಸೆಸ್ ಹಿರಿಯ ನಾಯಕರು ಯತ್ನಾಳ್ ಮತ್ತು ಅವರ ಬಳಗದ ಜೊತೆಗೆ ಕುಳಿತು ಮಾತನಾಡಿ ಹೊಂದಾಣಿಕೆಯಲ್ಲಿ ಹೋಗುವಂತೆ ಮನವೊಲಿಕೆ ಮಾಡಿದ್ದರು.ಆದರೂ ವಿಜಯೇಂದ್ರ ಮತ್ತು ಯಡಿಯೂರಪ್ಪ ವಿರುದ್ಧ ಹೇಳಿಕೆ ನೀಡುವುದನ್ನು ನಿಲ್ಲಿಸಿರಲಿಲ್ಲ. ಹೀಗಾಗಿ ಪಕ್ಷದ ಕೇಂದ್ರ ಶಿಸ್ತು ಸಮಿತಿ ದಿಢೀರ್ ನಿರ್ಧಾರ ಕೈಗೊಂಡಿದೆ. ಈ ಮೂಲಕ ರಾಜ್ಯ ಬಿಜೆಪಿಯಲ್ಲಿನ ಬಣ ಬಡಿದಾಟಕ್ಕೆ ಬ್ರೇಕ್ ಹಾಕುವ ಯತ್ನ ಮಾಡಿದೆ. ಅಲ್ಲದೇ ಇತರೆ ರೆಬೆಲ್ ನಾಯಕರಿಗೂ ಪರೋಕ್ಷ ಎಚ್ಚರಿಕೆ ಸಂದೇಶ ರವಾನಿಸಿದೆ.
ಯತ್ನಾಳ್ ಕಳೆದ ಒಂದು ವರ್ಷದಲ್ಲಿ ರಾಜ್ಯ ಬಿಜೆಪಿಗೆ ಎದುರಾಗಿ ತಮ್ಮದೇ ತಂಡ ಕಟ್ಟಿಕೊಂಡು ಪ್ರತ್ಯೇಕ ಸಭೆ ಮಾಡುತ್ತಿದ್ದರು. ಈ ಸಂಬಂಧ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿತ್ತು. ಆದರೂ ಯತ್ನಾಳ್ ಸೈಲೆಂಟ್ ಆಗಿರಲಿಲ್ಲ. ಹೀಗಾಗಿ ಇತ್ತೀಚೆಗೆಷ್ಟೇ ಮತ್ತೊಂದು ಶೋಕಾಸ್ ನೀಡಲಾಗಿತ್ತು. ಇದೀಗ ವಿಜಯೇಂದ್ರ ಮತ್ತು ಯಡಿಯೂರಪ್ಪ ದೆಹಲಿಯಲ್ಲಿ ಇರುವಾಗಲೇ ಉಚ್ಚಾಟನೆ ಆದೇಶ ಹೊರಡಿಸಲಾಗಿದೆ.
ನೀವು ಪಕ್ಷದ ಶಿಸ್ತನ್ನು ಉಲ್ಲಂಘಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಆದ್ದರಿಂದ, ನಿಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ 6 ವರ್ಷಗಳ ಅವಧಿಗೆ ಉಚ್ಚಾಟಿಸಲು ನಿರ್ಧರಿಸಲಾಗಿದೆ. ಹಾಗೇ ನೀವು ಇಲ್ಲಿಯವರೆಗೆ ಹೊಂದಿದ್ದ ಪಕ್ಷದ ಜವಾಬ್ದಾರಿಯಿಂದ ನಿಮ್ಮನ್ನು ತೆಗೆದುಹಾಕಲಾಗಿದೆ ಎಂದು ಬಿಜೆಪಿ ಕೇಂದ್ರ ಶಿಸ್ತು ಸಮಿತಿಯ ಕಾರ್ಯದರ್ಶಿ ಓಂ ಪಾಠಕ್ ನೀಡಿರುವ ಆದೇಶದಲ್ಲಿ ತಿಳಿಸಿದ್ದಾರೆ.
Basangouda Patil Yatnal, BJP MLA from Bijapur City, Karnataka, has been expelled from the party for six years for his statements against the party and senior leader BS Yediyurappa.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
18-04-26 10:37 pm
HK News Staffer
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm