ಬ್ರೇಕಿಂಗ್ ನ್ಯೂಸ್
28-03-25 12:19 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.28 : ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದ ಹನಿಟ್ರ್ಯಾಪ್ ಪ್ರಕರಣ ಬೆನ್ನಲ್ಲೇ ಮತ್ತೊಂದು ಪ್ರಕರಣ ಎದ್ದು ಕುಳಿತಿದೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷದ ವಿಧಾನ ಪರಿಷತ್ ಸದಸ್ಯರೇ ತನ್ನ ಕೊಲೆಗೆ ಸುಪಾರಿ ನೀಡಲಾಗಿದೆ ಎಂದು ಪೊಲೀಸ್ ದೂರು ನೀಡಿದ್ದಾರೆ. ಸಚಿವ ಕೆ.ಎನ್ ರಾಜಣ್ಣ ಅವರ ಪುತ್ರ, ವಿಧಾನ ಪರಿಷತ್ ಸದಸ್ಯ ರಾಜೇಂದ್ರ ಈ ಆರೋಪ ಮಾಡಿದ್ದು ಡಿಜಿಪಿಗೆ ಲಿಖಿತ ದೂರು ನೀಡಿದ್ದಾರೆ.
ಬೆಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕರ ಕಚೇರಿಗೆ ತೆರಳಿ ದೂರು ನೀಡಿದ ರಾಜೇಂದ್ರ, ನಾನು ಹನಿಟ್ರ್ಯಾಪ್ ಯತ್ನದ ಬಗ್ಗೆ ದೂರು ಕೊಡಲು ಬಂದಿಲ್ಲ. ನನ್ನದೇ ಕೊಲೆ ಮಾಡಲು ಕೆಲವರು ಸುಪಾರಿ ಕೊಟ್ಟಿದ್ದಾರೆ. ಆ ಬಗ್ಗೆ ದೂರು ನೀಡುತ್ತಿದ್ದೇನೆ ಎಂದಿದ್ದಾರೆ.

ಕಳೆದ ಹತ್ತು ದಿನದಿಂದ ಕೊಲೆ ಪ್ರಯತ್ನ ನಡೆಯುತ್ತಿದೆ. ಹೀಗಾಗಿ ನಾನು ಡಿಜಿಪಿ ಅವರನ್ನು ಭೇಟಿ ಮಾಡಿದ್ದೇನೆ. ಇದರ ಹಿಂದೆ ಯಾರೆಲ್ಲ ಇದ್ದಾರೆ ಎಂಬುದರ ಬಗ್ಗೆ ತನಿಖೆ ಆಗಬೇಕು ಅಂತ ಗೃಹ ಸಚಿವರಿಗೆ ಮನವಿ ಮಾಡಿದ್ದೆ. ಈಗ ಡಿಜಿಪಿ ಅವರನ್ನು ಭೇಟಿ ಮಾಡಿ ದೂರು ನೀಡಿದ್ದೇನೆ ಎಂದರು.
ನನ್ನ ಮೇಲೆ ಯಾವುದೇ ಹನಿಟ್ರ್ಯಾಪ್ ಯತ್ನ ನಡೆದಿಲ್ಲ. ಆದರೆ ಫೋನ್ ಕಾಲ್ ಗಳು ಬರ್ತಾ ಇದ್ದವು. ಕಳೆದ ನವೆಂಬರ್ 16 ರಂದು ಮಗಳ ಹುಟ್ಟುಹಬ್ಬ ಇತ್ತು. ಅವತ್ತು ಮನೆಗೆ ಶಾಮೀಯಾನ ಹಾಕಲು ಬಂದವರು ನನ್ನ ಮೇಲೆ ದಾಳಿ ಮಾಡುವ ಉದ್ದೇಶದಿಂದ ಬಂದಿದ್ದರು ಎಂದು ಆರೋಪಿಸಿದರು.
ಕೊಲೆ ಮಾಡುವ ಉದ್ದೇಶದಿಂದಲೇ ಅವರು ಮನೆಗೆ ಬಂದಿದ್ದರು. ಈ ವಿಚಾರ ನನಗೆ ಜನವರಿಯಲ್ಲಿ ಗೊತ್ತಾಗಿದೆ. ಒಂದು ವಾಯ್ಸ್ ರೆಕಾರ್ಡ್ ಬಂದಿತ್ತು. ನನ್ನ ಸೋರ್ಸ್ ಮೂಲಕ ಕೊಲೆಗೆ ಸುಪಾರಿ ಕೊಟ್ಟ ವಿಚಾರ ಬಯಲಾಯ್ತು. ಆ ವಾಯ್ಸ್ ನಲ್ಲಿ 5 ಲಕ್ಷ ಹಣ ನೀಡಿರುವ ಬಗ್ಗೆ ಮಾತಾಡಿದ್ದಾರೆ. ನನ್ನ ಕೊಲೆಗೆ ಸುಪಾರಿ ಕೊಟ್ಟಿದ್ದಾರೆ ಎಂದು ರಾಜೇಂದ್ರ ಆರೋಪಿಸಿದರು.
ಈ ಎಲ್ಲಾ ವಿಚಾರವನ್ನು ನಾನು ಡಿಜಿಪಿ ಅವರಿಗೆ ಹೇಳಿದ್ದೇನೆ, ಅವರು ಬಹುಶಃ ತುಮಕೂರು ಎಸ್ಪಿಗೆ ಹೇಳ್ತಾರೆ. ಅಲ್ಲಿಯೇ ತನಿಖೆ ಮಾಡ್ತಾರೆ. ನಾನು ಹನಿಟ್ರ್ಯಾಪ್ ಬಗ್ಗೆ ಯಾವುದೇ ದೂರನ್ನ ನೀಡಿಲ್ಲ. ನನ್ನ ಕೊಲೆಗೆ ಸುಫಾರಿ ಪಡೆದಿದ್ದಾರೆ ಅಂತ ದೂರು ನೀಡಿದ್ದೇನೆ. ಡಿಜಿಪಿ ಸೂಚನೆಯಂತೆ, ತುಮಕೂರು ಎಸ್ಪಿ ಕಚೇರಿಗೂ ಭೇಟಿ ನೀಡಿ ದೂರು ಕೊಡುತ್ತೇನೆ ಎಂದು ರಾಜೇಂದ್ರ ತಿಳಿಸಿದ್ದಾರೆ.
Karnataka cooperation minister KN Rajanna's son and Congress MLC Rajendra Rajanna on Thursday alleged that there has been an attempt to “murder him”, reported PTI.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
18-04-26 10:37 pm
HK News Staffer
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm