ಬ್ರೇಕಿಂಗ್ ನ್ಯೂಸ್
09-04-25 04:05 pm HK News Desk ಕರ್ನಾಟಕ
ಬೆಂಗಳೂರು, ಎ.9 : ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಇದೇ ಎಪ್ರಿಲ್ 12ರಿಂದ ಬೆಂಗಳೂರಿನಿಂದ ಹೊಸ ರೈಲು ಸಂಚರಿಸಲಿದೆ ಎಂದು ರೈಲ್ವೇ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಘೋಷಣೆ ಮಾಡಿದರು.
ತುಮಕೂರಿನಲ್ಲಿ ರೈಲ್ವೇ ಗೇಟ್ ಮೇಲ್ಸೇತುವೆಗೆ ಗುದ್ದಲಿ ಪೂಜೆ ನಡೆಸಿದ ಬಳಿಕ ಮಾತನಾಡಿದ ಅವರು, ಕರ್ನಾಟಕದಲ್ಲಿ ರೈಲ್ವೇ ಇಲಾಖೆಯ ಯೋಜನೆಗಳ ಬಗ್ಗೆ ಮಾಹಿತಿ ಹಂಚಿಕೊಂಡರು. ಇದೇ 12 ರಂದು ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಒಂದು ಹೊಸ ರೈಲು ಬಿಡುತ್ತಿದ್ದೇವೆ. ದಿನಕ್ಕೆ ನಾಲ್ಕು ಬಾರಿ ಹೋಗಿ ಬರುವಂತಹ ಕೆಲಸ ಆಗಲಿದೆ ಎಂದು ಅವರು ಹೇಳಿದರು.
ಬಟವಾಡಿ ಗೇಟ್ನಲ್ಲಿ ಇವತ್ತು 27 ಕೋಟಿ ರೂ. ವೆಚ್ಚದಲ್ಲಿ ಕೆಲಸ ಆರಂಭಿಸಲಾಗಿದೆ. ಬಡ್ಡಿಹಳ್ಳಿ ಬಳಿ 43 ಕೋಟಿ ರೂ. ವೆಚ್ಚದಲ್ಲಿ, ಮೈದಾಳದ ಬಳಿ 51 ಕೋಟಿ ರೂ. ವೆಚ್ಚದಲ್ಲಿ ಮೇಲ್ಸೇತುವೆ ಮಾಡಲಾಗುತ್ತಿದೆ. 650 ಕೋಟಿ ರೂ. ವೆಚ್ಚದ 22 ಮೇಲ್ಸೇತುವೆ ಮತ್ತು ಕೆಳಸೇತುವೆ ಕಾಮಗಾರಿ ಪ್ರಾರಂಭ ಮಾಡಲಾಗುತ್ತಿದೆ. 23 ಕಾಮಗಾರಿಗಳ ಪೈಕಿ ಈಗಾಗಲೇ 10 ಕಾಮಗಾರಿಗೆ ಚಾಲನೆ ಕೊಡಲಾಗಿದೆ. ಹಂತ ಹಂತವಾಗಿ ಕೆಲಸಗಳನ್ನು ಪ್ರಾರಂಭ ಮಾಡಲಾಗುತ್ತದೆ. ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಬಂದ ಮೇಲೆ ರೈಲ್ವೇ ಇಲಾಖೆಗೆ ಒಂದು ಕಾಯಕಲ್ಪ ಕೊಟ್ಟಿದ್ದಾರೆ ಎಂದು ಸೋಮಣ್ಣ ಹೇಳಿದರು.
ಕರ್ನಾಟಕದಲ್ಲಿ ಇದ್ದಂತಹ 33 ಸಾವಿರ ಕೋಟಿ ರೂ. ವೆಚ್ಚದ ಯೋಜನೆಗಳನ್ನ ನಾವು (ಕೇಂದ್ರ ಸರ್ಕಾರ) ಕೈಗೆತ್ತಿಕೊಂಡಿದ್ದೇವೆ. ಇದೇ 11 ರಂದು ಹಾವೇರಿಯಿಂದ ಬೆಂಗಳೂರಿಗೆ ವಂದೇ ಭಾರತ್ ರೈಲಿಗೆ ಚಾಲನೆ ಕೊಡುತ್ತಿದ್ದೇವೆ. ಮುಂದಿನ 15 ದಿನಗಳಲ್ಲಿ ಗದಗ, ವಾಡಿ, ಕುಷ್ಠಗಿ, ಯಲಬುರ್ಗಾ ರೈಲು ಸಂಚಾರ ಲೋಕಾರ್ಪಣೆ ಮಾಡುತ್ತೇವೆ. ಅನೇಕ ರೈಲ್ವೆ ಯೋಜನೆಗಳನ್ನು ಲೋಕಾರ್ಪಣೆ ಮಾಡುವಂತಹ ಕೆಲಸ ಈಗಾಗಲೇ ಆಗಿದೆ ಎಂದು ಸೋಮಣ್ಣ ಹೇಳಿದರು.
New Train Service Launched, Bangalore to Kukke Subrahmanya, Vande Bharat Train from Haveri Announced by Minister Somanna.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
18-04-26 10:37 pm
HK News Staffer
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm