ಬ್ರೇಕಿಂಗ್ ನ್ಯೂಸ್
09-04-25 06:21 pm Bangalore Correspondent ಕರ್ನಾಟಕ
ಬೆಂಗಳೂರು, ಎ.9 : ಈಗಾಗಲೇ ಮುಡಾ ಹಗರಣದಲ್ಲಿ ಸಿಲುಕಿ ಇಡಿ ತನಿಖೆ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಇದೀಗ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಗಣಿ ಗುತ್ತಿಗೆ ನವೀಕರಣ ಹೆಸರಲ್ಲಿ 500 ಕೋಟಿ ರೂ. ಕಿಕ್ಬ್ಯಾಕ್ ಪಡೆದ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಪ್ರಾಸಿಕ್ಯೂಷನ್ ಅನುಮತಿ ನೀಡಬೇಕು ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.
2015ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಸಿದ್ದರಾಮಯ್ಯ ಅವರು 8 ಗಣಿ ಗುತ್ತಿಗೆಯನ್ನು ಹರಾಜು ಹಾಕುವ ಬದಲಿಗೆ ನವೀಕರಣ ಮಾಡಿದ್ದರು. ಗಣಿ ಹಗರಣದಲ್ಲಿ ತನಿಖೆ ಎದುರಿಸುತ್ತಿರುವ ಗಣಿ ಕಂಪೆನಿಗಳ ಲೈಸೆನ್ಸ್ ನವೀಕರಣ ಮಾಡಲಾಗಿತ್ತು. ಸಾಕಷ್ಟು ವರ್ಷಗಳಿಂದ ಬಾಕಿ ಇದ್ದ ಲೈಸೆನ್ಸ್ ನವೀಕರಣ ಮಾಡಿದ್ದು ಇದಕ್ಕಾಗಿ ಕಿಕ್ಬ್ಯಾಕ್ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸುಮಾರು 500 ಕೋಟಿ ರೂ. ಕಿಕ್ಬ್ಯಾಕ್ ಪಡೆದಿದ್ದಾರೆ ಎಂದು ರಾಮಮೂರ್ತಿ ಗೌಡ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ನಿರ್ಧಾರದಿಂದ ಸರ್ಕಾರಕ್ಕೆ 5000 ಕೋಟಿ ನಷ್ಟ ಆಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿ ಸಿದ್ದರಾಮಯ್ಯ ಅವರನ್ನು ಪ್ರಾಸಿಕ್ಯೂಷನ್ ಒಳಪಡಿಸಲು ಅನುಮತಿ ನೀಡಿ ಎಂದು ದೂರಿನಲ್ಲಿ ಮನವಿ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ 1988ರ ಸೆಕ್ಷನ್ 7, 9, 11, 12 ಮತ್ತು 15 ಅಡಿ ಪ್ರಾಸಿಕ್ಯೂಚನ್ಗೆ ಅನುಮತಿ ಕೊಡಿ ಎಂದು ಮನವಿ ಮಾಡಲಾಗಿದೆ.
ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 59, 61, 42, 201, 227, 228, 229, 239, 314, 316 (5) 318 (1), 319, 322, 324 (2), 324 (3), 335, 336, 338, 340 ರಡಿ ಕೇಸು ದಾಖಲಿಸಿ ತನಿಖೆ ನಡೆಸಲು ಪೂರ್ವಾನುಮತಿ ನೀಡುವಂತೆ ರಾಮಮೂರ್ತಿ ಗೌಡ ಮನವಿ ಮಾಡಿದ್ದಾರೆ.
ದೂರುದಾರರ ಜೊತೆ ರಾಜ್ಯಪಾಲರು ಸುದೀರ್ಘವಾಗಿ ಚರ್ಚೆ ನಡೆಸಿದ್ದಾರೆ. ಆ ನಂತರ ದೂರಿನ ಮೇಲೆ ಸಹಿ ಮಾಡಿ ಕಾನೂನು ವಿಭಾಗದ ಅಭಿಪ್ರಾಯಕ್ಕೆ ಕಳುಹಿಸಿದ್ದಾರೆ. ಅಲ್ಲದೆ, ಸಾಲಿಸಿಟರ್ ಜನರಲ್ ಬಳಿ ಚರ್ಚೆ ನಡೆಸಿ ತೀರ್ಮಾನ ಮಾಡುವುದಾಗಿ ರಾಜ್ಯಪಾಲರು ದೂರುದಾರರಿಗೆ ಭರವಸೆ ನೀಡಿದ್ದಾರೆ. ದಾಖಲೆ ಪರಿಶೀಲಿಸಿ ವರದಿ ನೀಡುವಂತೆ ಸಾಲಿಸಿಟರ್ ಜನರಲ್ಗೆ ತಿಳಿಸಿದ್ದಾರೆ.
Karnataka Chief Minister Siddaramaiah is facing fresh controversy after social activist H Ramamurthy Gowda submitted a formal request to Governor Thaawarchand Gehlot, seeking sanction to prosecute the Chief Minister under the Prevention of Corruption Act, 1988.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm