ಬ್ರೇಕಿಂಗ್ ನ್ಯೂಸ್
09-04-25 09:31 pm HK News Desk ಕರ್ನಾಟಕ
ಶಿವಮೊಗ್ಗ, ಎ.9 : ಶಿವಮೊಗ್ಗ ಸ್ಮಾರ್ಟ್ ಸಿಟಿ ಚೀಫ್ ಇಂಜಿನಿಯರ್ ಒಬ್ಬರು ಗುತ್ತಿಗೆ ಕಾಮಗಾರಿಯ ಬಿಲ್ ಪಾಸ್ ಮಾಡಲು ಒಂದು ಲಕ್ಷ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗ ಸ್ಮಾರ್ಟ್ ಸಿಟಿಯ ಪ್ರಭಾರ ಚೀಫ್ ಇಂಜಿನಿಯರ್ ಕೃಷ್ಣಪ್ಪ ಸಿಕ್ಕಿಬಿದ್ದವರು.
ಶಿವಮೊಗ್ಗ ಸ್ಮಾರ್ಟ್ ಸಿಟಿಯಲ್ಲಿ ಎಲ್ಇಡಿ ಪರದೆಯ ಅಳವಡಿಕೆ ಹಾಗೂ ನಿರ್ವಹಣೆ ಮಾಡುತ್ತಿದ್ದ ಖಾಸಗಿ ಕಂಪನಿಯಿಂದ ಬಿಲ್ ಪಾಸ್ ಮಾಡಲು ಇಂಜಿನಿಯರ್ 1 ಲಕ್ಷ ರೂ. ಲಂಚ ಕೇಳಿದ್ದರು ಎಂದು ದೂರು ಬಂದಿತ್ತು. ಲಂಚದ ಹಣವನ್ನು ಸ್ಮಾರ್ಟ್ ಸಿಟಿ ಕಚೇರಿ ಆವರಣದಲ್ಲಿ ಪಡೆಯುವಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
ಖಾಸಗಿ ಕಂಪನಿಯು ಶಿವಮೊಗ್ಗ ಸ್ಮಾರ್ಟ್ ಸಿಟಿಯ ವ್ಯಾಪ್ತಿಯಲ್ಲಿ 7 ಕಡೆ ಡಿಸ್ಪ್ಲೇ ಬೋರ್ಡ್ ಅಳವಡಿಸಿ, ಅದರ ನಿರ್ವಹಣೆಯನ್ನು 5 ವರ್ಷ ಕಾಲ ಮಾಡಿತ್ತು. ಇವರಿಗೆ ಸ್ಮಾರ್ಟ್ ಸಿಟಿಯಿಂದ 11,16,100 ರೂ. ಬಿಲ್ ಪಾವತಿ ಮಾಡಬೇಕಾಗಿತ್ತು. ಇದಕ್ಕಾಗಿ ಕೃಷ್ಣಪ್ಪ ರೂ. 1 ಲಕ್ಷ ಹಣ ಲಂಚ ನೀಡುವಂತೆ ಕೇಳಿದ್ದರು. ಅದನ್ನು ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಬುಧವಾರ (ಏಪ್ರಿಲ್ 9) ಕೃಷ್ಣಪ್ಪ ಅವರ ವೃತ್ತಿಯ ಕೊನೆ ದಿನವಾಗಿತ್ತು. ಕೃಷ್ಣಪ್ಪ ಅವರು ತಮ್ಮ ಹುದ್ದೆಯಿಂದ ಬಿಡುಗಡೆ ಹೊಂದಿ ಪಾಲಿಕೆ ಆಯುಕ್ತರಿಗೆ ಚಾರ್ಜ್ ವಹಿಸಬೇಕಿತ್ತು. ಇದೇ ವೇಳೆಯಲ್ಲಿ ಲಂಚದ ಹಣಕ್ಕೆ ಕೈಯೊಡ್ಡಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
Karnataka Lokayukta Police on Wednesday trapped and arrested M. Krishnappa, in-charge Chief Engineer of Shivamogga Smart City project, while accepting a bribe of ₹1 lakh from a representative of a private firm.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm