ಬ್ರೇಕಿಂಗ್ ನ್ಯೂಸ್
19-12-20 12:03 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.19: ತಮ್ಮ ಬೇಡಿಕೆಗಳನ್ನು ಮುಂದಿಟ್ಟು ನಾಲ್ಕು ದಿನಗಳ ಪರ್ಯಂತ ಮುಷ್ಕರ ನಡೆಸಿದ ಸಾರಿಗೆ ನೌಕರರಿಗೆ ಮತ್ತೊಂದು ಶಾಕ್ ತಗುಲಿದೆ. ಮುಷ್ಕರಕ್ಕೆ ಕಾರಣಕರ್ತರು ಎನ್ನಲಾದ ನಾಲ್ಕು ನಿಗಮಗಳ ಸುಮಾರು 200 ರಷ್ಟು ನೌಕರರನ್ನು ಅಮಾನತುಗೊಳಿಸಲಾಗಿದೆ. ಸರ್ಕಾರದ ಈ ನಡೆಗೆ ನೌಕರರ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಹಾಗೂ ಆರನೇ ವೇತನ ಆಯೋಗ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಸಾರಿಗೆ ನೌಕರರು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಮುಷ್ಕರ ನಡೆಸಿದ್ದರು.
ನಾಲ್ಕು ದಿನಗಳ ಕಾಲ ರಾಜ್ಯದಾದ್ಯಂತ ನಡೆದ ಮುಷ್ಕರದಿಂದಾಗಿ ಸಾರಿಗೆ ಇಲಾಖೆಗೆ ಭಾರೀ ನಷ್ಟ ಉಂಟಾಗಿದೆ. ನೌಕರರ 10 ಬೇಡಿಕೆಗಳ ಪೈಕಿ ಪ್ರಮುಖ ಬೇಡಿಕೆಗಳನ್ನು ಹೊರತುಪಡಿಸಿ ಉಳಿದವುಗಳಿಗೆ ಸರ್ಕಾರ ಅಸ್ತು ಎಂದಿತ್ತು. ಆದರೆ ಇದೀಗ ಮುಷ್ಕರದಲ್ಲಿ ಭಾಗಿಯಾಗಿದ್ದ ನೌಕರರ ಪೈಕಿ 200 ಮಂದಿಗೆ ಅಮಾನತು ಶಿಕ್ಷೆ ನೀಡಲಾಗಿದೆ ಎಂಬ ಆರೋಪ ನೌಕರರ ಕಡೆಯಿಂದ ಕೇಳಿಬರುತ್ತಿದೆ.
ಸರ್ಕಾರದ ಈ ನಡೆಯಿಂದ ನೌಕರರು ಆಕ್ರೋಶಗೊಂಡಿದ್ದಾರೆ. ಮುಷ್ಕರದಲ್ಲಿ ಭಾಗಿಯಾಗಿದ್ದಾರೆ ಎಂಬ ಕಾರಣಕ್ಕೆ ಅಮಾನತು ಮಾಡಲಾಗುತ್ತಿದೆ ಎಂದು ಆರೋಪ ಮಾಡುತ್ತಿದ್ದಾರೆ. ಸಾರಿಗೆ ನೌಕರರ ಮುಷ್ಕರ ರಾಜ್ಯಾದ್ಯಂತ ಭಾರೀ ಗಮನ ಸೆಳೆದಿತ್ತು. ನಾಲ್ಕು ದಿನಗಳ ದಿಢೀರ್ ಮುಷ್ಕರದಿಂದಾಗಿ ಸಾರ್ವಜನಿಕರಿಗೆ ಭಾರೀ ತೊಂದರೆ ಉಂಟಾಗಿತ್ತು. ಅಲ್ಲದೆ, ಸಾರಿಗೆ ನೌಕರರ ಸಂಘದ ಮುಖಂಡರು, ಮುಷ್ಕರದಲ್ಲಿ ಪಾಲ್ಗೊಂಡ ನೌಕರರ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು.
21-06-25 02:48 pm
Bengaluru Staff
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
21-06-25 03:56 pm
Giridhar Shetty, Mangaluru
Fake NEET Marksheet, Udupi Topper; ನಕಲಿ ನೀಟ್...
21-06-25 01:59 pm
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
Mangalore Forest Guard, Someshwara Beach, U T...
20-06-25 09:54 pm
21-06-25 12:21 pm
Mangaluru Correspondent
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm