ಬ್ರೇಕಿಂಗ್ ನ್ಯೂಸ್
12-04-25 11:09 pm Bangalore Correspondent ಕರ್ನಾಟಕ
ಬೆಂಗಳೂರು, ಎ.12 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎ.17ರಂದು ವಿಶೇಷ ಸಚಿವ ಸಂಪುಟ ಸಭೆ ಕರೆದು ವಿವಾದಿತ ಜಾತಿ ಗಣತಿ ವರದಿ ಬಗ್ಗೆ ಚರ್ಚೆ ನಡೆಸಲು ಮುಂದಾಗಿದ್ದಾರೆ. ಆದರೆ ಸಿಎಂ ಅವರ ಈ ನಡೆಗೆ ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯಗಳು ವಿರೋಧಿಸಿದ್ದು, ಹೊಸದಾಗಿ ವರದಿ ರೂಪಿಸುವಂತೆ ಒತ್ತಾಯ ಮಾಡಿವೆ.
ಜಾತಿ ಗಣತಿ ವರದಿ ದೋಷಪೂರಿತವಾಗಿದೆ ಎಂದು ಕರ್ನಾಟಕ ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಬಿ.ಕೆಂಚಪ್ಪ ಗೌಡ ಹೇಳಿದ್ದು ಈ ಸಮೀಕ್ಷಾ ವರದಿಗೆ ಯಾವುದೇ ಆಧಾರವಿಲ್ಲ. ಇದು ಸಂಪೂರ್ಣ ದೋಷಪೂರಿತ. 2011ರ ಜನಗಣತಿ ಆಧರಿಸಿ ಈ ವರದಿಯನ್ನು ತಯಾರಿಸಲಾಗಿದೆ. ಇದು ಇಂದಿನ ಸಂದರ್ಭದಲ್ಲಿ ಅರ್ಥಹೀನವಾಗಿದೆ. ನಮ್ಮ ಸಮುದಾಯದ ಯಾರೂ ಗಣತಿದಾರರನ್ನು ನೋಡಿಲ್ಲ. ಹೀಗಾಗಿ ಜಾತಿ ಗಣತಿ ನಡೆಸಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ ಎಂದು ಹೇಳಿದರು.
ನಿವೃತ್ತ ಐಎಎಸ್ ಅಧಿಕಾರಿ, ಜಾಗತಿಕ ಲಿಂಗಾಯತ ಮಹಾಸಭಾ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಜಾಮದಾರ್ ಹೇಳಿಕೆ ನೀಡಿದ್ದು, ಜಾತಿ ಗಣತಿ ಅಕ್ರಮ ಮತ್ತು ದೋಷಪೂರಿತವಾಗಿದೆ. ಭಾರತೀಯ ಜನಗಣತಿ ಕಾಯ್ದೆಯಡಿ ರಾಜ್ಯ ಸರ್ಕಾರಕ್ಕೆ ಜನಗಣತಿ ನಡೆಸುವ ಅಧಿಕಾರವಿಲ್ಲ. ಭಾರತ ಸರ್ಕಾರ ಮಾತ್ರ ಇದನ್ನು ಮಾಡಬಹುದು. 1931ರ ನಂತರ ಇದನ್ನು ಇಲ್ಲಿಯ ವರೆಗೆ ಮಾಡಿಲ್ಲ. ಕೇಂದ್ರ ಸರ್ಕಾರ ಹೊರತುಪಡಿಸಿ ಯಾವುದೇ ಪ್ರಾಧಿಕಾರ ಮಾಡುವ ಜಾತಿ ಗಣತಿ ಕಾನೂನು ಬಾಹಿರವಾಗುತ್ತದೆ ಎಂದು ಹೇಳಿದರು.
ಸಮೀಕ್ಷೆ ಸಮಯದಲ್ಲಿ ತಮ್ಮ ಮಕ್ಕಳ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಮೀಸಲಾತಿ ಪಡೆಯುವ ಉದ್ದೇಶದಿಂದ ವಂಚಿಸಲಾಗಿದೆ. ಮೀಸಲಾತಿ ಸೌಲಭ್ಯ ಪಡೆಯಲು ಜನರು ತಮ್ಮ ಜಾತಿಗಳನ್ನು ಹಿಂದುಳಿದ ಸಮುದಾಯಗಳಿಗೆ ಸೇರಿಸಿದ್ದಾರೆ ಎಂದು ಹೇಳಿದ್ದಾರೆ.
ಚಿತ್ರದುರ್ಗದ ಮುರುಘಾ ಮಠದ ಪ್ರಭಾರಿ ಬಸವಪ್ರಭು ಸ್ವಾಮೀಜಿ ಮಾತನಾಡಿ, ಜಾತಿ ಗಣತಿ ವರದಿ ಶಿಫಾರಸ್ಸುಗಳು ಬಹಿರಂಗವಾಗುವವರೆಗೂ ಕಾಯುತ್ತೇವೆ, ಪರವಾಗಿದೆಯೋ ಅಥವಾ ವಿರೋಧವಾಗಿದೆಯೋ ಕಾದು ನೋಡಬೇಕು, ಅಖಿಲ ಭಾರತ ವೀರಶೈವ ಮಹಾಸಭಾ ಅಂತಿಮ ನಿರ್ಣಯ ಕೈಗೊಳ್ಳಲಿದೆ ಎಂದು ತಿಳಿಸಿದರು.
ಜಾತಿ ಸಮೀಕ್ಷೆಗೆ ರಾಜ್ಯ ಸರ್ಕಾರ 165 ಕೋಟಿ ರೂ. ವೆಚ್ಚ ಮಾಡಿರುವುದಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ. ಯಾವುದೇ ಸಚಿವರು ವರದಿಗೆ ವಿರುದ್ಧವಾಗಿಲ್ಲ. ಈ ಬಗ್ಗೆ ಸೂಕ್ತ ಸಮಾಲೋಚನೆಯ ನಂತರ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
Vokkaliga and Lingayat Leaders Challenge Legitimacy of Caste Survey, Claims of Flawed Methodology and State Overreach.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm