ಬ್ರೇಕಿಂಗ್ ನ್ಯೂಸ್
19-12-20 03:48 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.19: ಕೊನೆಗೂ ಶಾಲೆ ಆರಂಭಿಸುವತ್ತ ದಿಟ್ಟ ಹೆಜ್ಜೆ ಇಟ್ಟಿದೆ. ಜನವರಿ 1ರಿಂದಲೇ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಆರಂಭಿಸಲು ರಾಜ್ಯ ಸರಕಾರ ಹಸಿರು ನಿಶಾನೆ ನೀಡಿದೆ.
ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಪ್ರಮುಖ ಸಚಿವರ ಜೊತೆ ಸಭೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ ಶಾಲೆ ಆರಂಭಿಸಲು ನಿರ್ಧಾರ ತೆಗೆದುಕೊಂಡಿದ್ದಾಗಿ ಪ್ರಕಟಿಸಿದ್ದಾರೆ.

ಎರಡು ದಿನಗಳ ಹಿಂದಷ್ಟೇ ಕೊರೊನಾ ಸಲಹಾ ಸಮಿತಿ ರಾಜ್ಯ ಸರಕಾರಕ್ಕೆ ಈ ಬಗ್ಗೆ ವರದಿ ನೀಡಿತ್ತು. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಮತ್ತು ಕೊರೊನಾ ಸೋಂಕಿನ ಪ್ರಮಾಣ ತಗ್ಗಿರುವ ಕಾರಣ ಜನವರಿ ಒಂದರಿಂದಲೇ 10 ಮತ್ತು 12ನೇ ತರಗತಿಗಳನ್ನು ಆರಂಭಿಸಲು ಸಲಹೆ ಮಾಡಿತ್ತು. ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೂಡ ಅದಕ್ಕೆ ಒಪ್ಪಿದ್ದು, ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದರು.

15 ದಿನಗಳ ನಂತರ 9ನೇ ತರಗತಿ ಮತ್ತು ಮೊದಲ ಪಿಯು ತರಗತಿಗಳನ್ನು ಆರಂಭಿಸಲು ಕೂಡ ಸಲಹಾ ಮಂಡಳಿ ವರದಿಯಲ್ಲಿ ಹೇಳಿದ್ದರು. ಆ ಬಗ್ಗೆ ಮುಖ್ಯಮಂತ್ರಿ ಈಗಲೇ ಯಾವುದೇ ನಿರ್ಧಾರ ಪ್ರಕಟಿಸಿಲ್ಲ.
ಕೊರೊನಾ ಲಾಕ್ಡೌನ್ ಬಳಿಕ ಕಳೆದ 9 ತಿಂಗಳಿಂದ ಶಾಲೆ ಸ್ಥಗಿತಗೊಂಡಿತ್ತು. ಈ ನಡುವೆ, ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆದಿತ್ತು. ಅದು ಬಿಟ್ಟರೆ ಶಾಲೆ ಸಂಪೂರ್ಣವಾಗಿ ಸ್ಥಗಿತಗೊಂಡು ವಿದ್ಯಾರ್ಥಿಗಳಿಗೂ ಶಿಕ್ಷಣದ ಬಗ್ಗೆ ಆಸಕ್ತಿಯನ್ನೇ ಕಳಕೊಂಡಿದ್ದರು. ಇದೀಗ ಮತ್ತೆ ಶಾಲೆ ಆರಂಭಿಸುವುದರೊಂದಿಗೆ ಕೊರೊನಾ ಬಳಿಕ ವಿದ್ಯಾರ್ಥಿಗಳು ಮತ್ತೆ ಶಾಲೆಯ ಹಾದಿ ಹಿಡಿಯಲಿದ್ದಾರೆ. ಹಾಗಿದ್ದರೂ, ಶಾಲೆಗೆ ಆಗಮಿಸುವುದನ್ನು ಕಡ್ಡಾಯ ಮಾಡುವಂತಿಲ್ಲ ಎಂಬ ಸೂಚನೆಯನ್ನೂ ಶಿಕ್ಷಣ ಇಲಾಖೆ ಶಾಲಾಡಳಿತ ಮಂಡಳಿಗಳಿಗೆ ನೀಡಿದೆ.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm