ಬ್ರೇಕಿಂಗ್ ನ್ಯೂಸ್
19-12-20 03:48 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.19: ಕೊನೆಗೂ ಶಾಲೆ ಆರಂಭಿಸುವತ್ತ ದಿಟ್ಟ ಹೆಜ್ಜೆ ಇಟ್ಟಿದೆ. ಜನವರಿ 1ರಿಂದಲೇ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಆರಂಭಿಸಲು ರಾಜ್ಯ ಸರಕಾರ ಹಸಿರು ನಿಶಾನೆ ನೀಡಿದೆ.
ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಪ್ರಮುಖ ಸಚಿವರ ಜೊತೆ ಸಭೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ ಶಾಲೆ ಆರಂಭಿಸಲು ನಿರ್ಧಾರ ತೆಗೆದುಕೊಂಡಿದ್ದಾಗಿ ಪ್ರಕಟಿಸಿದ್ದಾರೆ.

ಎರಡು ದಿನಗಳ ಹಿಂದಷ್ಟೇ ಕೊರೊನಾ ಸಲಹಾ ಸಮಿತಿ ರಾಜ್ಯ ಸರಕಾರಕ್ಕೆ ಈ ಬಗ್ಗೆ ವರದಿ ನೀಡಿತ್ತು. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಮತ್ತು ಕೊರೊನಾ ಸೋಂಕಿನ ಪ್ರಮಾಣ ತಗ್ಗಿರುವ ಕಾರಣ ಜನವರಿ ಒಂದರಿಂದಲೇ 10 ಮತ್ತು 12ನೇ ತರಗತಿಗಳನ್ನು ಆರಂಭಿಸಲು ಸಲಹೆ ಮಾಡಿತ್ತು. ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೂಡ ಅದಕ್ಕೆ ಒಪ್ಪಿದ್ದು, ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದರು.

15 ದಿನಗಳ ನಂತರ 9ನೇ ತರಗತಿ ಮತ್ತು ಮೊದಲ ಪಿಯು ತರಗತಿಗಳನ್ನು ಆರಂಭಿಸಲು ಕೂಡ ಸಲಹಾ ಮಂಡಳಿ ವರದಿಯಲ್ಲಿ ಹೇಳಿದ್ದರು. ಆ ಬಗ್ಗೆ ಮುಖ್ಯಮಂತ್ರಿ ಈಗಲೇ ಯಾವುದೇ ನಿರ್ಧಾರ ಪ್ರಕಟಿಸಿಲ್ಲ.
ಕೊರೊನಾ ಲಾಕ್ಡೌನ್ ಬಳಿಕ ಕಳೆದ 9 ತಿಂಗಳಿಂದ ಶಾಲೆ ಸ್ಥಗಿತಗೊಂಡಿತ್ತು. ಈ ನಡುವೆ, ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆದಿತ್ತು. ಅದು ಬಿಟ್ಟರೆ ಶಾಲೆ ಸಂಪೂರ್ಣವಾಗಿ ಸ್ಥಗಿತಗೊಂಡು ವಿದ್ಯಾರ್ಥಿಗಳಿಗೂ ಶಿಕ್ಷಣದ ಬಗ್ಗೆ ಆಸಕ್ತಿಯನ್ನೇ ಕಳಕೊಂಡಿದ್ದರು. ಇದೀಗ ಮತ್ತೆ ಶಾಲೆ ಆರಂಭಿಸುವುದರೊಂದಿಗೆ ಕೊರೊನಾ ಬಳಿಕ ವಿದ್ಯಾರ್ಥಿಗಳು ಮತ್ತೆ ಶಾಲೆಯ ಹಾದಿ ಹಿಡಿಯಲಿದ್ದಾರೆ. ಹಾಗಿದ್ದರೂ, ಶಾಲೆಗೆ ಆಗಮಿಸುವುದನ್ನು ಕಡ್ಡಾಯ ಮಾಡುವಂತಿಲ್ಲ ಎಂಬ ಸೂಚನೆಯನ್ನೂ ಶಿಕ್ಷಣ ಇಲಾಖೆ ಶಾಲಾಡಳಿತ ಮಂಡಳಿಗಳಿಗೆ ನೀಡಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 05:32 pm
Mangalore Correspondent
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm