ಬ್ರೇಕಿಂಗ್ ನ್ಯೂಸ್
19-12-20 03:48 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.19: ಕೊನೆಗೂ ಶಾಲೆ ಆರಂಭಿಸುವತ್ತ ದಿಟ್ಟ ಹೆಜ್ಜೆ ಇಟ್ಟಿದೆ. ಜನವರಿ 1ರಿಂದಲೇ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಆರಂಭಿಸಲು ರಾಜ್ಯ ಸರಕಾರ ಹಸಿರು ನಿಶಾನೆ ನೀಡಿದೆ.
ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಪ್ರಮುಖ ಸಚಿವರ ಜೊತೆ ಸಭೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ ಶಾಲೆ ಆರಂಭಿಸಲು ನಿರ್ಧಾರ ತೆಗೆದುಕೊಂಡಿದ್ದಾಗಿ ಪ್ರಕಟಿಸಿದ್ದಾರೆ.

ಎರಡು ದಿನಗಳ ಹಿಂದಷ್ಟೇ ಕೊರೊನಾ ಸಲಹಾ ಸಮಿತಿ ರಾಜ್ಯ ಸರಕಾರಕ್ಕೆ ಈ ಬಗ್ಗೆ ವರದಿ ನೀಡಿತ್ತು. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಮತ್ತು ಕೊರೊನಾ ಸೋಂಕಿನ ಪ್ರಮಾಣ ತಗ್ಗಿರುವ ಕಾರಣ ಜನವರಿ ಒಂದರಿಂದಲೇ 10 ಮತ್ತು 12ನೇ ತರಗತಿಗಳನ್ನು ಆರಂಭಿಸಲು ಸಲಹೆ ಮಾಡಿತ್ತು. ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೂಡ ಅದಕ್ಕೆ ಒಪ್ಪಿದ್ದು, ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದರು.

15 ದಿನಗಳ ನಂತರ 9ನೇ ತರಗತಿ ಮತ್ತು ಮೊದಲ ಪಿಯು ತರಗತಿಗಳನ್ನು ಆರಂಭಿಸಲು ಕೂಡ ಸಲಹಾ ಮಂಡಳಿ ವರದಿಯಲ್ಲಿ ಹೇಳಿದ್ದರು. ಆ ಬಗ್ಗೆ ಮುಖ್ಯಮಂತ್ರಿ ಈಗಲೇ ಯಾವುದೇ ನಿರ್ಧಾರ ಪ್ರಕಟಿಸಿಲ್ಲ.
ಕೊರೊನಾ ಲಾಕ್ಡೌನ್ ಬಳಿಕ ಕಳೆದ 9 ತಿಂಗಳಿಂದ ಶಾಲೆ ಸ್ಥಗಿತಗೊಂಡಿತ್ತು. ಈ ನಡುವೆ, ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆದಿತ್ತು. ಅದು ಬಿಟ್ಟರೆ ಶಾಲೆ ಸಂಪೂರ್ಣವಾಗಿ ಸ್ಥಗಿತಗೊಂಡು ವಿದ್ಯಾರ್ಥಿಗಳಿಗೂ ಶಿಕ್ಷಣದ ಬಗ್ಗೆ ಆಸಕ್ತಿಯನ್ನೇ ಕಳಕೊಂಡಿದ್ದರು. ಇದೀಗ ಮತ್ತೆ ಶಾಲೆ ಆರಂಭಿಸುವುದರೊಂದಿಗೆ ಕೊರೊನಾ ಬಳಿಕ ವಿದ್ಯಾರ್ಥಿಗಳು ಮತ್ತೆ ಶಾಲೆಯ ಹಾದಿ ಹಿಡಿಯಲಿದ್ದಾರೆ. ಹಾಗಿದ್ದರೂ, ಶಾಲೆಗೆ ಆಗಮಿಸುವುದನ್ನು ಕಡ್ಡಾಯ ಮಾಡುವಂತಿಲ್ಲ ಎಂಬ ಸೂಚನೆಯನ್ನೂ ಶಿಕ್ಷಣ ಇಲಾಖೆ ಶಾಲಾಡಳಿತ ಮಂಡಳಿಗಳಿಗೆ ನೀಡಿದೆ.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm