ಬ್ರೇಕಿಂಗ್ ನ್ಯೂಸ್
23-04-25 01:06 pm Bangalore Correspondent ಕರ್ನಾಟಕ
ಬೆಂಗಳೂರು, ಎ.23 : ಸ್ಪೀಕರ್ ಯು.ಟಿ ಖಾದರ್ ಅವರ ಧರ್ಮದ ಹೆಸರೆತ್ತಿ ಆಕ್ಷೇಪ ಸೂಚಿಸಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಸಂಕಷ್ಟ ಎದುರಾಗಿದೆ. ಕಾಂಗ್ರೆಸ್ ಶಾಸಕರು ಹಕ್ಕುಚ್ಯುತಿ ಮಂಡಿಸಲು ದೂರು ನೀಡಿದ್ದು, ಶಾಸಕ ಸ್ಥಾನದಿಂದ ಅನರ್ಹಗೊಳ್ಳುವ ಭೀತಿ ಕಾಡುವಂತಾಗಿದೆ.
ಸ್ಪೀಕರ್ ಖಾದರ್ ಇತ್ತೀಚೆಗೆ 18 ಬಿಜೆಪಿ ಶಾಸಕರನ್ನು ಅಮಾನತು ಮಾಡಿದ್ದರು. ಈ ಅಮಾನತು ಆವೇಶವನ್ನು ಪ್ರಶ್ನಿಸಿ ಖಾಸಗಿ ಚಾನೆಲ್ ಒಂದಕ್ಕೆ ಪ್ರತಿಕ್ರಿಯೆ ನೀಡಿದ ಸಂದರ್ಭದಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಸ್ಪೀಕರ್ ಯುಟಿ ಖಾದರ್ ಅವರ ಧರ್ಮದ ಬಗ್ಗೆ ಆಕ್ಷೇಪ ಎತ್ತಿದ್ದರು. ಹೀಗಾಗಿ ಹರೀಶ್ ಪೂಂಜಾ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ಶಾಸಕರು ಹಕ್ಕುಚ್ಯುತಿ ಮಂಡಿಸಲು ಹಕ್ಕು ಬಾಧ್ಯತಾ ಸಮಿತಿ ಅಧ್ಯಕ್ಷರಿಗೆ ದೂರು ನೀಡಿದ್ದಾರೆ.
ಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ್ಣ ಸೇರಿ ಕೆಲ ಶಾಸಕರು ಹರೀಶ್ ಪೂಂಜಾ ವಿರುದ್ಧ ಹಕ್ಕುಚ್ಯುತಿ ಮಂಡಿಸಲು ದೂರು ನೀಡಿದ್ದಾರೆ. ಶಾಸಕ ಹರೀಶ್ ಪೂಂಜಾ ಅವರು ಸ್ಪೀಕರ್ ಧರ್ಮದ ವಿಚಾರ ಪ್ರಸ್ತಾಪಿಸಿದ್ದಾರೆ. ಆದ್ದರಿಂದ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಮನವಿ ಮಾಡಲಾಗಿದೆ. ಹಕ್ಕು ಭಾಧ್ಯತಾ ಸಮಿತಿ ಅಧ್ಯಕ್ಷ ಮಹಾಂತೇಶ ಕೌಜಲಗಿ ಅವರು ಈ ದೂರನ್ನು ಪರಿಶೀಲನೆ ನಡೆಸಲಿದ್ದಾರೆ.
ಸ್ಪೀಕರ್ ಯು.ಟಿ ಖಾದರ್ ವಿರುದ್ಧದ ವಿಚಾರ ಆಗಿರೋದ್ರಿಂದ ಈ ದೂರನ್ನು ಹಕ್ಕು ಭಾದ್ಯತೆ ಸಮಿತಿ ಸಭಾಧ್ಯಕ್ಷ ಯು.ಟಿ ಖಾದರ್ಗೆ ರವಾನೆ ಮಾಡುವ ಸಾಧ್ಯತೆ ಇದೆ. ಶಾಸಕ ಹರೀಶ್ ಪೂಂಜಾ ಪ್ರಕರಣದಲ್ಲಿ ಸ್ಪೀಕರ್ ಏನು ಕ್ರಮ ಕೈಗೊಳ್ಳುತ್ತಾರೆ ಅನ್ನೋದು ಕುತೂಹಲ ಕೆರಳಿಸಿದೆ.
Congress lawmakers, led by Government Chief Whip Ashok Pattan, on Tuesday lodged a breach-of-privilege complaint against BJP’s Belthangady MLA Harish Poonja for allegedly disrespecting Speaker U T Khader.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm