ಬ್ರೇಕಿಂಗ್ ನ್ಯೂಸ್
19-12-20 04:04 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.19: ಹೋರಾಟದ ಹೆಸರಿನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಅಕ್ರಮ ಆಸ್ತಿ ಮಾಡಿದ್ದಾರೆ. ಸರಕಾರಗಳನ್ನು ಬ್ಲಾಕ್ ಮೇಲ್ ಮಾಡಿಸಿ, ಐಷಾರಾಮಿ ಕಾರು, ಬಂಗಲೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಸರಕಾರ ತನಿಖೆ ನಡೆಸಬೇಕು ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಆಗ್ರಹಿಸಿದ್ದಾರೆ.
ಕೋಡಿಹಳ್ಳಿ ನಕಲಿ ರೈತ ಹೋರಾಟಗಾರ. ಹಸಿರು ಶಾಲು ಹಾಕಿಕೊಂಡು ರೈತರನ್ನು ವಂಚಿಸುವ ದಲ್ಲಾಳಿ. ಸಿದ್ದರಾಮಯ್ಯ, ಕುಮಾರಸ್ವಾಮಿ ಸರಕಾರ ಇದ್ದಾಗ ಮೈಸೂರು, ಮಂಡ್ಯದಲ್ಲಿ ರೈತರು ಸಾವಿಗೆ ಶರಣಾದಾಗ, ಈ ರೈತ ನಾಯಕ ತುಟಿಗೆ ಬೀಗ ಹಾಕಿಕೊಂಡಿದ್ದ. ಇವನ ಹೆಸರಿನಲ್ಲಿ ಹಿಂದೆ ಎರಡು ಎಕರೆ ಆಸ್ತಿ ಇದ್ದದ್ದು ಈಗ ಕೋಟ್ಯಂತರ ಆಸ್ತಿ ಮಾಡಿದ್ದಾನೆ. ಅದು ಎಲ್ಲಿಂದ ಬಂತು ಎನ್ನೋದನ್ನು ರಾಜ್ಯದ ಜನರಿಗೆ ಹೇಳಬಹುದಾ..? ಬೆಂಗಳೂರಿನಲ್ಲಿ ಬಂಗಲೆ ಕಟ್ಟಿಕೊಂಡು ವಾಸ್ತವ್ಯ ಹೂಡಿರುವ ನೀನು ಯಾವ ಸೀಮೆಯ ರೈತ ನಾಯಕ ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಈವರೆಗೆ ರೈತರಿಗೆ ದ್ರೋಹ ಮಾಡಿದ್ದೀಯಾ.. ಈಗ ಸಾರಿಗೆ ನೌಕರರ ಜೊತೆ ಸೇರಿ ಸರಕಾರದ ವಿರುದ್ಧ ಎತ್ತಿಕಟ್ಟುತ್ತೀಯಾ.. ನಾಲ್ಕು ದಿನ ಬಸ್ ಸಂಚಾರ ಸ್ಥಗಿತಗೊಳಿಸಿ ರಾಜ್ಯದ ಜನರಿಗೆ ಆಗಿರುವ ನಷ್ಟಕ್ಕೆ ಈತನೇ ಕಾರಣ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರ ಇರುವುದಕ್ಕೆ ಈತ ಕಾಂಗ್ರೆಸಿನವರ ಜೊತೆ ಸೇರಿ ರೈತರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾನೆ ಎಂದು ಮೂದಲಿಸಿದರು.

200 ಜನರಿಗೆ ಮೋಸ ಮಾಡಿ ಅಕ್ರಮ ಆಸ್ತಿ
ಬೆಂಗಳೂರು ನಗರದ ಆರ್ ಪಿಸಿ ಬಡಾವಣೆಯಲ್ಲಿ ಮನೆ ನಿರ್ಮಿಸಿಕೊಡುವುದಾಗಿ ಹೇಳಿ 2012ರಲ್ಲಿ 200ಕ್ಕಿಂತಲೂ ಹೆಚ್ಚು ಮಂದಿಗೆ ಮೋಸ ಮಾಡಿದ್ದೀಯಾ.. ಪ್ರತಿ ಕುಟುಂಬದಿಂದ 3ರಿಂದ 6 ಲಕ್ಷ ರೂ. ಪಡೆದು ಮೋಸ ಮಾಡಿದ್ದಾನೆ. ಭೈರಯ್ಯ ಎಂಬವರಿಂದ ಆರು ಲಕ್ಷ ರೂ. ಪಡೆದು ಮೋಸ ಆಗಿರುವ ಬಗ್ಗೆ ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಗ ಸಿದ್ದರಾಮಯ್ಯ ಸರಕಾರ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬೆಂಬಲಿಸಿತ್ತು. ಹಣ ಕೇಳಿದ ಭೈರಯ್ಯ ವಿರುದ್ಧ ಗೂಂಡಾಗಿರಿ ನಡೆಸಿದ್ದರು. ಆಬಳಿಕ ಬೈರಯ್ಯರಿಗೆ 1.50 ಲಕ್ಷ ರೂ. ಕೊಟ್ಟಿದ್ದ. ಹೀಗೆ 200 ಮಂದಿಯ ಹಣ ಪಡೆದು ಮೋಸ ಮಾಡಿದ್ದಾನೆ ಎಂದು ರೇಣುಕಾಚಾರ್ಯ ಗಂಭೀರ ಆರೋಪ ಮಾಡಿದ್ದಾರೆ.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm