ಬ್ರೇಕಿಂಗ್ ನ್ಯೂಸ್
19-12-20 04:43 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.19; ಲೋಕಾಯುಕ್ತ ಸಂಸ್ಥೆಯನ್ನು ರದ್ದು ಮಾಡುವ ಮೂಲಕ ಸಿದ್ದರಾಮಯ್ಯ ಜೈಲಿಗೆ ಹೋಗುವುದನ್ನು ತಪ್ಪಿಸಿಕೊಂಡರು ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಗಂಭೀರ ಆರೋಪ ಮಾಡಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅರ್ಕಾವತಿ ಭೂ ಹಗರಣದ ಪ್ರಕರಣದಲ್ಲಿ ಸಿದ್ದರಾಮಯ್ಯ ಜೈಲಿಗೆ ಹೋಗಬೇಕಾಗಿತ್ತು. ಆದರೆ, ಅದೇ ಸಂದರ್ಭದಲ್ಲಿ ತನಿಖೆ ನಡೆಸುತ್ತಿದ್ದ ಲೋಕಾಯುಕ್ತ ಸಂಸ್ಥೆಯನ್ನು ನಿರ್ಜೀವಗೊಳಿಸಿದರು. ಅದರ ಬದಲಿಗೆ, ಎಸಿಬಿ ಎಂಬ ಹೊಸ ವಿಭಾಗವನ್ನು ಆರಂಭಿಸಿ, ತಾವು ಜೈಲಿಗೆ ಹೋಗುವುದನ್ನು ತಪ್ಪಿಸಿಕೊಂಡರು. ಒಂದು ವೇಳೆ, ಅರ್ಕಾವತಿ ಹಗರಣ ಮತ್ತೆ ತೆರೆದುಕೊಂಡಲ್ಲಿ ಸಿದ್ದರಾಮಯ್ಯ ಎಲ್ಲಿ ಇರಬೇಕಾದೀತು ಎನ್ನುವುದನ್ನು ಊಹಿಸಿಕೊಳ್ಳಲಿ ಎಂದು ಟಾಂಗ್ ನೀಡಿದ್ದಾರೆ.
ಸಿದ್ದರಾಮಯ್ಯ ತಮ್ಮ ಸ್ವಕ್ಷೇತ್ರ ಚಾಮುಂಡೇಶ್ವರಿಯನ್ನು ಬಿಟ್ಟು ಓಡಿಹೋಗಿದ್ರು. ಅಲ್ಲಿ ಯಾಕೆ ಸೋಲಾಯ್ತು ಅನ್ನುವುದನ್ನು ಆತ್ಮವಿಮರ್ಶೆ ಮಾಡಿಕೊಳ್ಳಿ. ನೀವು ಸ್ವತಃ ಕಾಂಗ್ರೆಸ್ ಪಕ್ಷವನ್ನು ಡೆಮಾಲಿಶ್ ಮಾಡಿದ್ರಿ. ಆದರೆ, ಕಾಂಗ್ರೆಸನ್ನು ಕಾಪಾಡಿದ್ದು ದಲಿತ ಸಮುದಾಯ. ನೀವು ವಿಮರ್ಶೆ ಮಾಡಿಕೊಳ್ಳದೆ ಮಾತನಾಡಬೇಡಿ. ಚಾಮುಂಡೇಶ್ವರಿಯಲ್ಲಿ ಸೋಲಿನ ಸುಳಿವು ಸಿಕ್ಕಿದ್ದರಿಂದಲೇ ನೀವು ಬಾದಾಮಿಗೆ ಓಡಿದ್ರಿ. ಯಾಕೆ ನಿಮ್ಮ ಯೋಜನೆಗಳು ಚಾಮುಂಡೇಶ್ವರಿಯಲ್ಲಿ ಫಲ ನೀಡಲಿಲ್ಲ. ನೀವು ಯಾರೋ ಚಮಚಾಗಳನ್ನು ನಂಬಿ ಸೋತಿರಿ.

ನಿಮ್ಮನ್ನು ಜೆಡಿಎಸ್, ಕಾಂಗ್ರೆಸ್ ನಾಯಕರು ಸೋಲಿಸಿದ್ದಲ್ಲ. ನಿಮ್ಮನ್ನು ಸೋಲಿಸಿದ್ದು ಅಲ್ಲಿನ ಜನರು. ಹಿಂದೆ ಕೊರಟಗೆರೆಯಲ್ಲಿ ಪರಮೇಶ್ವರ್ ಅವರನ್ನು ಸೋಲಿಸಿದಾಗ, ಇದು ಗೊತ್ತಾಗಲಿಲ್ಲವೇ ಎಂದು ಪ್ರಶ್ನಿಸಿದ ವಿಶ್ವನಾಥ್, ಸದ್ಯಕ್ಕೆ ಕುಮಾರಸ್ವಾಮಿ ಸರಕಾರವನ್ನು ತಾವೇ ಬೀಳಿಸಿದ್ದು ಎಂದು ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ. ನಮ್ಮ ಮೇಲೆ ಇದ್ದ ಅಪವಾದದಿಂದ ಮುಕ್ತವಾಗಿದ್ದೇವೆ. ಇದಕ್ಕಾಗಿ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿಗೆ ಅಭಿನಂದಿಸುತ್ತೇನೆ ಎಂದರು.
ಸಿದ್ದರಾಮಯ್ಯರಿಗೆ ಇರುವಷ್ಟು ಹೊಟ್ಟೆಕಿಚ್ಚು ಬೇರೆ ಯಾರಿಗೂ ಇರಲಿಕ್ಕಿಲ್ಲ. ಸಿದ್ದರಾಮಯ್ಯ ಸೋಮನಹಳ್ಳಿಯ ಮುದುಕಿಯಂತಾಗಿದ್ದಾರೆ. ತಮ್ಮ ಕೋಳಿ ಕೂಗಿದರೆ ಮಾತ್ರ ಬೆಳಗಾಗೋದು ಅಂದ್ಕೊಂಡಿದ್ದಾರೆ. ಸುತ್ತ ಗಿರಕಿ ಹೊಡೆಯುವ ಮಂದಿಯೂ ಅದನ್ನೇ ಕಿವಿಗೆ ಊದುತ್ತಿದ್ದಾರೆ. ಸಿದ್ದರಾಮಯ್ಯ ಅವರನ್ನು ನಂಬಿಕೊಂಡು ಮೋಸ ಹೋಗುತ್ತಿದ್ದಾರೆ ಎಂದು ಕಟಕಿಯಾಡಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 05:32 pm
Mangalore Correspondent
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm