ಬ್ರೇಕಿಂಗ್ ನ್ಯೂಸ್
27-04-25 07:13 pm HK News Desk ಕರ್ನಾಟಕ
ಕಲಬುರಗಿ, ಏ 27: ಕಲಬುರಗಿ ನಗರದಲ್ಲಿ ಒಟ್ಟು 9 ಜನ ಪಾಕಿಸ್ತಾನದ ಪ್ರಜೆಗಳು ಅಧಿಕೃತವಾಗಿ ವಾಸವಿದ್ದು, ಅವರಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿಯ ಪ್ರಕಾರ ಹಿಂತಿರುಗಲು ಸೂಚಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ತಿಳಿಸಿದ್ದಾರೆ.
ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ, "ಈ 9 ಜನರಲ್ಲಿ ಇಬ್ಬರು ದೀರ್ಘಾವಧಿ ವೀಸಾ ಹೊಂದಿದ್ದು, ಉಳಿದ 7 ಜನರು ಸಂದರ್ಶಕರ ವೀಸಾ ಹೊಂದಿದ್ದಾರೆ. ಇವರು ಕಳೆದ 20 ವರ್ಷಗಳಿಂದ ಕಲಬುರಗಿಯಲ್ಲಿ ವಾಸವಾಗಿದ್ದಾರೆ. ಎಲ್ಲರಿಗೂ ನಿಯಮಾನುಸಾರ ಹಿಂತಿರುಗುವಂತೆ ಸೂಚನೆ ನೀಡಲಾಗಿದೆ" ಎಂದು ಹೇಳಿದರು.
"ವಿಸಿಟರ್ಸ್ ವೀಸಾ ಹೊಂದಿದ ಏಳು ಜನರಲ್ಲಿ ಒಬ್ಬರು ಮಹಿಳೆ ಅನುಮತಿ ಪಡೆದು ಅಮೆರಿಕಾಕ್ಕೆ ತೆರಳಿದ್ದಾರೆ. ಉಳಿದ ಆರು ಜನರಲ್ಲಿ ಮೂವರು ಪುರುಷರು ಮತ್ತು ಮೂವರು ಮಹಿಳೆಯರು ಇದ್ದಾರೆ" ಎಂದು ಮಾಹಿತಿ ನೀಡಿದರು.
ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪ್ರವಾಸಿ ತಾಣ ಪಹಲ್ಗಾಮ್ನಲ್ಲಿ ಭಯೋತ್ಪಾದಕರು 26 ಪ್ರವಾಸಿಗರನ್ನು ಕೊಂದಿದ್ದರು. ಇದರಿಂದ ಭಾರತ ಸರ್ಕಾರವು ಪಾಕಿಸ್ತಾನಿ ಪ್ರಜೆಗಳಿಗೆ ವೀಸಾ ಸೇವೆ ರದ್ದುಗೊಳಿಸಿ ಪಾಕ್ಗೆ ಕಠಿಣ ಸಂದೇಶ ರವಾನಿಸಿದೆ. ಹೀಗಾಗಿ ಭಾರತದಲ್ಲಿರುವ ಪಾಕ್ ಪ್ರಜೆಗಳಿಗೆ ವಾಪಸ್ ತೆರಳಲು ಗಡುವು ನೀಡಲಾಗಿದೆ. ಕರ್ನಾಟಕದ ಮೈಸೂರು, ಉತ್ತರ ಕನ್ನಡ, ತುಮಕೂರು ಮತ್ತು ದಾವಣಗೆರೆ ಮುಂತಾದ ಕಡೆಗಳಲ್ಲಿ ಒಟ್ಟು 92 ಜನ ಪಾಕ್ ಪ್ರಜೆಗಳು ವಾಸವಿದ್ದಾರೆ ಎಂದು ಆಯಾ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯ ಕಾರ್ಯಾಚರಣೆಯಲ್ಲಿ ತಿಳಿದು ಬಂದಿದೆ.
ಪ್ರಾದೇಶಿಕ ನೋಂದಣಿ ಕೇಂದ್ರ (FRRO) ದಲ್ಲಿ ನೋಂದಾಯಿಸಲ್ಪಟ್ಟಿರುವ ಪಾಕ್ ಪ್ರಜೆಗಳ ಕುರಿತು ಈಗಾಗಲೇ ಆಯಾ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗಳಿಗೆ ಮಾಹಿತಿ ನೀಡಲಾಗಿದೆ. ಅದರನ್ವಯ ಆಯಾ ಜಿಲ್ಲೆಗಳಲ್ಲಿರುವ ಪಾಕ್ ಪ್ರಜೆಗಳು ಭಾರತ ತೊರೆಯಬೇಕಿದೆ. ನೋಂದಾಯಿಸಲ್ಪಡದ ಹಾಗೂ ಅನಧಿಕೃತವಾಗಿ ನೆಲೆಸಿರುವವರನ್ನ ಸ್ಥಳಿಯ ಪೊಲೀಸರು ಪತ್ತೆಹಚ್ಚಿ ಬಂಧಿಸಿ ಬಂಧನ ಕೇಂದ್ರದಲ್ಲಿರಿಸುತ್ತಾರೆ. ನಂತರ ರಾಜ್ಯ ಗೃಹ ಇಲಾಖೆಯಿಂದ ಕೇಂದ್ರ ಗೃಹ ಇಲಾಖೆಗೆ ಮಾಹಿತಿ ನೀಡಲಾಗುತ್ತದೆ.
ಕೇಂದ್ರ ಗೃಹ ಸಚಿವಾಲಯದ ಮೂಲಕ ಭಾರತದಲ್ಲಿರುವ ಪಾಕಿಸ್ತಾನ ರಾಯಭಾರ ಕಚೇರಿಗೆ ಮಾಹಿತಿ ನೀಡಲಾಗುತ್ತದೆ. ಬಳಿಕ ರಾಯಭಾರ ಕಚೇರಿಯ ಅಧಿಕಾರಿಗಳು ವೆರಿಫಿಕೇಷನ್ ಪ್ರಕ್ರಿಯೆ ಪೂರ್ಣಗೊಳಿಸಿ ತಮ್ಮ ಪ್ರಜೆಗಳನ್ನ ವಾಪಾಸ್ ಕಳಿಸಬೇಕಾಗುತ್ತದೆ.
9 Pakistani Nationals Residing in Kalaburagi for 20 Years, Police Commissioner Sharanappa Issues Deportation Notice.
17-10-25 08:39 pm
HK News Desk
ಆರೆಸ್ಸೆಸ್ ಚಟುವಟಿಕೆ ಕಡಿವಾಣಕ್ಕೆ ಕೌಂಟರ್ ; ಸಾರ್ವಜ...
17-10-25 05:27 pm
ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಬ್ರೇಕ...
16-10-25 09:04 pm
ನವೆಂಬರಲ್ಲಿ ಅಧಿಕಾರ ಬಿಡಲು ಹೈಕಮಾಂಡ್ ಹೇಳಿಲ್ಲ, ಸಿದ...
16-10-25 04:44 pm
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
17-10-25 05:25 pm
HK News Desk
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
17-10-25 09:36 pm
Mangalore Correspondent
1971ರ ಭಾರತ - ಪಾಕ್ ಯುದ್ಧದಲ್ಲಿ ಹೆಲಿಕಾಪ್ಟರ್ ನಿಂದ...
16-10-25 10:37 pm
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಕೋಗಿಲೆ ದಿನೇಶ...
16-10-25 01:11 pm
17-10-25 03:27 pm
Bangalore Correspondent
Vitla Honeytrap case, Police, Mangalore: ಬಶೀರ...
17-10-25 03:23 pm
ಆತ್ಮಶಕ್ತಿ ಬೆನ್ನಲ್ಲೇ ಒಡಿಯೂರು ಸಹಕಾರಿ ಬ್ಯಾಂಕಿಗೂ...
17-10-25 11:56 am
ಕೆಪಿಸಿಸಿಯಲ್ಲಿ ಕೆಲಸ ಮಾಡುತ್ತಿದ್ದೇನೆಂದು ಹೇಳಿ ಹಲವ...
17-10-25 11:53 am
ಹುಷಾರಿಲ್ಲದ ವೈದ್ಯೆ ಪತ್ನಿಯನ್ನು ಕೈಯಾರೆ ಇಂಜೆಕ್ಷನ್...
15-10-25 04:51 pm