ಬ್ರೇಕಿಂಗ್ ನ್ಯೂಸ್
27-04-25 07:13 pm HK News Desk ಕರ್ನಾಟಕ
ಕಲಬುರಗಿ, ಏ 27: ಕಲಬುರಗಿ ನಗರದಲ್ಲಿ ಒಟ್ಟು 9 ಜನ ಪಾಕಿಸ್ತಾನದ ಪ್ರಜೆಗಳು ಅಧಿಕೃತವಾಗಿ ವಾಸವಿದ್ದು, ಅವರಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿಯ ಪ್ರಕಾರ ಹಿಂತಿರುಗಲು ಸೂಚಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ತಿಳಿಸಿದ್ದಾರೆ.
ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ, "ಈ 9 ಜನರಲ್ಲಿ ಇಬ್ಬರು ದೀರ್ಘಾವಧಿ ವೀಸಾ ಹೊಂದಿದ್ದು, ಉಳಿದ 7 ಜನರು ಸಂದರ್ಶಕರ ವೀಸಾ ಹೊಂದಿದ್ದಾರೆ. ಇವರು ಕಳೆದ 20 ವರ್ಷಗಳಿಂದ ಕಲಬುರಗಿಯಲ್ಲಿ ವಾಸವಾಗಿದ್ದಾರೆ. ಎಲ್ಲರಿಗೂ ನಿಯಮಾನುಸಾರ ಹಿಂತಿರುಗುವಂತೆ ಸೂಚನೆ ನೀಡಲಾಗಿದೆ" ಎಂದು ಹೇಳಿದರು.
"ವಿಸಿಟರ್ಸ್ ವೀಸಾ ಹೊಂದಿದ ಏಳು ಜನರಲ್ಲಿ ಒಬ್ಬರು ಮಹಿಳೆ ಅನುಮತಿ ಪಡೆದು ಅಮೆರಿಕಾಕ್ಕೆ ತೆರಳಿದ್ದಾರೆ. ಉಳಿದ ಆರು ಜನರಲ್ಲಿ ಮೂವರು ಪುರುಷರು ಮತ್ತು ಮೂವರು ಮಹಿಳೆಯರು ಇದ್ದಾರೆ" ಎಂದು ಮಾಹಿತಿ ನೀಡಿದರು.
ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪ್ರವಾಸಿ ತಾಣ ಪಹಲ್ಗಾಮ್ನಲ್ಲಿ ಭಯೋತ್ಪಾದಕರು 26 ಪ್ರವಾಸಿಗರನ್ನು ಕೊಂದಿದ್ದರು. ಇದರಿಂದ ಭಾರತ ಸರ್ಕಾರವು ಪಾಕಿಸ್ತಾನಿ ಪ್ರಜೆಗಳಿಗೆ ವೀಸಾ ಸೇವೆ ರದ್ದುಗೊಳಿಸಿ ಪಾಕ್ಗೆ ಕಠಿಣ ಸಂದೇಶ ರವಾನಿಸಿದೆ. ಹೀಗಾಗಿ ಭಾರತದಲ್ಲಿರುವ ಪಾಕ್ ಪ್ರಜೆಗಳಿಗೆ ವಾಪಸ್ ತೆರಳಲು ಗಡುವು ನೀಡಲಾಗಿದೆ. ಕರ್ನಾಟಕದ ಮೈಸೂರು, ಉತ್ತರ ಕನ್ನಡ, ತುಮಕೂರು ಮತ್ತು ದಾವಣಗೆರೆ ಮುಂತಾದ ಕಡೆಗಳಲ್ಲಿ ಒಟ್ಟು 92 ಜನ ಪಾಕ್ ಪ್ರಜೆಗಳು ವಾಸವಿದ್ದಾರೆ ಎಂದು ಆಯಾ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯ ಕಾರ್ಯಾಚರಣೆಯಲ್ಲಿ ತಿಳಿದು ಬಂದಿದೆ.
ಪ್ರಾದೇಶಿಕ ನೋಂದಣಿ ಕೇಂದ್ರ (FRRO) ದಲ್ಲಿ ನೋಂದಾಯಿಸಲ್ಪಟ್ಟಿರುವ ಪಾಕ್ ಪ್ರಜೆಗಳ ಕುರಿತು ಈಗಾಗಲೇ ಆಯಾ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗಳಿಗೆ ಮಾಹಿತಿ ನೀಡಲಾಗಿದೆ. ಅದರನ್ವಯ ಆಯಾ ಜಿಲ್ಲೆಗಳಲ್ಲಿರುವ ಪಾಕ್ ಪ್ರಜೆಗಳು ಭಾರತ ತೊರೆಯಬೇಕಿದೆ. ನೋಂದಾಯಿಸಲ್ಪಡದ ಹಾಗೂ ಅನಧಿಕೃತವಾಗಿ ನೆಲೆಸಿರುವವರನ್ನ ಸ್ಥಳಿಯ ಪೊಲೀಸರು ಪತ್ತೆಹಚ್ಚಿ ಬಂಧಿಸಿ ಬಂಧನ ಕೇಂದ್ರದಲ್ಲಿರಿಸುತ್ತಾರೆ. ನಂತರ ರಾಜ್ಯ ಗೃಹ ಇಲಾಖೆಯಿಂದ ಕೇಂದ್ರ ಗೃಹ ಇಲಾಖೆಗೆ ಮಾಹಿತಿ ನೀಡಲಾಗುತ್ತದೆ.
ಕೇಂದ್ರ ಗೃಹ ಸಚಿವಾಲಯದ ಮೂಲಕ ಭಾರತದಲ್ಲಿರುವ ಪಾಕಿಸ್ತಾನ ರಾಯಭಾರ ಕಚೇರಿಗೆ ಮಾಹಿತಿ ನೀಡಲಾಗುತ್ತದೆ. ಬಳಿಕ ರಾಯಭಾರ ಕಚೇರಿಯ ಅಧಿಕಾರಿಗಳು ವೆರಿಫಿಕೇಷನ್ ಪ್ರಕ್ರಿಯೆ ಪೂರ್ಣಗೊಳಿಸಿ ತಮ್ಮ ಪ್ರಜೆಗಳನ್ನ ವಾಪಾಸ್ ಕಳಿಸಬೇಕಾಗುತ್ತದೆ.
9 Pakistani Nationals Residing in Kalaburagi for 20 Years, Police Commissioner Sharanappa Issues Deportation Notice.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm