ಬ್ರೇಕಿಂಗ್ ನ್ಯೂಸ್
29-04-25 04:28 pm HK News Desk ಕರ್ನಾಟಕ
ಬೆಂಗಳೂರು, ಎ.29 : ಮಂಗಳೂರಿನಲ್ಲಿ ಗಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ವ್ಯಕ್ತಿಯೊಬ್ಬ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಕ್ಕೆ ಅಪರಿಚಿತ ವ್ಯಕ್ತಿಯ ಮೇಲೆ ಗುಂಪಿನಿಂದ ಹಲ್ಲೆ ಆಗಿರುವ ಮಾಹಿತಿ ಲಭಿಸಿದೆ. ಹಲ್ಲೆ ನಂತರ, ಆ ವ್ಯಕ್ತಿ ಸಾವಿಗೀಡಾಗಿದ್ದಾನೆ. ವ್ಯಕ್ತಿಯ ಹೆಸರು ಗೊತ್ತಾಗಿಲ್ಲ. ಹೊರ ರಾಜ್ಯದ ವ್ಯಕ್ತಿ ಇರಬೇಕೆಂದು ಮಾಹಿತಿ ಇದೆ. ಘಟನೆ ಸಂಬಂಧಿಸಿ ಪೊಲೀಸರು 10-12 ಮಂದಿಯನ್ನು ಬಂಧಿಸಿದ್ದಾರೆ ಎಂದು ರಾಜ್ಯದ ಗೃಹ ಸಚಿವ ಜಿ. ಪರಮೇಶ್ವರ್ ರಾಷ್ಟ್ರೀಯ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಲೋಕಲ್ ಕ್ರಿಕೆಟ್ ಆಡುತ್ತಿದ್ದಾಗ ವ್ಯಕ್ತಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾನೆ. ಇದರಿಂದ ಸಿಟ್ಟುಗೊಂಡ ಉದ್ರಿಕ್ತರು ಗುಂಪು ಸೇರಿ ಹಲ್ಲೆ ಕೃತ್ಯ ನಡೆಸಿದ್ದಾರೆ. ಇದರಿಂದ ಆತನಿಗೆ ಗಾಯವಾಗಿತ್ತು. ಗಾಯಗೊಂಡಿದ್ದ ವ್ಯಕ್ತಿ ಬಳಿಕ ಸಾವಿಗೀಡಾಗಿದ್ದಾನೆ. ಇನ್ನೂ ಆ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಆತನ ಹಿನ್ನೆಲೆ ಪತ್ತೆಗಾಗಿ ಪೊಲೀಸರು ತಂಡ ರಚಿಸಿದ್ದಾರೆ.
ಕರ್ನಾಟಕದಂತಹ ಶಾಂತಿಯುತ ರಾಜ್ಯದಲ್ಲಿ ಇಂತಹ ಸ್ಥಿತಿಯಾಗಬಾರದು. ಯಾವುದೇ ಕಾರಣಕ್ಕು ಕಾನೂನು ಕೈಗೆತ್ತಿಕೊಳ್ಳುವ ಸ್ಥಿತಿ ಬರಬಾರದು. ಘಟನೆ ಹಿಂದೆ ಯಾರಿದ್ದಾರೆ, ನಿರ್ದಿಷ್ಟವಾಗಿ ಯಾರಿದ್ದಾರೆ ಅಂತ ಗೊತ್ತಾಗಿಲ್ಲ. ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಮಂಗಳೂರಿನಂತಹ ಕೋಮು ಸೂಕ್ಷ್ಮ ಪ್ರದೇಶದಲ್ಲಿ ಸಾರ್ವಜನಿಕರು ಶಾಂತಿ, ಸಾಮರಸ್ಯ ಕಾಪಾಡಬೇಕೆಂದು ಮನವಿ ಮಾಡುತ್ತೇನೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಮಂಗಳೂರು ಪೊಲೀಸರು ಗುಂಪು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ 15 ಜನರನ್ನು ಬಂಧಿಸಿದ್ದಾರೆ. ಆದರೆ ಯಾವ ಕಾರಣಕ್ಕೆ ಗಲಾಟೆ ಆಗಿತ್ತು. ಹಲ್ಲೆ ಯಾವ ಕಾರಣಕ್ಕೆ ನಡೆಸಿದ್ದರು ಎನ್ನುವುದರ ಬಗ್ಗೆ ಮಾಹಿತಿ ನೀಡಿಲ್ಲ. ಆರೋಪಿಗಳನ್ನು ತನಿಖೆ ನಡೆಸಿದ ಬಳಿಕವಷ್ಟೇ ಇದರ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ. ಇದೇ ವೇಳೆ, ದೇಶ ವಿರೋಧಿ ಘೋಷಣೆ ಕೂಗಿದ್ದಕ್ಕಾಗಿ ಗುಂಪು ಹಲ್ಲೆ ನಡೆಸಿರುವುದಾಗಿ ವದಂತಿ ಸೃಷ್ಟಿಯಾಗಿದೆ.
Mangalore Kudupu Mob Attack and Murder Incident, Man Allegedly Raised Anti National Slogans While Playing Cricket, Minister Parameshwar Responds.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm