ಬ್ರೇಕಿಂಗ್ ನ್ಯೂಸ್
29-04-25 04:28 pm HK News Desk ಕರ್ನಾಟಕ
ಬೆಂಗಳೂರು, ಎ.29 : ಮಂಗಳೂರಿನಲ್ಲಿ ಗಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ವ್ಯಕ್ತಿಯೊಬ್ಬ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಕ್ಕೆ ಅಪರಿಚಿತ ವ್ಯಕ್ತಿಯ ಮೇಲೆ ಗುಂಪಿನಿಂದ ಹಲ್ಲೆ ಆಗಿರುವ ಮಾಹಿತಿ ಲಭಿಸಿದೆ. ಹಲ್ಲೆ ನಂತರ, ಆ ವ್ಯಕ್ತಿ ಸಾವಿಗೀಡಾಗಿದ್ದಾನೆ. ವ್ಯಕ್ತಿಯ ಹೆಸರು ಗೊತ್ತಾಗಿಲ್ಲ. ಹೊರ ರಾಜ್ಯದ ವ್ಯಕ್ತಿ ಇರಬೇಕೆಂದು ಮಾಹಿತಿ ಇದೆ. ಘಟನೆ ಸಂಬಂಧಿಸಿ ಪೊಲೀಸರು 10-12 ಮಂದಿಯನ್ನು ಬಂಧಿಸಿದ್ದಾರೆ ಎಂದು ರಾಜ್ಯದ ಗೃಹ ಸಚಿವ ಜಿ. ಪರಮೇಶ್ವರ್ ರಾಷ್ಟ್ರೀಯ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಲೋಕಲ್ ಕ್ರಿಕೆಟ್ ಆಡುತ್ತಿದ್ದಾಗ ವ್ಯಕ್ತಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾನೆ. ಇದರಿಂದ ಸಿಟ್ಟುಗೊಂಡ ಉದ್ರಿಕ್ತರು ಗುಂಪು ಸೇರಿ ಹಲ್ಲೆ ಕೃತ್ಯ ನಡೆಸಿದ್ದಾರೆ. ಇದರಿಂದ ಆತನಿಗೆ ಗಾಯವಾಗಿತ್ತು. ಗಾಯಗೊಂಡಿದ್ದ ವ್ಯಕ್ತಿ ಬಳಿಕ ಸಾವಿಗೀಡಾಗಿದ್ದಾನೆ. ಇನ್ನೂ ಆ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಆತನ ಹಿನ್ನೆಲೆ ಪತ್ತೆಗಾಗಿ ಪೊಲೀಸರು ತಂಡ ರಚಿಸಿದ್ದಾರೆ.
ಕರ್ನಾಟಕದಂತಹ ಶಾಂತಿಯುತ ರಾಜ್ಯದಲ್ಲಿ ಇಂತಹ ಸ್ಥಿತಿಯಾಗಬಾರದು. ಯಾವುದೇ ಕಾರಣಕ್ಕು ಕಾನೂನು ಕೈಗೆತ್ತಿಕೊಳ್ಳುವ ಸ್ಥಿತಿ ಬರಬಾರದು. ಘಟನೆ ಹಿಂದೆ ಯಾರಿದ್ದಾರೆ, ನಿರ್ದಿಷ್ಟವಾಗಿ ಯಾರಿದ್ದಾರೆ ಅಂತ ಗೊತ್ತಾಗಿಲ್ಲ. ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಮಂಗಳೂರಿನಂತಹ ಕೋಮು ಸೂಕ್ಷ್ಮ ಪ್ರದೇಶದಲ್ಲಿ ಸಾರ್ವಜನಿಕರು ಶಾಂತಿ, ಸಾಮರಸ್ಯ ಕಾಪಾಡಬೇಕೆಂದು ಮನವಿ ಮಾಡುತ್ತೇನೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಮಂಗಳೂರು ಪೊಲೀಸರು ಗುಂಪು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ 15 ಜನರನ್ನು ಬಂಧಿಸಿದ್ದಾರೆ. ಆದರೆ ಯಾವ ಕಾರಣಕ್ಕೆ ಗಲಾಟೆ ಆಗಿತ್ತು. ಹಲ್ಲೆ ಯಾವ ಕಾರಣಕ್ಕೆ ನಡೆಸಿದ್ದರು ಎನ್ನುವುದರ ಬಗ್ಗೆ ಮಾಹಿತಿ ನೀಡಿಲ್ಲ. ಆರೋಪಿಗಳನ್ನು ತನಿಖೆ ನಡೆಸಿದ ಬಳಿಕವಷ್ಟೇ ಇದರ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ. ಇದೇ ವೇಳೆ, ದೇಶ ವಿರೋಧಿ ಘೋಷಣೆ ಕೂಗಿದ್ದಕ್ಕಾಗಿ ಗುಂಪು ಹಲ್ಲೆ ನಡೆಸಿರುವುದಾಗಿ ವದಂತಿ ಸೃಷ್ಟಿಯಾಗಿದೆ.
Mangalore Kudupu Mob Attack and Murder Incident, Man Allegedly Raised Anti National Slogans While Playing Cricket, Minister Parameshwar Responds.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 05:10 pm
HK News Staffer
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm