ಬ್ರೇಕಿಂಗ್ ನ್ಯೂಸ್
02-05-25 08:44 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 02: ಹಿಂದುತ್ವ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಫಾಝಿಲ್ ಕೊಲೆಗೆ ಪ್ರತಿಕಾರ ಅಲ್ಲ ಎಂದು ಸ್ವತಃ ಫಾಝಿಲ್ ಅವರ ಕುಟುಂಬಸ್ಥರೇ ತಿಳಿಸಿದ್ದಾರೆ ಎಂದು ಸ್ಪೀಕರ್ ಯು.ಟಿ ಖಾದರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ಫಾಝಿಲ್ ತಂದೆ ಹಾಗೂ ಸಹೋದರರು ಮಾತನಾಡಿದ್ದಾರೆ. ಸುಹಾಸ್ ಕೊಲೆಗೂ ನಮಗೂ ಯಾವುದೇ ಸಂಬಂಧ ಇಲ್ಲ ನಮಗೂ ಈ ಕೃತ್ಯಕ್ಕೂ ಯಾವುದೇ ಸಂಬಂಧ ಇಲ್ಲ. ಇಂತಹ ಪ್ರತಿಕಾರದ ಆಲೋಚನೆಯನ್ನು ನಾವು ಮಾಡಿಯೂ ಇಲ್ಲ. ನಾವು ಎಲ್ಲವನ್ನೂ ಅಂದೇ ದೇವರ ಪಾಲಿಗೆ ಬಿಟ್ಟಿದ್ದೇವೆ ಎಂದಿದ್ದಾರೆ ಎಂದು ತಿಳಿಸಿದರು.
ಇದೆಲ್ಲವೂ ವೈಯಕ್ತಿಕವಾದ ದ್ವೇಷಕ್ಕಾಗಿ ನಡೆದಿರುವ ಘಟನೆಯಾಗಿದೆ. ಕೊಲ್ಲಲ್ಪಟ್ಟ ಸುಹಾಸ್ ಶೆಟ್ಟಿ ಈ ಹಿಂದೆ ಕೀರ್ತಿ ಶೆಟ್ಟಿ ಮರ್ಡರ್ ಕೇಸಲ್ಲಿ ಪ್ರಮುಖ ಆರೋಪಿಯಾಗಿದ್ದರು. ಅಷ್ಟೇ ಅಲ್ಲದೆ, 2022 ರಲ್ಲಿ ನಡೆದ ಫಾಝಿಲ್ ಕೊಲೆ ಪ್ರಕರಣದಲ್ಲೂ ಪ್ರಮುಖ ಆರೋಪಿ. ವೈಯಕ್ತಿಕವಾದ ಗುಂಪು ಗಳ ನಡುವಿನ ಘರ್ಷಣೆ ಇದು. ಧರ್ಮ ಧರ್ಮದ ದ್ವೇಷ ಅಲ್ಲ ಇದು ಎಂದು ತಿಳಿಸಿದರು.
ಪೊಲೀಸ್ ತನಿಖೆಯಿಂದ ಸತ್ಯ ಹೊರಬರಲಿದೆ, ಯಾವುದೇ ತನಿಖೆಗೂ ನಾವು ಸಿದ್ಧ ;
ಯಾವುದೇ ಸಂದರ್ಭದಲ್ಲಿ ಪೊಲೀಸರಿಗೆ ಸಹಕಾರ ನೀಡಲು ನಾವು ಸಿದ್ಧ. ನಾವು ಮನೆಯಲ್ಲೇ ಇರುತ್ತೇವೆ. ಯಾವುದೇ ತನಿಖೆಗೂ ನಾವು ಸಿದ್ಧ, ತನಿಖೆ ಎದುರಿಸಲೂ ಸಿದ್ಧ ಎಂದು ಅವರು ನನಗೆ ತಿಳಿಸಿದ್ದಾರೆ. ಎಲ್ಲವೂ ಪೊಲೀಸ್ ತನಿಖೆಯ ಮೂಲಕ ಬಹಿರಂಗವಾಗಲಿದೆ. ಮೊದಲು ದುಷ್ಕರ್ಮಿಗಳ ಬಂಧನ ಆಗಬೇಕು. ಹೀಗಾಗಿ ಜನರು ಶಾಂತವಾಗಿ ವರ್ತಿಸಬೇಕು. ಇಂತಹ ಘಟನೆಗಳು ಮುಂದೆ ಆಗದಂತೆ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದರು.
ಇದು ಒಂದು ವರ್ಗದ ಸಮಸ್ಯೆ ಅಲ್ಲ. ದಕ್ಷಿಣ ಕನ್ನಡ ಜಿಲ್ಲೆ ಎಲ್ಲಾ ಕ್ಷೇತ್ರದಲ್ಲೂ ಪ್ರಸಿದ್ಧ. ಎಲ್ಲರೂ ಮಂಗಳೂರಿಗೆ ಬರಬೇಕು ಎಂಬ ಪ್ರೇರಣೆ ಕೊಡುವ ಪ್ರದೇಶವಾಗಿದೆ. ಬೆಂಗಳೂರು ನಂತರ ಮಂಗಳೂರು ಪ್ರಸಿದ್ಧ ಜಿಲ್ಲೆಯಾಗಿದೆ. ಜಿಲ್ಲೆಯಲ್ಲಿ ಮತ್ತಷ್ಟು ಅಭಿವೃದ್ದಿ ಆಗಲು ಎಲ್ಲಾ ಸಮಾಜದ ಜನರು ಸಹಕಾರ ಕೊಡಬೇಕು ಎಂದು ಮನವಿ ಮಾಡಿದರು.
ಕಾನೂನು ಸುವ್ಯವಸ್ಥೆ ಕಾಪಾಡಿ ಸುಹಾಸ್ ಶೆಟ್ಟಿ ಕೊಲೆ ನಂತರ ನಗರದಲ್ಲಿ ಪರಿಸ್ಥಿತಿ ಸಾಕಷ್ಟು ಹದಗೆಟ್ಟಿದೆ. ಹೀಗಾಗಿ, ಆರೋಪಿಗಳನ್ನು ಶೀಘ್ರ ಪತ್ತೆ ಹಚ್ಚಿ, ಕಾನೂನು ಸುವ್ಯವಸ್ಥೆ ಕಾಪಾಡಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸ್ಪೀಕರ್ ಯು.ಟಿ ಖಾದರ್ ಸೂಚನೆ ನೀಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಗೃಹ ಇಲಾಖೆಯೊಂದಿಗೂ ಚರ್ಚೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳಲು ಬೇಕಾದ ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಗುರುವಾರ ರಾತ್ರಿ 8.30 ಕ್ಕೆ ಸುಹಾಸ್ ಶೆಟ್ಟಿ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ಹತ್ಯೆ ಮಾಡಿದ್ದರು. ಮಂಗಳೂರಿನ ಕಿನ್ನಿಪದವು ಎಂಬಲ್ಲಿ ಈ ಕೃತ್ಯ ನಡೆದಿದೆ. ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಈ ಕೃತ್ಯವನ್ನು ಎಸಗಿದೆ. ಈಗಾಗಲೇ ಆರೋಪಿಗಳಿಗೆ ಪೊಲೀಸರು ಬಲೆ ಬೀಸಿದ್ದಾರೆ. ಈ ಘಟನೆಯ ಬೆನ್ನಲ್ಲೇ ಕೆಲವು ಚೂರಿ ಇರಿತ, ತಲವಾರು ದಾಳಿಯಂತಹ ಘಟನೆಗಳು ನಡೆದಿವೆ.
U.T. Khader on Thursday clarified that the murder of Suhas Shetty does not have any religious angle or links to the revenge killing of Fazil, as speculated by some groups.
17-10-25 08:39 pm
HK News Desk
ಆರೆಸ್ಸೆಸ್ ಚಟುವಟಿಕೆ ಕಡಿವಾಣಕ್ಕೆ ಕೌಂಟರ್ ; ಸಾರ್ವಜ...
17-10-25 05:27 pm
ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಬ್ರೇಕ...
16-10-25 09:04 pm
ನವೆಂಬರಲ್ಲಿ ಅಧಿಕಾರ ಬಿಡಲು ಹೈಕಮಾಂಡ್ ಹೇಳಿಲ್ಲ, ಸಿದ...
16-10-25 04:44 pm
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
17-10-25 05:25 pm
HK News Desk
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
17-10-25 09:36 pm
Mangalore Correspondent
1971ರ ಭಾರತ - ಪಾಕ್ ಯುದ್ಧದಲ್ಲಿ ಹೆಲಿಕಾಪ್ಟರ್ ನಿಂದ...
16-10-25 10:37 pm
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಕೋಗಿಲೆ ದಿನೇಶ...
16-10-25 01:11 pm
17-10-25 03:27 pm
Bangalore Correspondent
Vitla Honeytrap case, Police, Mangalore: ಬಶೀರ...
17-10-25 03:23 pm
ಆತ್ಮಶಕ್ತಿ ಬೆನ್ನಲ್ಲೇ ಒಡಿಯೂರು ಸಹಕಾರಿ ಬ್ಯಾಂಕಿಗೂ...
17-10-25 11:56 am
ಕೆಪಿಸಿಸಿಯಲ್ಲಿ ಕೆಲಸ ಮಾಡುತ್ತಿದ್ದೇನೆಂದು ಹೇಳಿ ಹಲವ...
17-10-25 11:53 am
ಹುಷಾರಿಲ್ಲದ ವೈದ್ಯೆ ಪತ್ನಿಯನ್ನು ಕೈಯಾರೆ ಇಂಜೆಕ್ಷನ್...
15-10-25 04:51 pm