ಬ್ರೇಕಿಂಗ್ ನ್ಯೂಸ್
04-05-25 01:18 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.04: ಸುಹಾಸ್ ಶೆಟ್ಟಿ ಮೇಲೂ ಕೊಲೆ ಸೇರಿದಂತೆ ಐದು ಕೇಸ್ಗಳಿವೆ. ಹೀಗಾಗಿ, ನಾವು ಅವರ ಮನೆಗೆ ಭೇಟಿ ಕೊಟ್ಟಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿಕೆ ನೀಡಿದರು.
ಸುಹಾಸ್ ಶೆಟ್ಟಿ ಕುಟುಂಬಕ್ಕೆ ಸರ್ಕಾರದಿಂದ ಭೇಟಿ ನೀಡಿ ಯಾರೂ ಸಾಂತ್ವನ ಹೇಳದ ವಿಚಾರವಾಗಿ ಮಾತನಾಡಿದ ಅವರು, ಇದು ಒಂದು ಕೊಲೆ ಪ್ರಕರಣ. ಸುಹಾಸ್ ಶೆಟ್ಟಿ ಮೇಲೂ ಕೇಸ್ಗಳಿವೆ, ಐದು ಕೇಸ್ಗಳು ಅವರ ಮೇಲಿವೆ. ಹಾಗಾಗಿ, ನಾವು ಭೇಟಿ ಕೊಟ್ಟಿಲ್ಲ. ಆದರೆ, ಸುಹಾಸ್ ಶೆಟ್ಟಿ ಮನೆಗೆ ನ್ಯಾಯ ಕೊಡಿಸುವ ಕೆಲಸ ಸರ್ಕಾರ ಮಾಡಲಿದೆ ಎಂದು ಸ್ಪಷ್ಟಪಡಿಸಿದರು.
ಹಿಂದೂ ಕಾರ್ಯರ್ಕನ ಕೊಲೆ ಪ್ರಕರಣದಲ್ಲಿ ಬಂಧಿತರು ನಿಜವಾದ ಆರೋಪಿಗಳಾ ಎಂಬ ಅನುಮಾನ ವ್ಯಕ್ತವಾಗ್ತಿರುವ ಕುರಿತು ಪ್ರತಿಕ್ರಿಯಿಸಿ, ಯಾರನ್ನೋ ಹೇಗೆ ಆರೋಪಿ ಅಂತ ಹೇಳಲು ಆಗುತ್ತಾ? ಕೊಲೆ ಪ್ರಕರಣದಲ್ಲಿ ಯರ್ಯಾರನ್ನೋ ಬಂಧಿಸಲು ಆಗಲ್ಲ ಎಂದು ತಿಳಿಸಿದರು.
ನಿನ್ನೆ ಮುಸ್ಲಿಂ ಸಮುದಾಯದ ಪ್ರಮುಖರು ಅವರೇ ಬಂದು ನನ್ನ ಭೇಟಿ ಮಾಡಿದ್ರು. ಬರೋರಿಗೆ ಬೇಡ ಅನ್ನೋಕ್ಕಾಗುತ್ತಾ? ಬೇರೆ ಸಮುದಾಯದವರೂ ಬರಬಹುದಿತ್ತು. ಯಾರೂ ಬರಲಿಲ್ಲ ಎಂದರು.
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ವಹಿಸಲು ಬಿಜೆಪಿ ಒತ್ತಾಯದ ಬಗ್ಗೆ ಮಾತನಾಡಿ, ಅದು ಬಿಜೆಪಿಯವರ ಅಭಿಪ್ರಾಯ. ನಮ್ಮ ಪೊಲೀಸ್ ಇಲಾಖೆ ಸಮರ್ಥವಾಗಿ ಕೆಲಸ ಮಾಡ್ತಾ ಇದೆ. ಎಂಟು ಜನರನ್ನ ಪ್ರಕರಣದಲ್ಲಿ ಬಂಧಿಸಲಾಗಿದೆ. ತನಿಖೆ ಚೆನ್ನಾಗಿ ನಡೆಯುತ್ತಿದೆ ಎಂಬುದು ನಮ್ಮ ಅಭಿಪ್ರಾಯ. ಹಾಗಾಗಿ, ಈ ಪ್ರಕರಣ ಎನ್ಐಎಗೆ ಕೊಟ್ಟಿಲ್ಲ. ಆ ಕುಟುಂಬಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡ್ತೇವೆ. ಬಿಜೆಪಿ ಆರೋಪ ಸರಿಯಲ್ಲ, ಬಿಜೆಪಿಯವರ ಕಾಲದಲ್ಲೂ ಮರ್ಡರ್ಗಳು ಆಗಿವೆ ಎಂದು ಹೇಳಿದರು.
ನಾವು ಎಲ್ಲಾ ರೀತಿಯ ಕ್ರಮಗಳನ್ನ ತೆಗೆದುಕೊಳ್ಳುತ್ತಿದ್ದೇವೆ. ಮರ್ಡರ್ ಆಗುತ್ತೆ ಎಂದು ಕ್ಲೂ ಸಿಕ್ಕಿದರೂ ಅಲರ್ಟ್ ಮಾಡಿ ತಡೆಯುವ ಕೆಲಸ ಆಗ್ತಿದೆ. ಕೊಲೆ ನಂತರವೂ ಆರೋಪಿಗಳನ್ನು ಬಂಧಿಸಲಾಗ್ತಿದೆ. ಎಲ್ಲಾ ಎಚ್ಚರಿಕೆಗಳನ್ನೂ, ಸೂಚನೆಗಳನ್ನ ಎಸ್ಪಿಗಳಿಗೆ ಕೊಟ್ಟಿದ್ದೇವೆ ಎಂದರು.
Why Hand Over Suhas Shetty Murder Case to NIA? Our Police Are Capable, Says Parameshwar, Claims Suhas Faced 5 Cases, Yet No Visits to His Home
17-10-25 08:39 pm
HK News Desk
ಆರೆಸ್ಸೆಸ್ ಚಟುವಟಿಕೆ ಕಡಿವಾಣಕ್ಕೆ ಕೌಂಟರ್ ; ಸಾರ್ವಜ...
17-10-25 05:27 pm
ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಬ್ರೇಕ...
16-10-25 09:04 pm
ನವೆಂಬರಲ್ಲಿ ಅಧಿಕಾರ ಬಿಡಲು ಹೈಕಮಾಂಡ್ ಹೇಳಿಲ್ಲ, ಸಿದ...
16-10-25 04:44 pm
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
17-10-25 05:25 pm
HK News Desk
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
17-10-25 09:36 pm
Mangalore Correspondent
1971ರ ಭಾರತ - ಪಾಕ್ ಯುದ್ಧದಲ್ಲಿ ಹೆಲಿಕಾಪ್ಟರ್ ನಿಂದ...
16-10-25 10:37 pm
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಕೋಗಿಲೆ ದಿನೇಶ...
16-10-25 01:11 pm
17-10-25 03:27 pm
Bangalore Correspondent
Vitla Honeytrap case, Police, Mangalore: ಬಶೀರ...
17-10-25 03:23 pm
ಆತ್ಮಶಕ್ತಿ ಬೆನ್ನಲ್ಲೇ ಒಡಿಯೂರು ಸಹಕಾರಿ ಬ್ಯಾಂಕಿಗೂ...
17-10-25 11:56 am
ಕೆಪಿಸಿಸಿಯಲ್ಲಿ ಕೆಲಸ ಮಾಡುತ್ತಿದ್ದೇನೆಂದು ಹೇಳಿ ಹಲವ...
17-10-25 11:53 am
ಹುಷಾರಿಲ್ಲದ ವೈದ್ಯೆ ಪತ್ನಿಯನ್ನು ಕೈಯಾರೆ ಇಂಜೆಕ್ಷನ್...
15-10-25 04:51 pm