ಬ್ರೇಕಿಂಗ್ ನ್ಯೂಸ್
08-05-25 12:23 pm HK News Desk ಕರ್ನಾಟಕ
ಕಾರವಾರ, ಮೇ 7 : ಪಾಕಿಸ್ತಾನ ಮೇಲೆ ಸರ್ಜಿಕಲ್ ದಾಳಿ ನಡೆಸಿದ ಬೆನ್ನಲ್ಲೇ ರಾಜ್ಯದ ಕರಾವಳಿ ಭಾಗದಲ್ಲಿ ಹೈ ಅಲರ್ಟ್ ಮಾಡಲಾಗಿದೆ. ಭಾರತದ ಅತಿದೊಡ್ಡ ನೌಕಾನೆಲೆ ಎನಿಸಿರುವ ಕಾರವಾರದ ಕದಂಬ ನೌಕಾನೆಲೆ ಮತ್ತು ಕಾರವಾರ ಬಂದರಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಕಾರವಾರದ ಅರಗಾದಲ್ಲಿರುವ ಕದಂಬ ನೌಕಾ ನೆಲೆಯಲ್ಲಿ ಕರಾವಳಿ ಕಾವಲುಪಡೆ, ಭಾರತೀಯ ತಟರಕ್ಷಕ ದಳದಿಂದ ತಪಾಸಣೆ ಹೆಚ್ಚಿಸಲಾಗಿದೆ. ಇದೇ ವೇಳೆ, ಅನ್ಯ ದೇಶದಿಂದ ಬರುವ ಸರಕು ಸಾಗಾಟ ಹಡಗಿನಲ್ಲಿ ಚೀನಾ, ಪಾಕಿಸ್ತಾನ ಸಿಬ್ಬಂದಿಗಳಿದ್ದರೆ ಅಂತಹ ಹಡಗುಗಳಿಗೆ ಬಂದರಿನಲ್ಲಿ ಪ್ರವೇಶ ನಿರ್ಬಂಧಿಸಲಾಗಿದೆ.
ಯಾವುದೇ ದೇಶದ ಹಡಗಿನಲ್ಲಿ ಪಾಕಿಸ್ತಾನ, ಚೀನಾ ಸಿಬ್ಬಂದಿ ಇದ್ದರೆ ಅಂತಹ ಹಡಗುಗಳಿಗೆ ಕಾರವಾರ ಬಂದರಿನಲ್ಲಿ ನಿಲುಗಡೆಗೆ ನಿಷೇಧ ವಿಧಿಸಲಾಗಿದೆ. ಮೀನುಗಾರಿಕಾ ಬಂದರಿಗೆ ಬರುವ ಬೋಟ್, ಹಡಗುಗಳಲ್ಲಿ ಪೊಲೀಸರು ತೀವ್ರ ತಪಾಸಣೆ ಕೈಗೊಂಡಿದ್ದಾರೆ. ಎಲ್ಲ ಮಾದರಿಯ ಮೀನುಗಾರಿಕಾ ಬೋಟ್ ಗಳನ್ನೂ ಅಪರಿಚಿತ ವ್ಯಕ್ತಿಗಳಿದ್ದರೆ ಕರಾವಳಿ ಕಾವಲು ಪಡೆ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ.
ಇದಲ್ಲದೆ, ಸಮುದ್ರದಲ್ಲಿ 12 ನಾಟಿಕಲ್ ಮೈಲ್ ದೂರದಿಂದ ಹೊರಕ್ಕೆ ಹೋಗದಂತೆ ಆಳ ಸಮುದ್ರ ಮೀನುಗಾರರಿಗೆ ಸೂಚನೆ ನೀಡಲಾಗಿದೆ. ತೀರದಿಂದ 200 ಕಿಮೀ ದೂರದ ನಂತರ ಅಂತಾರಾಷ್ಟ್ರೀಯ ಮಟ್ಟದ ಜಲಸಂಚಾರ ಇರಲಿದ್ದು ಅಲ್ಲಿ ಪಾಕಿಸ್ತಾನ ಸೇರಿದಂತೆ ಯಾವುದೇ ದೇಶದ ಹಡಗು, ಬೋಟ್ಗಳು ಸಂಚರಿಸಬಹುದು. ಪಾಕಿಗಳ ಕೈಗೆ ಸಿಕ್ಕಿಬಿದ್ದು ಒದ್ದಾಡುವ ಬದಲು ಅಲ್ಲಿ ವರೆಗೆ ಹೋಗುವುದನ್ನು ತಪ್ಪಿಸಿ ಎಂದು ಮೀನುಗಾರರಿಗೆ ಸೂಚನೆ ನೀಡಲಾಗಿದೆ.
ಸಾಮಾನ್ಯವಾಗಿ ಆಳ ಸಮುದ್ರಕ್ಕೆ ಮೀನುಗಾರಿಕೆ ತೆರಳಿದವರು 150- 200 ಕಿಮೀ ಗಡಿರೇಖೆಯ ವರೆಗೂ ಸಂಚಾರ ಮಾಡುತ್ತಾರೆ. ಸದ್ಯಕ್ಕೆ ಪಾಕಿಸ್ತಾನದ ಜೊತೆಗೆ ಸಂಘರ್ಷ ವಾತಾವರಣ ಇರುವುದರಿಂದ ಭಾರತದ ಮೀನುಗಾರರು ಅಲ್ಲಿ ವರೆಗೂ ತೆರಳದಂತೆ ಮೀನುಗಾರಿಕಾ ಇಲಾಖೆ ಸೂಚನೆ ನೀಡಿದೆ.
High Alert in Karwar, Fishermen Barred from Going Beyond 12 Nautical Miles; Foreign Vessels with Chinese or Pakistani Crew Restricted.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm