ಬ್ರೇಕಿಂಗ್ ನ್ಯೂಸ್
13-05-25 09:37 pm HK News Desk ಕರ್ನಾಟಕ
ದಾವಣಗೆರೆ, ಮೇ 13 : ಕರ್ತವ್ಯ ನಿಮಿತ್ತ ಲಾರಿ ನಿಲ್ಲಿಸಲು ಯತ್ನಿಸಿದ ಪೊಲೀಸ್ ಸಿಬ್ಬಂದಿ ಮೇಲೆ ಚಾಲಕ ಲಾರಿ ಹತ್ತಿಸಿದ ಪರಿಣಾಮ ಪೊಲೀಸ್ ಕಾನ್ಸ್ಟೇಬಲ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ತಾಲೂಕಿನ ಹೆಬ್ಬಾಳ ಟೋಲ್ ಗೇಟ್ ಬಳಿ ನಡೆದಿದೆ.
ಡಿಎಆರ್ ಕಾನ್ಸ್ಟೇಬಲ್ ರಾಮಪ್ಪ ಪೂಜಾರ್ ಸಾವನ್ನಪ್ಪಿದ ಸಿಬ್ಬಂದಿ. ಹೆಬ್ಬಾಳ ಟೋಲ್ ಗೇಟ್ ಬಳಿ ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ರಾಮಪ್ಪ ಪೂಜಾರ್ ಸಂಚಾರಿ ಪೊಲೀಸರೊಂದಿಗೆ ಲಾರಿ ನಿಲ್ಲಿಸಲು ಯತ್ನಿಸಿದ್ದಾರೆ. ಈ ವೇಳೆ, ಅತಿ ವೇಗದಲ್ಲಿ ಇದ್ದ ಲಾರಿ ಸಿಬ್ಬಂದಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ, ಚಾಲಕನನ್ನು ಹಿಡಿಯವ ಪ್ರಯತ್ನ ನಡೆಸಲಾಯಿತಾದರೂ ಆತ ಪರಾರಿಯಾಗಿದ್ದ. ಘಟನೆ ಸಂಬಂಧ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ಮಾಹಿತಿ ಬೆನ್ನಲ್ಲೇ ಎಸ್ಪಿ ಉಮಾಪ್ರಶಾಂತ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನಾ ಸ್ಥಳವಾಗಿರುವ ಟೋಲ್ ಗೇಟ್ ಬಳಿ ಯಾವುದೇ ಸಿಸಿಟಿವಿ ಕ್ಯಾಮರಾ ಅಳವಡಿಸದೇ ಇರುವ ಹಿನ್ನಲೆ ಎಸ್ಪಿ ಅಲ್ಲಿನ ಟೋಲ್ ಆಡಳಿತ ಹಾಗೂ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡರು.
ಖಾಸಗಿ ಆಸ್ಪತ್ರೆಯ ಶವಾಗಾರದಲ್ಲಿ ಮೃತರ ದೇಹ ಇಡಲಾಗಿದ್ದು, ಸ್ಥಳಕ್ಕೆ ಐಜಿಪಿ ರವಿಕಾಂತೇ ಗೌಡ ಅವರು ಭೇಟಿ ನೀಡಿದರು. ಮೃತ ಪೊಲೀಸ್ ಸಿಬ್ಬಂದಿಯ ಕುಟುಂಬಕ್ಕೆ ಧೈರ್ಯ ನೀಡಿ ಸಾಂತ್ವನ ಹೇಳಿದರು.
ಈ ವೇಳೆ ಮಾತನಾಡಿದ ಎಸ್ಪಿ ಉಮಾಪ್ರಶಾಂತ್, ಘಟನಾ ಸ್ಥಳಕ್ಕೆ ಭೇಟಿ ನೀಡಲಾಗಿದೆ. ಸಿಸಿಟಿವಿ ಕ್ಯಾಮರಾ ಅಳವಡಿಸದೆ ಇರುವುದರಿಂದ ಸಮಸ್ಯೆ ಆಗಿದೆ. ಈ ಕುರಿತು ಪರಿಶೀಲನೆ ನಡೆಸಿ ಮಾಹಿತಿ ಕೊಡುವಂತೆ ಎಚ್ಚರಿಕೆ ನೀಡಲಾಗಿದೆ ಎಂದರು.
ಚಾಲಕನ ಬಂಧನ:
ಅತಿವೇಗ ಮತ್ತು ನಿರ್ಲಕ್ಷ್ಯತನದ ಮೂಲಕ ಲಾರಿ ಚಲಾಯಿಸಿ ಪೊಲೀಸ್ ಸಿಬ್ಬಂದಿ ಸಾವಿಗೆ ಕಾರಣನಾದ ಆರೋಪಿಯನ್ನು ಪತ್ತೆ ಮಾಡಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಮೂಲದ ಸುರೇಶ್ ಎಂದು ಗುರುತಿಸಲಾಗಿದೆ.
A police constable was killed on duty after being hit by a speeding truck he was attempting to stop near the Hebbalu toll gate in Davanagere district on Monday. The truck driver reportedly drove straight into the officer and fled the scene.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
18-04-26 08:10 pm
HK News Staffer
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
18-04-26 03:50 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm