ಬ್ರೇಕಿಂಗ್ ನ್ಯೂಸ್
20-05-25 08:22 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 20 : ರಾಜ್ಯ ವಿಧಾನಸಭೆ ಸಚಿವಾಲಯದಲ್ಲಿ ಗ್ರೂಪ್ ಸಿ ಮತ್ತು ಡಿ ಹುದ್ದೆಗಳ ನೇಮಕಾತಿ ವಿಚಾರದಲ್ಲಿ ಭ್ರಷ್ಟಾಚಾರದ ಆರೋಪ ಕೇಳಿಬಂದಿದೆ. ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡು ಮೂರು ವರ್ಷದ ಬಳಿಕ ಆರೋಪ ಕೇಳಿಬಂದಿದ್ದು ಸಂಚಲನ ಮೂಡಿಸಿದೆ.
ಗ್ರೂಪ್ ಸಿ ಮತ್ತು ಡಿ ದರ್ಜೆಯ ಹುದ್ದೆಗಾಗಿ ವಿಧಾನಸಭೆ ಏಜೆಂಟ್ ಗಳಿಗೆ ಹಣ ಪಾವತಿಸಲಾಗಿದೆ ಎಂದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಮೂಲದ ಆಕಾಂಕ್ಷಿಯೊಬ್ಬರು ಆರೋಪಿಸಿದ್ದಾರೆ. ವಹಿವಾಟಿಗೆ ಸಂಬಂಧಿಸಿ ಆ ವ್ಯಕ್ತಿಯು ಒಬ್ಬ ಪುರುಷ ಮತ್ತು ಮಹಿಳಾ ಅಧಿಕಾರಿ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಸಂಬಂಧ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಪ್ರತಿಕ್ರಿಯೆ ನೀಡಿದ್ದು, ಇದು ಗಂಭೀರ ಪ್ರಕರಣವಾಗಿದ್ದು, ತನಿಖೆ ಮಾಡದೆ ಇರಲು ಸಾಧ್ಯವಿಲ್ಲ. ದೂರುದಾರರು ನೇರವಾಗಿ ನನ್ನನ್ನು ಸಂಪರ್ಕಿಸಲಿ. ಭಾಗಿಯಾಗಿರುವ ಯಾವುದೇ ಅಧಿಕಾರಿಯನ್ನು ಹಾಗೇ ಬಿಡುವುದಿಲ್ಲ ಎಂದು ಹೇಳಿದ್ದಾರೆ.
ಇಬ್ಬರು ಆರೋಪಿ ಅಧಿಕಾರಿಗಳ ಪೈಕಿ ಒಬ್ಬರು ಈ ಹಿಂದೆ ಲೋಕಾಯುಕ್ತ ದಾಳಿಯಾಗಿ ಪರಿಶೀಲನೆಗೆ ಒಳಪಟ್ಟಿದ್ದರು. ಆನಂತರವೂ ಅದೇ ಸಚಿವಾಲಯದಲ್ಲಿ ಅವರಿಗೆ ಮತ್ತೆ ಉದ್ಯೋಗ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ಸಂತ್ರಸ್ತರು ದೂರು ಸಲ್ಲಿಸಿದರೆ, ಖಂಡಿತವಾಗಿಯೂ ತನಿಖೆ ಕೈಗೆತ್ತಿಕೊಳ್ಳುತ್ತೇವೆ ಎಂದು ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ತಿಳಿಸಿದ್ದಾರೆ. ಇಂತಹ ಪ್ರಕರಣಗಳಲ್ಲಿ ಪ್ರಾಥಮಿಕ ಪುರಾವೆಗಳು ಅಥವಾ ವಿಶ್ವಾಸಾರ್ಹ ಹಕ್ಕುಗಳನ್ನು ಮಂಡಿಸಿದಾಗ ಅನಾಮಧೇಯ ಅರ್ಜಿಗಳ ಮೇಲೂ ಲೋಕಾಯುಕ್ತಕ್ಕೆ ಕ್ರಮ ಕೈಗೊಳ್ಳಬಹುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Corruption Alleged in Assembly Group C and D Recruitment; Speaker Khader Promises Probe if Complaint is Filed.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 02:29 pm
HK News Staffer
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm