ಬ್ರೇಕಿಂಗ್ ನ್ಯೂಸ್
21-05-25 01:50 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 21 : ಗೃಹ ಸಚಿವ ಪರಮೇಶ್ವರ್ ಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು (ಇಡಿ) ಶಾಕ್ ನೀಡಿದ್ದಾರೆ. ಅವರ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ನೆಲಮಂಗಳಾದ ಹೆಗ್ಗೆರೆ ಬಳಿಯಿರುವ ಪರಮೇಶ್ವರ್ ಒಡೆತನದ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಮೆಡಿಕಲ್ ಕಾಲೇಜು ಹಾಗೂ ತುಮಕೂರಿನ ಎಸ್ ಎಸ್ ಐಟಿ ಕಾಲೇಜು ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಲ್ಲದೆ, ನೆಲಮಂಗಲದ ಟಿ.ಬೇಗೂರಿನಲ್ಲಿರುವ ಕಾಲೇಜಿನ ಮೇಲೂ ದಾಳಿಯಾಗಿದೆ.

ಇಂದು ಬೆಳಗ್ಗೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಮೂರು ಕಾರುಗಳಲ್ಲಿ ಬಂದ ಹತ್ತಕ್ಕೂ ಹೆಚ್ಚು ಅಧಿಕಾರಿಗಳು ಎಸ್ಎಸ್ಐಟಿ ಕಾಲೇಜಿನಲ್ಲಿ ದಾಖಲೆಗಳ ಪರಿಶೀಲನೆ ಮಾಡುತ್ತಿದ್ದಾರೆ. ಇದೇ ವೇಳೆ, ಮಾಧ್ಯಮ ಪ್ರತಿನಿಧಿಗಳು ಕಾಲೇಜು ಆವರಣದ ಒಳಗೆ ಬಾರದಂತೆ ಡಿವೈಎಸ್ಪಿ ತಾಕೀತು ಮಾಡಿದ್ದಾರೆ.
ಈ ಹಿಂದೆಯೂ, ಅಂದ್ರೆ 2019ರಲ್ಲಿ ಆದಾಯ ತೆರಿಗೆ ಇಲಾಖೆ ಇದೇ ಸಂಸ್ಥೆಗಳ ಮೇಲೆ ದಾಳಿ ನಡೆಸಿತ್ತು. ಈ ದಾಳಿ ಸಂದರ್ಭದಲ್ಲಿ ಕೋಟ್ಯಾಂತರ ರೂಪಾಯಿ ವಶಕ್ಕೆ ಪಡೆಯಲಾಗಿತ್ತು. ಬಳಿಕ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿತ್ತು.
ಪರಮೇಶ್ವರ್ ಅವರಿಗೆ ಕರ್ನಾಟಕ ಪೊಲೀಸ್ ವಸತಿ ನಿಗಮದ ಮಹಾನಿರ್ದೇಶಕರಾಗಿರುವ ಡಾ.ರಾಮಚಂದ್ರರಾವ್ ಆಪ್ತರು. ಅವರ ಪುತ್ರಿ ರನ್ಯಾ ರಾವ್ ಕೆಲ ತಿಂಗಳ ಹಿಂದೆ ಚಿನ್ನ ಸಾಗಣೆ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ಳು. ಈ ವಹಿವಾಟಿನ ಹಣ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳಿಗೆ ಬಂದಿರಬಹುದಾ ಎನ್ನುವ ಲಿಂಕ್ ಆಧರಿಸಿ ದಾಳಿ ನಡೆಸಿರಬಹುದು ಎಂದು ಪರಮೇಶ್ವರ್ ಅವರ ಆಪ್ತ ಮೂಲಗಳು ತಿಳಿಸಿವೆ.
ಇದಲ್ಲದೇ ಪರಮೇಶ್ವರ್ ಎಚ್ಎಸ್ಎಂ ಎಂಜಿನಿಯರಿಂಗ್ ಕಾಲೇಜನ್ನು ಕೆಲ ದಿನಗಳ ಹಿಂದೆ ಖರೀದಿಸಿದ್ದು. ಇದರ ವಹಿವಾಟು ಏನಾದರೂ ಇರಬಹುದಾ ಎನ್ನುವ ಕುರಿತು ಮಾಹಿತಿ ಕಲೆ ಹಾಕಲಾಗುತ್ತಿದೆ ಎನ್ನಲಾಗುತ್ತಿದೆ.
The Enforcement Directorate on Wednesday conducted searches at a medical college and an educational institute in Tumakuru, linked to Karnataka Home Minister G Parameshwara, in a money laundering case connected to Kannada film actor Ranya Rao’s gold smuggling case.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 02:29 pm
HK News Staffer
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm