ಬ್ರೇಕಿಂಗ್ ನ್ಯೂಸ್
22-05-25 12:41 pm HK News Desk ಕರ್ನಾಟಕ
ಬಾಗಲಕೋಟೆ, ಮೇ 22 : ಮಂಗಗಳು ಮನುಷ್ಯರಷ್ಟೇ ಬುದ್ಧಿವಂತ ಜೀವಿಗಳು ಎಂಬುದು ಎಲ್ಲರಿಗೂ ತಿಳಿದಿದೆ. ಮಾತನಾಡಲು ಬರುವುದಿಲ್ಲ ಅಷ್ಟೇ ಆದರೆ, ಮನಷ್ಯನಂತೆ ಯೋಚಿಸುವ ಮತ್ತು ಕೆಲಸ ಮಾಡುವ ಸಾಮರ್ಥ್ಯವಿದೆ. ಅಲ್ಲದೆ, ಮನುಷ್ಯನೊಂದಿಗೆ ತನ್ನದೇ ಶೈಲಿಯಲ್ಲಿ ಸಂವಹನ ನಡೆಸುವ ಕಲೆಯನ್ನು ಸಹ ಮಂಗಗಳು ಹೊಂದಿವೆ.
ಇದು ಆಗಾಗ ಸಾಬೀತು ಕೂಡ ಆಗಿದ್ದು, ಇದೀಗ ಮತ್ತೊಮ್ಮೆ ಸಾಬೀತಾಗಿದೆ.
ಅಂದಹಾಗೆ, ಮನುಷ್ಯನಿಗೆ ಏನಾದರೂ ಆರೋಗ್ಯ ಸಮಸ್ಯೆಯಾದರೆ ತಕ್ಷಣ ಆಸ್ಪತ್ರೆಗೆ ಹೋಗುತ್ತಾನೆ. ಆದರೆ, ಮೂಕ ಪ್ರಾಣಿಗಳಿಗೆ ಸಮಸ್ಯೆಯಾದರೆ ಎಲ್ಲಿಗೆ ಹೋಗಬೇಕು? ಪಶುವೈದ್ಯಕೀಯ ಆಸ್ಪತ್ರೆಗಳಿದ್ದರು ಕೂಡ ಪ್ರಾಣಿಗಳಿಗೆ ಅದರ ಬಗ್ಗೆ ಅರಿವು ಇರುವುದಿಲ್ಲ. ಸಾಕು ಪ್ರಾಣಿಗಳಾದರೆ, ಅದರ ಮಾಲೀಕ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಾನೆ. ಆದರೆ, ಸ್ವತಂತ್ರವಾಗಿ ಅಡ್ಡಾಡಿಕೊಂಡಿರುವ ಜೀವಿಗಳು ಎಲ್ಲಿಗೆ ಹೋಗಬೇಕು? ಆದರೆ, ಇಲ್ಲೊಂದು ಕೋತಿ ತಾನಾಗೇ ಪಶು ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದುಕೊಳ್ಳುವ ಮೂಲಕ ಎಲ್ಲರ ಹುಬ್ಬೇರಿಸಿದೆ.
ಹೌದು, ಕುಂಡೆ ನೋವು ಸಹಿಸಲಾರದೇ ಮಂಗವೊಂದು ತಾನಾಗೆ ಪಶು ಆಸ್ಪತ್ರೆಗೆ ಆಗಮಿಸಿದ ಅಪರೂಪದ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಗೂಡೂರಿನಲ್ಲಿ ನಡೆದಿದೆ.
ಗೂಡೂರಿನ ಎಸ್ ಸಿ ಪಶು ಆಸ್ಪತ್ರೆಗೆ ಬಂದ ಮಂಗವೊಂದು, ಪಶು ವೈದ್ಯರಿಗೆ ತನ್ನ ಕುಂಡೆ ಕಡೆ ಕೈ ತೋರಿಸಿ, ತನ್ನ ಸಮಸ್ಯೆಯನ್ನು ಹೇಳಿಕೊಂಡಿದೆ. ತನಗಾದ ವೇದನೆಯನ್ನು ಕೈ ಸನ್ನೆ ಮೂಲಕ ಕಪಿರಾಯ ತೋರಿಸಿದ್ದಾನೆ. ತಕ್ಷಣ ಕೋತಿಯ ನೋವನ್ನು ಅರ್ಥ ಮಾಡಿಕೊಂಡ ಪಶುವೈದ್ಯ ಜಿ.ಜಿ. ಬಿಲ್ಲೋರ ಚಿಕಿತ್ಸೆ ನೀಡಿದ್ದಾರೆ. ಚಿಕಿತ್ಸೆಯನ್ನು ಪಡೆದ ಮಂಗ ನಂತರ ಅಲ್ಲಿಂದ ಹೊರಟು ಹೋಯಿತು. ಈ ದೃಶ್ಯವನ್ನು ಕಂಡ ಸ್ಥಳೀಯರು ಹುಬ್ಬೇರಿಸಿದ್ದು, ಕೋತಿಯ ಬುದ್ಧಿವಂತಿಕೆಯನ್ನು ಕೊಂಡಾಡಿದ್ದಾರೆ.
Bagalkot, Monkey Visits Animal Hospital Due to bum Pain, Shows Hand to Doctor and Gets Treated.
16-10-25 09:04 pm
Bangalore Correspondent
ನವೆಂಬರಲ್ಲಿ ಅಧಿಕಾರ ಬಿಡಲು ಹೈಕಮಾಂಡ್ ಹೇಳಿಲ್ಲ, ಸಿದ...
16-10-25 04:44 pm
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
ರಾಜ್ಯದಲ್ಲಿ 800 ಸರಕಾರಿ ಶಾಲೆ ಕರ್ನಾಟಕ ಪಬ್ಲಿಕ್ ಶಾ...
15-10-25 10:59 pm
ದೀಪಾವಳಿಗೆ ಹೆಚ್ಚುವರಿ ರೈಲು ; ಮಂಗಳೂರು- ಬೆಂಗಳೂರು,...
15-10-25 03:35 pm
16-10-25 10:52 pm
HK News Desk
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
16-10-25 10:37 pm
Mangalore Correspondent
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಕೋಗಿಲೆ ದಿನೇಶ...
16-10-25 01:11 pm
Pumpwell Kankandy Road close: ಪಂಪ್ವೆಲ್ - ಕಂಕ...
15-10-25 05:36 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm