ಬ್ರೇಕಿಂಗ್ ನ್ಯೂಸ್
31-07-20 08:01 am Bangalore Correspondant ಕರ್ನಾಟಕ
ಬೆಂಗಳೂರು (ಜುಲೈ 31); ಆಸ್ಪತ್ರೆಯಲ್ಲಿ ಬೆಡ್ ಹಾಗೂ ಸೂಕ್ತ ಚಿಕಿತ್ಸೆ ಸಿಗದ ಕಾರಣ ಆರು ದಿನದ ಮಗುವನ್ನು ಬಿಟ್ಟು ಬಾಣಂತಿ ಸಾವಿಗೀಡಾಗಿರುವ ಘಟನೆ ಬೆಂಗಳೂರಿನ ನಾಗರಭಾವಿಯಲ್ಲಿ ನಡೆದಿದೆ.
ಮೃತ ಮಹಿಳೆಗೆ ಕಳೆದ ಆರು ದಿನಗಳ ಹಿಂದೆ ಹೆರಿಗೆ ಆಗಿ ಮಗು ಜನಿಸಿತ್ತು. ಆದರೆ, ಹೆರಿಗೆಯ ನಂತರ ಆಕೆಗೆ ಕೊರೋನಾ ಪಾಸಿಟೀವ್ ಇರುವುದು ದೃಢಪಟ್ಟಿತ್ತು. ಹೀಗಾಗಿ ಕಳೆದ ಒಂದು ವಾರದಿಂದ ಆಕೆಗೆ ಉತ್ತಮ ಚಿಕಿತ್ಸೆ ನೀಡಲು ಕುಟುಂಬ ವರ್ಗ ಪರದಾಡಿದೆ. ಆದರೆ, ಅದು ಸಾಧ್ಯವಾಗಿರಲಿಲ್ಲ. ನಿನ್ನೆ ಸಂಜೆ ಆಕೆಗೆ ಧಿಡೀರ್ ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಂಡಿದೆ.
ಹೀಗಾಗಿ ಮಹಿಳೆಯನ್ನು ತುರ್ತು ಆಸ್ಪತ್ರೆಗೆ ಆಂಬ್ಯುಲೆನ್ಸ್ನಲ್ಲಿ ನಿನ್ನೆ ತಡರಾತ್ರಿ ವರೆಗೆ ನಾನಾ ಆಸ್ಪತ್ರೆಗೆ ಓಡಾಡಿದ್ದಾರೆ. ಆದರೆ, ಎಲ್ಲೂ ಬೆಡ್ ಸಿಕ್ಕಿರಲಿಲ್ಲ. ಈ ನಡುವೆ ಅಧಿಕಾರಿಗಳಿಗೆ ಕರೆ ಮಾಡಿದರೂ ಉಪಯೋಗವಾಗಲಿಲ್ಲ. ಹೀಗಾಗಿ ಕುಟುಂಬದವರು ಶಾಸಕಿ ಸೌಮ್ಯ ರೆಡ್ಡಿ ಅವರಿಗೆ ಕರೆ ಮಾಡಿತ್ತು. ಸೌಮ್ಯ ರೆಡ್ಡಿ ಸಹ "ಬಾಣಂತಿಗೆ ಬೆಡ್ ಬೇಕು" ಎಂದು ಟ್ವೀಟ್ ಮಾಡುವ ಮೂಲಕ ಸರ್ಕಾರವನ್ನು ವಿನಂತಿಸಿದ್ದರು.
ಆದರೆ, ಕೊನೆಗೂ ಆಕೆಗೆ ಬೆಡ್ ಸಿಗಲಿಲ್ಲ. ಹೀಗಾಗಿ ನಿನ್ನೆ ರಾತ್ರಿ ಉಸಿರಾಟದ ತೊಂದರೆಯಿಂದ ಬಾಣಂತಿ ಮಹಿಳೆ ಮೃತಪಟ್ಟಿದ್ದಾರೆ. ಆರು ದಿನದ ಮಗುವನ್ನು ಮಹಿಳೆ ತೊರೆದಿದ್ದು ಇಡೀ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm