ಬ್ರೇಕಿಂಗ್ ನ್ಯೂಸ್
22-05-25 11:09 pm HK News Desk ಕರ್ನಾಟಕ
ಮಡಿಕೇರಿ, ಮೇ 22 : 2018 ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪ ಕೊಡಗು ಜನರಲ್ಲಿ ಅಕ್ಷರಶಃ ಭೀತಿ ಹುಟ್ಟಿಸಿತ್ತು. ಆನಂತರವೂ ಅಲ್ಲೊಂದು ಇಲ್ಲೊಂದು ಎನ್ನುವಂತೆ ಎಡವಟ್ಟು ಆಗಿತ್ತು. ಈ ಬಾರಿ ಎಂದಿಗಿಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಮತ್ತೆ ಪ್ರಾಕೃತಿಕ ವಿಕೋಪ ಮರುಕಳಿಸುತ್ತಾ ಎನ್ನುವ ಭೀತಿ ಉಂಟಾಗಿದೆ.
ಭಾರತೀಯ ಭೂಗರ್ಭ ಶಾಸ್ತ್ರಜ್ಞರು ಸರ್ಕಾರಕ್ಕೆ ಈ ಬಗ್ಗೆ ವರದಿ ಸಲ್ಲಿಸಿದ್ದು, ಈ ಹಿಂದೆ ಪ್ರಾಕೃತಿಕ ವಿಕೋಪ ಸಂಭವಿಸಿದ್ದ ಸ್ಥಳದಲ್ಲೇ ಮತ್ತೆ ಅಪಾಯ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.
ಕೊಡಗಿನ 43 ಪ್ರದೇಶಗಳು ಅಪಾಯಕಾರಿ
ಕೊಡಗಿನಲ್ಲಿ ಈ ಹಿಂದೆ ಅನಾಹುತ ಸಂಭವಿಸಿದ ಜಾಗ ಸೇರಿ 43 ಪ್ರದೇಶಗಳು ಅಪಾಯಕಾರಿ ಎಂದು ಎಚ್ಚರಿಕೆ ನೀಡಲಾಗಿದೆ. ಜೊತೆಗೆ, ಹಟ್ಟಿಹೊಳೆ ಕಾವೇರಿ ನದಿ ಹಾಗೂ ಲಕ್ಷ್ಮಣ ತೀರ್ಥ ನದಿಯ ತಟದಲ್ಲಿ ಇರುವವರು ಎಚ್ಚರ ವಹಿಸಬೇಕು ಎಂದು ತಜ್ಞರು ಎಚ್ಚರಿಕೆ ನೀಡಿರುವುದಾಗಿ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜ ತಿಳಿಸಿದ್ದಾರೆ.
ವರದಿಯ ಬೆನ್ನಲ್ಲೇ ಕೊಡಗು ಜಿಲ್ಲಾಡಳಿತ ಈ ಬಾರಿಯ ಮಳೆಗಾಲವನ್ನು ಎದುರಿಸಲು ಸಿದ್ಧತೆ ಮಾಡಿದೆ. ತಜ್ಞರು ಸೂಚಿಸಿದ ಪ್ರದೇಶಗಳಲ್ಲಿ ನಿಗಾ ಇಡಲು ಅಧಿಕಾರಿಗಳಿಗೆ ಸೂಚಿಸಿದೆ. ಜನರಿಗೆ ಅಗತ್ಯ ಸೇವೆ ಲಭ್ಯವಿರುವಂತೆ ನೋಡಿಕೊಳ್ಳಲು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಪೊಲೀಸ್ ಇಲಾಖೆ, ಅಗ್ನಿಶಾಮಕ ಸಿಬ್ಬಂದಿ, ನೋಡಲ್ ಅಧಿಕಾರಿಗಳು ಹಾಗೂ ಸ್ವಯಂಸೇವಕರನ್ನು ನೇಮಿಸಿಕೊಳ್ಳಲಾಗಿದೆ. ಪ್ರವಾಹ ಎದುರಾಗುವ ಏರಿಯಾದ ಸುತ್ತ 100 ಕ್ಕೂ ಹೆಚ್ಚು ಆಶ್ರಯ ಕೇಂದ್ರಗಳನ್ನು ಆರಂಭಿಸಲು ಚಿಂತನೆ ನಡೆಸಿದ್ದು, ಎಲ್ಲಾ ಮೂಲಭೂತ ಸೌಕರ್ಯ ಸಿದ್ಧಪಡಿಸಿಕೊಳ್ಳಲಾಗಿದೆ. ಜನತೆ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ.
Heavy Rainfall in Kodagu This Year; Experts Warn of Potential Natural Disasters.
16-10-25 09:04 pm
Bangalore Correspondent
ನವೆಂಬರಲ್ಲಿ ಅಧಿಕಾರ ಬಿಡಲು ಹೈಕಮಾಂಡ್ ಹೇಳಿಲ್ಲ, ಸಿದ...
16-10-25 04:44 pm
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
ರಾಜ್ಯದಲ್ಲಿ 800 ಸರಕಾರಿ ಶಾಲೆ ಕರ್ನಾಟಕ ಪಬ್ಲಿಕ್ ಶಾ...
15-10-25 10:59 pm
ದೀಪಾವಳಿಗೆ ಹೆಚ್ಚುವರಿ ರೈಲು ; ಮಂಗಳೂರು- ಬೆಂಗಳೂರು,...
15-10-25 03:35 pm
15-10-25 11:02 pm
HK News Desk
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
16-10-25 08:26 pm
Mangalore Correspondent
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಕೋಗಿಲೆ ದಿನೇಶ...
16-10-25 01:11 pm
Pumpwell Kankandy Road close: ಪಂಪ್ವೆಲ್ - ಕಂಕ...
15-10-25 05:36 pm
ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು ;...
15-10-25 12:12 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm