ಬ್ರೇಕಿಂಗ್ ನ್ಯೂಸ್
25-05-25 08:48 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 25 : ಬಿಜೆಪಿಯ 18 ಶಾಸಕರ ಅಮಾನತು ಆದೇಶವನ್ನು ಹಿಂಪಡೆಯಲು ನಿರ್ಧರಿಸಲಾಗಿದೆ ಎಂದು ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ತಿಳಿಸಿದ್ದಾರೆ. ಈ ಬಗ್ಗೆ ಸ್ಪೀಕರ್ ಮತ್ತು ಸಿಎಂ ನೇತೃತ್ವದಲ್ಲಿ ನಡೆದ ಸಂಧಾನ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ವಿಧಾನಸಭೆಯಲ್ಲಿ ಸ್ಪೀಕರ್ ಕುರ್ಚಿಗೆ ಅಗೌರವ ತೋರಿಸಿದ ಮತ್ತು ಮಸೂದೆಯ ಪ್ರತಿಗಳನ್ನು ಹರಿದು ಅವರ ಮೇಲೆ ಎಸೆದ ಆರೋಪದಲ್ಲಿ 18 ಬಿಜೆಪಿ ಶಾಸಕರನ್ನು ವಿಧಾನಸಭೆಯಿಂದ ಆರು ತಿಂಗಳ ಕಾಲ ಅಮಾನತು ಮಾಡಲಾಗಿತ್ತು. ಈ ಬಗ್ಗೆ ಬಿಜೆಪಿ ಶಾಸಕರು ಮತ್ತು ಇತರ ಹಿರಿಯ ನಾಯಕರು ತೀವ್ರ ಅಸಮಾಧಾನ ಹೊರಹಾಕಿದ್ದರು.
ಇಂದು ಸಭೆಯ ಬಳಿಕ ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು, ಘಟನೆ ಬಗ್ಗೆ ಎಲ್ಲ ಶಾಸಕರು ವಿಷಾದ ವ್ಯಕ್ತಪಡಿಸಿದ್ದಾರೆ. ವಿಪಕ್ಷ ನಾಯಕರು ಕೂಡ ನನಗೆ ಮನವಿ ಸಲ್ಲಿಸಿದ್ದರು. ಇನ್ಮುಂದೆ ಹೀಗಾಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದ್ದಾರೆ. 18 ಶಾಸಕರನ್ನು ಅಮಾನತು ಮಾಡಿ ಎರಡು ತಿಂಗಳಾಗಿದೆ. ಈಗ ಅಮಾನತು ಆದೇಶ ಹಿಂಪಡೆದಿದ್ದೇನೆ. ಯಾವುದೇ ಷರತ್ತು ಇಲ್ಲ, ಎಲ್ಲರೂ ನಮ್ಮ ಮಿತ್ರರು. ಆ ಸಮಯದಲ್ಲಿ ದುರ್ನಡತೆ ತೋರಿದ್ದಕ್ಕೆ ಕ್ರಮ ಕೈಗೊಂಡಿದ್ದೆವು ಎಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ.
ಸಂಧಾನ ಸಭೆ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಆರ್. ಅಶೋಕ್, ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ, ಕಾನೂನು ಸಚಿವ ಎಚ್.ಕೆ.ಪಾಟೀಲ್ ಭಾಗಿಯಾಗಿದ್ದರು. ಸ್ಪೀಕರ್ ಖಾದರ್ ಇಂದು ರಾತ್ರಿಯೇ ಹಜ್ ಯಾತ್ರೆ ಕೈಗೊಳ್ಳಲಿದ್ದು ಅದಕ್ಕೂ ಮೊದಲೇ ಬಿಜೆಪಿಗೆ ಸಿಹಿಸುದ್ದಿ ನೀಡಿದಂತಾಗಿದೆ.
The state government has withdrawn suspension orders of 18 BJP MLAs on Sunday, May 25. This decision was taken in a mediation meeting held under the chairmanship of Assembly Speaker U.T. Khader.
16-10-25 09:04 pm
Bangalore Correspondent
ನವೆಂಬರಲ್ಲಿ ಅಧಿಕಾರ ಬಿಡಲು ಹೈಕಮಾಂಡ್ ಹೇಳಿಲ್ಲ, ಸಿದ...
16-10-25 04:44 pm
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
ರಾಜ್ಯದಲ್ಲಿ 800 ಸರಕಾರಿ ಶಾಲೆ ಕರ್ನಾಟಕ ಪಬ್ಲಿಕ್ ಶಾ...
15-10-25 10:59 pm
ದೀಪಾವಳಿಗೆ ಹೆಚ್ಚುವರಿ ರೈಲು ; ಮಂಗಳೂರು- ಬೆಂಗಳೂರು,...
15-10-25 03:35 pm
15-10-25 11:02 pm
HK News Desk
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
16-10-25 08:26 pm
Mangalore Correspondent
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಕೋಗಿಲೆ ದಿನೇಶ...
16-10-25 01:11 pm
Pumpwell Kankandy Road close: ಪಂಪ್ವೆಲ್ - ಕಂಕ...
15-10-25 05:36 pm
ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು ;...
15-10-25 12:12 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm