ಬ್ರೇಕಿಂಗ್ ನ್ಯೂಸ್
25-05-25 08:48 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 25 : ಬಿಜೆಪಿಯ 18 ಶಾಸಕರ ಅಮಾನತು ಆದೇಶವನ್ನು ಹಿಂಪಡೆಯಲು ನಿರ್ಧರಿಸಲಾಗಿದೆ ಎಂದು ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ತಿಳಿಸಿದ್ದಾರೆ. ಈ ಬಗ್ಗೆ ಸ್ಪೀಕರ್ ಮತ್ತು ಸಿಎಂ ನೇತೃತ್ವದಲ್ಲಿ ನಡೆದ ಸಂಧಾನ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ವಿಧಾನಸಭೆಯಲ್ಲಿ ಸ್ಪೀಕರ್ ಕುರ್ಚಿಗೆ ಅಗೌರವ ತೋರಿಸಿದ ಮತ್ತು ಮಸೂದೆಯ ಪ್ರತಿಗಳನ್ನು ಹರಿದು ಅವರ ಮೇಲೆ ಎಸೆದ ಆರೋಪದಲ್ಲಿ 18 ಬಿಜೆಪಿ ಶಾಸಕರನ್ನು ವಿಧಾನಸಭೆಯಿಂದ ಆರು ತಿಂಗಳ ಕಾಲ ಅಮಾನತು ಮಾಡಲಾಗಿತ್ತು. ಈ ಬಗ್ಗೆ ಬಿಜೆಪಿ ಶಾಸಕರು ಮತ್ತು ಇತರ ಹಿರಿಯ ನಾಯಕರು ತೀವ್ರ ಅಸಮಾಧಾನ ಹೊರಹಾಕಿದ್ದರು.
ಇಂದು ಸಭೆಯ ಬಳಿಕ ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು, ಘಟನೆ ಬಗ್ಗೆ ಎಲ್ಲ ಶಾಸಕರು ವಿಷಾದ ವ್ಯಕ್ತಪಡಿಸಿದ್ದಾರೆ. ವಿಪಕ್ಷ ನಾಯಕರು ಕೂಡ ನನಗೆ ಮನವಿ ಸಲ್ಲಿಸಿದ್ದರು. ಇನ್ಮುಂದೆ ಹೀಗಾಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದ್ದಾರೆ. 18 ಶಾಸಕರನ್ನು ಅಮಾನತು ಮಾಡಿ ಎರಡು ತಿಂಗಳಾಗಿದೆ. ಈಗ ಅಮಾನತು ಆದೇಶ ಹಿಂಪಡೆದಿದ್ದೇನೆ. ಯಾವುದೇ ಷರತ್ತು ಇಲ್ಲ, ಎಲ್ಲರೂ ನಮ್ಮ ಮಿತ್ರರು. ಆ ಸಮಯದಲ್ಲಿ ದುರ್ನಡತೆ ತೋರಿದ್ದಕ್ಕೆ ಕ್ರಮ ಕೈಗೊಂಡಿದ್ದೆವು ಎಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ.
ಸಂಧಾನ ಸಭೆ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಆರ್. ಅಶೋಕ್, ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ, ಕಾನೂನು ಸಚಿವ ಎಚ್.ಕೆ.ಪಾಟೀಲ್ ಭಾಗಿಯಾಗಿದ್ದರು. ಸ್ಪೀಕರ್ ಖಾದರ್ ಇಂದು ರಾತ್ರಿಯೇ ಹಜ್ ಯಾತ್ರೆ ಕೈಗೊಳ್ಳಲಿದ್ದು ಅದಕ್ಕೂ ಮೊದಲೇ ಬಿಜೆಪಿಗೆ ಸಿಹಿಸುದ್ದಿ ನೀಡಿದಂತಾಗಿದೆ.
The state government has withdrawn suspension orders of 18 BJP MLAs on Sunday, May 25. This decision was taken in a mediation meeting held under the chairmanship of Assembly Speaker U.T. Khader.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm