ಬ್ರೇಕಿಂಗ್ ನ್ಯೂಸ್
26-05-25 07:23 pm HK News Desk ಕರ್ನಾಟಕ
ಮಡಿಕೇರಿ, ಮೇ 26 : ಕೊಡಗು ಜಿಲ್ಲೆಯಲ್ಲಿ ಈ ಬಾರಿ ಆರಂಭದಲ್ಲೇ ಮಳೆ ತೀವ್ರಗೊಂಡಿದ್ದು, ಮಳೆಯಿಂದಾಗಿ ಅನಾಹುತ ಉಂಟಾಗುವ ಸಾಧ್ಯತೆ ಇರುವುದರಿಂದ ಹೆದ್ದಾರಿ ಮತ್ತು ರಸ್ತೆಗಳ ಕುಸಿತ ಆಗುವುದನ್ನು ತಪ್ಪಿಸಲು ಕೊಡಗು ಜಿಲ್ಲೆಯಾದ್ಯಂತ ಎಲ್ಲ ರೀತಿಯ ಸರಕು ಸಾಗಾಟದ ಲಾರಿಗಳು, ಭಾರದ ಟ್ಯಾಂಕರ್ ಇನ್ನಿತರ ಘನ ವಾಹನಗಳ ಸಂಚಾರ ನಿಷೇಧಿಸಲಾಗಿದೆ.
ಕೊಡಗು ಜಿಲ್ಲೆಯಲ್ಲಿ ಕಳೆದ ನಾಲ್ಕೈದು ವರ್ಷಗಳಲ್ಲಿ ಪ್ರತಿ ಬಾರಿಯೂ ಮಳೆಗಾಲದಲ್ಲಿ ಅನಾಹುತ ಸಂಭವಿಸಿದ್ದು, ರಸ್ತೆಗಳು ಕುಸಿತಗೊಂಡು ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಹೀಗಾಗಿ ಸಾರ್ವಜನಿಕ ಆಸ್ತಿಯ ಸುರಕ್ಷತೆ ದೃಷ್ಟಿಯಿಂದ 18,500 ಕೇಜಿಗಿಂತ ಹೆಚ್ಚು ಭಾರವುಳ್ಳ ಸರಕು ಸಾಗಾಣಿಕೆ ವಾಹನ, ಮಲ್ಟಿ ಆಕ್ಸೆಲ್ ಟ್ರಕ್ ಮತ್ತು ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೇನರ್ಸ್, ಲಾಂಗ್ ಚೇಸಿಸ್ ಆರ್ಟಿಕ್ಯುಲೇಟೆಡ್ ವಾಹನಗಳು, ಮರಳು ಸಾಗಾಟ- ಮರದ ದಿಮ್ಮಿ ಸಾಗಾಟದ ಎಲ್ಲ ರೀತಿಯ ವಾಹನಗಳನ್ನು ಕೊಡಗು ಜಿಲ್ಲೆಯಾದ್ಯಂತ ಒಂದು ತಿಂಗಳ ಕಾಲ ನಿಷೇಧಿಸಲಾಗಿದೆ.
ಸದ್ಯಕ್ಕೆ ಜೂನ್ 6ರಿಂದ ಜುಲೈ 5ರ ವರೆಗೆ ಘನ ವಾಹನಗಳ ಸಂಚಾರವನ್ನು ಕೊಡಗು ಜಿಲ್ಲೆಯ ಯಾವುದೇ ರಸ್ತೆಯಲ್ಲಿ ಸಂಚರಿಸುವುದಕ್ಕೆ ನಿಷೇಧ ವಿಧಿಸಲಾಗಿದೆ. ಈ ಬಗ್ಗೆ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದು, ಅಡುಗೆ ಅನಿಲ ಮತ್ತು ಇಂಧನ ಪೂರೈಕೆ ವಾಹನಗಳು, ಹಾಲು ಪೂರೈಕೆ ವಾಹನಗಳು, ಸರ್ಕಾರಿ ಕೆಲಸದ ನಿಮಿತ್ತ ಉಪಯೋಗಿಸಲ್ಪಡುವ ವಾಹನಗಳು, ಶಾಲ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣಿಕರ ವಾಹನಗಳು (ಮಲ್ಟಿ ಆಕ್ಸೆಲ್ ಬಸ್ ಗಳು ಸೇರಿದಂತೆ) ಸಂಚಾರಕ್ಕೆ ವಿನಾಯ್ತಿ ನೀಡಲಾಗಿದೆ. ಕೊಡಗು ಜಿಲ್ಲೆಯ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 275ರ ಜಿಲ್ಲೆಯ ಗಡಿಭಾಗವಾದ ಕುಶಾಲನಗರ ಮತ್ತು ಸಂಪಾಜೆಯಲ್ಲಿ ದಿನದ 24 ಗಂಟೆಯೂ ಸಿಬಂದಿ ನಿಯೋಜಿಸಿ ಆದೇಶ ಪಾಲನೆಯಾಗುವಂತೆ ನೋಡಿಕೊಳ್ಳಲು ಪೊಲೀಸರಿಗೆ ಮತ್ತು ಪ್ರಾದೇಶಿಕ ಸಾರಿಗೆ ಆಯುಕ್ತರಿಗೂ ಸೂಚಿಸಿದ್ದಾರೆ.
Heavy Rains Prompt Ban on Goods Trucks and Tankers Across Kodagu, Exemption Given to Transport Buses.
16-10-25 09:04 pm
Bangalore Correspondent
ನವೆಂಬರಲ್ಲಿ ಅಧಿಕಾರ ಬಿಡಲು ಹೈಕಮಾಂಡ್ ಹೇಳಿಲ್ಲ, ಸಿದ...
16-10-25 04:44 pm
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
ರಾಜ್ಯದಲ್ಲಿ 800 ಸರಕಾರಿ ಶಾಲೆ ಕರ್ನಾಟಕ ಪಬ್ಲಿಕ್ ಶಾ...
15-10-25 10:59 pm
ದೀಪಾವಳಿಗೆ ಹೆಚ್ಚುವರಿ ರೈಲು ; ಮಂಗಳೂರು- ಬೆಂಗಳೂರು,...
15-10-25 03:35 pm
15-10-25 11:02 pm
HK News Desk
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
16-10-25 08:26 pm
Mangalore Correspondent
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಕೋಗಿಲೆ ದಿನೇಶ...
16-10-25 01:11 pm
Pumpwell Kankandy Road close: ಪಂಪ್ವೆಲ್ - ಕಂಕ...
15-10-25 05:36 pm
ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು ;...
15-10-25 12:12 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm