ಬ್ರೇಕಿಂಗ್ ನ್ಯೂಸ್
29-05-25 02:19 pm HK News Desk ಕರ್ನಾಟಕ
ಬಾಗಲಕೋಟೆ, ಮೇ 29 : ಕೊರೋನಾ ಆತಂಕದ ಮಧ್ಯೆ ರಾಜ್ಯದಲ್ಲಿ ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡಿರುವುದು ದೃಢಪಟ್ಟಿದೆ. ಬಾಗಲಕೋಟೆ ವ್ಯಾಪ್ತಿಯ ಸಾಕಾಣಿಕಾ ಕೇಂದ್ರಗಳ ಹಂದಿಗಳಲ್ಲಿ ಆಪ್ರಿಕನ್ ಹಂದಿ ಜ್ವರ ಕಂಡುಬಂದಿದ್ದು ಸಾಮೂಹಿಕ ಹತ್ಯೆಗೈದು ವಿಲೇವಾರಿ ಮಾಡಲು ರಾಜ್ಯ ಸರ್ಕಾರ ಆದೇಶ ಮಾಡಿದೆ.
ಕೇರಳ ಇಲ್ಲವೇ ಗೋವಾದಿಂದ ತರಿಸಿಕೊಂಡ ಹಂದಿಗಳಿಂದ ಜ್ವರ ಬಂದಿರುವ ಶಂಕೆಯಿದೆ. ಬಾಗಲಕೋಟೆ ಜಿಲ್ಲೆಯ
ಗೊರಬಾಳ ಗ್ರಾಮದ ಹಂದಿಗಳ ಸಾಕಾಣಿಕಾ ಕೇಂದ್ರದಲ್ಲಿ ಜ್ವರ ಪತ್ತೆಯಾಗಿದೆ. ಬಾಗಲಕೋಟೆ ಜಿಲ್ಲೆಯಾದ್ಯಂತ ಈಗಾಗಲೇ 20ಕ್ಕೂ ಅಧಿಕ ಸಾಕಾಣಿಕೆ ಕೇಂದ್ರಗಳಿದ್ದು ಹಂದಿ ಸಾಕಾಣಿಕೆದಾರರು ಆತಂಕಗೊಂಡಿದ್ದಾರೆ.
ಆಫ್ರಿಕನ್ ಜ್ವರ ಕಾಣಿಸಿಕೊಂಡ ಸುತ್ತಮುತ್ತಲಿನ ಪ್ರದೇಶ ನಿಷೇಧಿತ ಪ್ರದೇಶ ಎಂದು ಘೋಷಣೆ ಮಾಡಿದ್ದಾರೆ. ಮೇ 15ರಂದು ಬಾಗಲಕೋಟೆಯಿಂದ ಭೋಪಾಲ್ ನ ಲ್ಯಾಬೊರೇಟರಿಗೆ ಹಂದಿಗಳ ರಕ್ತದ ಮಾದರಿ ರವಾನಿಸಿದ್ದು ಮೇ 22ರಂದು ಬಂದಿರುವ ವರದಿಯಲ್ಲಿ ಹಂದಿಗಳಿಗೆ ಆಫ್ರಿಕನ್ ಜ್ವರ ಇರೋದು ಧೃಢವಾಗಿದೆ. ಇದರ ಬೆನ್ನಲ್ಲೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಧಿಸೂಚನೆ ಪ್ರಕಟಿಸಿದ್ದು ಸಾಮೂಹಿಕ ವಿಲೇವಾರಿಗೆ ಸೂಚನೆ ನೀಡಿದ್ದಾರೆ.
ಇದರಂತೆ, ಬಾಗಲಕೋಟೆ ಜಿಲ್ಲೆಯಲ್ಲಿ ಮೂರು ರ್ಯಾಪಿಡ್ ಟೀಮ್ ಕಾರ್ಯಾಚರಣೆ ಮಾಡುತ್ತಿದ್ದು ಬಾಗಲಕೋಟೆ ಜಿಲ್ಲೆಯಿಂದ ಮೂರು ತಿಂಗಳ ಕಾಲ ಯಾವುದೇ ರೀತಿಯ ಹಂದಿಗಳನ್ನು ಆಮದು ಅಥವಾ ರಫ್ತು ಮಾಡುವುದು ನಿಷೇಧ ಮಾಡಲಾಗಿದೆ. ರೋಗ ಪತ್ತೆಯಾದ ಜಾಗದಿಂದ 1 ಕಿಮೀ ರೋಗಪೀಡಿತ ವಲಯ, 1 ರಿಂದ 10 ಕಿಮೀ ಜಾಗೃತ ವಲಯ ಎಂದು ಘೋಷಣೆ ಮಾಡಲಾಗಿದೆ.
ರೋಗ ಪೀಡಿತ ವಲಯ ವ್ಯಾಪ್ತಿಯ ಹಂದಿಗಳ ವಿಲೇವಾರಿಗೆ ಸೂಚನೆ ನೀಡಲಾಗಿದೆ. ಎರಡು ಹಂದಿಗಳ ಸಾಕಾಣಿಕೆ ಕೇಂದ್ರದ 130 ಹಂದಿಗಳ ವಧೆ ಮತ್ತು ವೈಜ್ಞಾನಿಕ ವಿಲೇವಾರಿಗೆ ಸೂಚಿಸಲಾಗಿದೆ. ಇದೇ ವೇಳೆ, ಬಾಗಲಕೋಟೆ ಜಿಲ್ಲೆಯ 18 ಸಾಕಾಣಿಕಾ ಕೇಂದ್ರದಲ್ಲಿರುವ 20 ಸಾವಿರ ಹಂದಿಗಳಿಗೆ ಮುಂಜಾಗ್ರತಾ ಕ್ರಮವಾಗಿ ವ್ಯಾಕ್ಸಿನ್ ನೀಡಲಾಗಿದೆ.
Amid COVID Concerns, African Swine Fever Confirmed in Karnataka, Outbreak Detected in Bagalkote District, Ban on Pork Transport Imposed.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
18-04-26 03:50 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm