ಬ್ರೇಕಿಂಗ್ ನ್ಯೂಸ್
29-05-25 02:19 pm HK News Desk ಕರ್ನಾಟಕ
ಬಾಗಲಕೋಟೆ, ಮೇ 29 : ಕೊರೋನಾ ಆತಂಕದ ಮಧ್ಯೆ ರಾಜ್ಯದಲ್ಲಿ ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡಿರುವುದು ದೃಢಪಟ್ಟಿದೆ. ಬಾಗಲಕೋಟೆ ವ್ಯಾಪ್ತಿಯ ಸಾಕಾಣಿಕಾ ಕೇಂದ್ರಗಳ ಹಂದಿಗಳಲ್ಲಿ ಆಪ್ರಿಕನ್ ಹಂದಿ ಜ್ವರ ಕಂಡುಬಂದಿದ್ದು ಸಾಮೂಹಿಕ ಹತ್ಯೆಗೈದು ವಿಲೇವಾರಿ ಮಾಡಲು ರಾಜ್ಯ ಸರ್ಕಾರ ಆದೇಶ ಮಾಡಿದೆ.
ಕೇರಳ ಇಲ್ಲವೇ ಗೋವಾದಿಂದ ತರಿಸಿಕೊಂಡ ಹಂದಿಗಳಿಂದ ಜ್ವರ ಬಂದಿರುವ ಶಂಕೆಯಿದೆ. ಬಾಗಲಕೋಟೆ ಜಿಲ್ಲೆಯ
ಗೊರಬಾಳ ಗ್ರಾಮದ ಹಂದಿಗಳ ಸಾಕಾಣಿಕಾ ಕೇಂದ್ರದಲ್ಲಿ ಜ್ವರ ಪತ್ತೆಯಾಗಿದೆ. ಬಾಗಲಕೋಟೆ ಜಿಲ್ಲೆಯಾದ್ಯಂತ ಈಗಾಗಲೇ 20ಕ್ಕೂ ಅಧಿಕ ಸಾಕಾಣಿಕೆ ಕೇಂದ್ರಗಳಿದ್ದು ಹಂದಿ ಸಾಕಾಣಿಕೆದಾರರು ಆತಂಕಗೊಂಡಿದ್ದಾರೆ.
ಆಫ್ರಿಕನ್ ಜ್ವರ ಕಾಣಿಸಿಕೊಂಡ ಸುತ್ತಮುತ್ತಲಿನ ಪ್ರದೇಶ ನಿಷೇಧಿತ ಪ್ರದೇಶ ಎಂದು ಘೋಷಣೆ ಮಾಡಿದ್ದಾರೆ. ಮೇ 15ರಂದು ಬಾಗಲಕೋಟೆಯಿಂದ ಭೋಪಾಲ್ ನ ಲ್ಯಾಬೊರೇಟರಿಗೆ ಹಂದಿಗಳ ರಕ್ತದ ಮಾದರಿ ರವಾನಿಸಿದ್ದು ಮೇ 22ರಂದು ಬಂದಿರುವ ವರದಿಯಲ್ಲಿ ಹಂದಿಗಳಿಗೆ ಆಫ್ರಿಕನ್ ಜ್ವರ ಇರೋದು ಧೃಢವಾಗಿದೆ. ಇದರ ಬೆನ್ನಲ್ಲೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಧಿಸೂಚನೆ ಪ್ರಕಟಿಸಿದ್ದು ಸಾಮೂಹಿಕ ವಿಲೇವಾರಿಗೆ ಸೂಚನೆ ನೀಡಿದ್ದಾರೆ.
ಇದರಂತೆ, ಬಾಗಲಕೋಟೆ ಜಿಲ್ಲೆಯಲ್ಲಿ ಮೂರು ರ್ಯಾಪಿಡ್ ಟೀಮ್ ಕಾರ್ಯಾಚರಣೆ ಮಾಡುತ್ತಿದ್ದು ಬಾಗಲಕೋಟೆ ಜಿಲ್ಲೆಯಿಂದ ಮೂರು ತಿಂಗಳ ಕಾಲ ಯಾವುದೇ ರೀತಿಯ ಹಂದಿಗಳನ್ನು ಆಮದು ಅಥವಾ ರಫ್ತು ಮಾಡುವುದು ನಿಷೇಧ ಮಾಡಲಾಗಿದೆ. ರೋಗ ಪತ್ತೆಯಾದ ಜಾಗದಿಂದ 1 ಕಿಮೀ ರೋಗಪೀಡಿತ ವಲಯ, 1 ರಿಂದ 10 ಕಿಮೀ ಜಾಗೃತ ವಲಯ ಎಂದು ಘೋಷಣೆ ಮಾಡಲಾಗಿದೆ.
ರೋಗ ಪೀಡಿತ ವಲಯ ವ್ಯಾಪ್ತಿಯ ಹಂದಿಗಳ ವಿಲೇವಾರಿಗೆ ಸೂಚನೆ ನೀಡಲಾಗಿದೆ. ಎರಡು ಹಂದಿಗಳ ಸಾಕಾಣಿಕೆ ಕೇಂದ್ರದ 130 ಹಂದಿಗಳ ವಧೆ ಮತ್ತು ವೈಜ್ಞಾನಿಕ ವಿಲೇವಾರಿಗೆ ಸೂಚಿಸಲಾಗಿದೆ. ಇದೇ ವೇಳೆ, ಬಾಗಲಕೋಟೆ ಜಿಲ್ಲೆಯ 18 ಸಾಕಾಣಿಕಾ ಕೇಂದ್ರದಲ್ಲಿರುವ 20 ಸಾವಿರ ಹಂದಿಗಳಿಗೆ ಮುಂಜಾಗ್ರತಾ ಕ್ರಮವಾಗಿ ವ್ಯಾಕ್ಸಿನ್ ನೀಡಲಾಗಿದೆ.
Amid COVID Concerns, African Swine Fever Confirmed in Karnataka, Outbreak Detected in Bagalkote District, Ban on Pork Transport Imposed.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm