ಬ್ರೇಕಿಂಗ್ ನ್ಯೂಸ್
29-05-25 02:43 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 29 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಕೊಲೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಅವರಿಗೆ ಸಿಎಂ ಸಿದ್ದರಾಮಯ್ಯ ಹೊಸ ಜವಾಬ್ದಾರಿ ನೀಡಿದ್ದಾರೆ. ಗುರುವಾರ ಸದಾಶಿವ ನಗರದಲ್ಲಿ ಇರುವ ಅವರ ನಿವಾಸಕ್ಕೆ ದಿಢೀರ್ ಭೇಟಿ ಕೊಟ್ಟ ಸಿಎಂ ಕೆಲ ಹೊತ್ತು ಮಾತುಕತೆ ನಡೆಸಿದರು. ಅಲ್ಲದೆ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಜವಾಬ್ದಾರಿ ನೀಡಿದ್ದಾರೆ.
ಭೇಟಿ ಬಳಿಕ ಮಾತನಾಡಿದ ಸಿದ್ದರಾಮಯ್ಯ, ಹರಿಪ್ರಸಾದ್ ಅವರು ಬ್ರೇಕ್ ಫಾಸ್ಟ್ ಗೆ ಕರೆದಿದ್ದರು. ಹಾಗಾಗಿ ಬರುತ್ತೇನೆ ಎಂದಿದ್ದೆ. ಅದರಂತೆ ಇಲ್ಲಿಗೆ ಬಂದಿದ್ದೆ. ರಾಜಕೀಯ ಚರ್ಚೆ ಸೇರಿ ಮಂಗಳೂರಿನ ವಿಚಾರ ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದರು.
ಭೇಟಿ ಸಂದರ್ಭದಲ್ಲಿ ರಾಜಕೀಯ ಚರ್ಚೆ ಅಂತ ಮಾಡಿಲ್ಲ. ಬದಲಾಗಿ ಕೆಲವೊಂದು ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಅದರಲ್ಲಿ ಮಂಗಳೂರು ವಿಚಾರ ಚರ್ಚೆ ಯಾಗಿದೆ. ಅಲ್ಲಿ ಸೌಹಾರ್ದತೆ ಸೃಷ್ಟಿ ಆಗಬೇಕು. ಹಿಂದುಗಳು ಮುಸ್ಲಿಂ ನಡುವೆ ಯಾವುದೇ ದ್ವೇಷ ಇರಬಾರದು. ಈ ನಿಟ್ಟಿನಲ್ಲಿ ಮಾತುಕತೆ ನಡೆಸಿದ್ದೇವೆ ಎಂದರು.
ಮಂಗಳೂರಿಗೆ ಬಿಕೆ ಹರಿಪ್ರಸಾದ್;
ಬಿಕೆ ಹರಿಪ್ರಸಾದ್ ಗೆ ಮಂಗಳೂರಿಗೆ ಹೋಗಿ ಬನ್ನಿ ಎಂದಿದ್ದೇನೆ. ಅಲ್ಲಿನ ಪರಿಸ್ಥಿತಿ ಬಗ್ಗೆ ಅವಲೋಕಿಸಿ ಬನ್ನಿ ಎಂದಿದ್ದೇನೆ ಎಂದರು.
ಮಂಗಳೂರಲ್ಲಿ ಸಾಲು ಸಾಲು ಹತ್ಯೆಗಳ ಬಗ್ಗೆ ಮಾತನಾಡಿ, ಯಾರೇ ಎಷ್ಟೇ ಪ್ರಭಾವಿ ಇದ್ದರೂ ಕೂಡ ಕಾನೂನು ರೀತಿ ಕ್ರಮ ತೆಗೆದುಕೊಳ್ಳುತ್ತೇವೆ. ಯಾರು ಕಾನೂನಿನಿಂತ ದೊಡ್ಡ ವರು ಅಲ್ಲ, ಕಾನೂನೇ ಎಲ್ಲರಿಗಿಂತ ದೊಡ್ಡದು. ಕಾನೂನಿನ ರೀತಿ ಕ್ರಮ ತೆಗೆದುಕೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮೂರು ಕೊಲೆಗಳು ನಡೆದಿವೆ. ಅಶ್ರಫ್, ಸುಹಾಸ್ ಶೆಟ್ಟಿ ಹತ್ಯೆ ನಡೆದಿತ್ತು. ಇದೀಗ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತಿಕಾರವಾಗಿ ಅಬ್ದುಲ್ ರೆಹ್ಮಾನ್ ಹತ್ಯೆಯಾಗಿದೆ. ಇದರಿಂದ ಜಿಲ್ಲೆಯಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣ ಆಗಿದೆ. ಮೇ 30 ರವರೆಗೆ ನಿಷೇಧಾಜ಼್ಞೆ ಜಾರಿಗೊಳಿಸಲಾಗಿದೆ.
CM Holds Breakfast Meeting with Congress MLC B K Hariprasad, Plans Visit to Mangalore Amid Communal Tensions.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm