ಬ್ರೇಕಿಂಗ್ ನ್ಯೂಸ್
31-05-25 04:33 pm HK News Desk ಕರ್ನಾಟಕ
ಕಾರ್ಕಳ, ಮೇ 31 : ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದ ಬೇಲಾಡಿಯಲ್ಲಿ ಶನಿವಾರ ನಸುಕಿನ ವೇಳೆಗೆ ನಡೆದ ಅಗ್ನಿ ದುರಂತದಲ್ಲಿ ಕರಾವಳಿಯ ಕಂಬಳದಲ್ಲಿ ಜನಪ್ರಿಯರಾಗಿರುವ ಕಾಂತಾವರ ಬೇಲಾಡಿ ಬಾವ ಅಶೋಕ್ ಶೆಟ್ಟಿಯವರಿಗೆ ಸೇರಿದ ಕಂಬಳ ಕೋಣಗಳಾದ ಅಪ್ಪು ಮತ್ತು ತೋನ್ಸೆ ದುರಂತ ಸಾವಿಗೀಡಾಗಿವೆ.
ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದಾಗಿ ದುರಂತ ಸಂಭವಿಸಿದೆ ಎನ್ನಲಾಗುತ್ತಿದ್ದು, ಬೆಳಗ್ಗೆ ಕೆಲಸದಾಳು ಹಟ್ಟಿಗೆ ತೆರಳಿದಾಗ ಬೆಂಕಿಯಿಂದ ಸುಟ್ಟು ಕರಕಲಾಗಿದ್ದು ಕಂಡುಬಂದಿದೆ. ಹಲವು ಕಂಬಳ ಕೂಟಗಳಲ್ಲಿ ಚಾಂಪ್ಯನ್ ಶಿಪ್ ಗಳನ್ನು ಗೆದ್ದಿದ್ದ ಅಪ್ಪು ಮತ್ತು ತೋನ್ಸೆ ಕೋಣಗಳ ಸಾವು ಕಂಬಳ ಪ್ರೇಮಿಗಳಿಗೆ ಆಘಾತ ತಂದಿದೆ. ಬೆಂಕಿ ಹೇಗೆ ಉಂಟಾಯಿತು, ಇದರ ಹಿಂದೆ ಯಾರದ್ದಾದರೂ ಕೈವಾಡ ಇದ್ದಿರಬಹುದೇ ಎನ್ನುವ ಬಗ್ಗೆ ತನಿಖೆ ಆಗಬೇಕಾಗಿದೆ.
ಅಪ್ಪು ಕೋಣಗಳ ಜೋಡಿಯು ಹಲವು ವರ್ಷಗಳಿಂದ ಕಂಬಳ ಕ್ಷೇತ್ರದಲ್ಲಿ ಪ್ರಶಸ್ತಿಗಳನ್ನು ಗೆದ್ದು ಜನಪ್ರಿಯರಾಗಿದ್ದವು. 2022-23ರ ಸಾಲಿನಲ್ಲಿ ಹಲವಾರು ಪ್ರಶಸ್ತಿಗಳನ್ನು ಪಡೆದು ಸರಣಿ ಶ್ರೇಷ್ಠ ಬಿರುದು ಪಡೆದಿತ್ತು. ತೋನ್ಸೆ ಕೋಣವು ನೇಗಿಲು ಕಿರಿಯ, ನೇಗಿಲು ಹಿರಿಯ, ಹಗ್ಗ ಹಿರಿಯ, ಅಡ್ಡ ಹಲಗೆ ಮತ್ತು ಕನೆ ಹಲಗೆ ವಿಭಾಗಗಳಲ್ಲಿ ಸ್ಪರ್ಧಿಸಿ ಎಲ್ಲ ವಿಭಾಗದಲ್ಲಿ ಪ್ರಶಸ್ತಿಗಳನ್ನು ಗೆದ್ದಿತ್ತು. ಈ ಕೋಣವನ್ನು 15 ವರ್ಷಗಳ ಹಿಂದೆ ಅಲೆವೂರು ತೆಂಕುಮನೆ ರಾಘು ಶೆಟ್ಟಿಯವರಿಂದ ಖರೀದಿಸಿ ಬೇಲಾಡಿ ಅಶೋಕ್ ಶೆಟ್ಟಿಯವರು ಕಂಬಳದಲ್ಲಿ ಪಳಗಿಸಿದ್ದರು. ಈ ನಡುವೆ, ಕರಿಂಜೆ ವಿನು ವಿಶ್ವನಾಥ ಶೆಟ್ಟಿಯವರ ಬಳಿಯೂ ಈ ಕೋಣ ಇತ್ತು. ಹಗ್ಗ ಹಿರಿಯ ವಿಭಾಗದಲ್ಲಿ 10-12 ವರ್ಷಗಳಲ್ಲಿ ಅದೆಷ್ಟೋ ಪ್ರಶಸ್ತಿಗಳನ್ನು ತನ್ನದಾಗಿಸಿತ್ತು. ಇಂಥ ಕೋಣಗಳ ಜೋಡಿ ಅಗ್ನಿ ದುರಂತದಲ್ಲಿ ಜೀವಂತ ದಹನವಾಗಿರುವುದು ಕಂಬಳ ಪ್ರಿಯರನ್ನು ಮತ್ತು ಅದನ್ನು ಸಲಹಿ ಸಾಕುತ್ತಿದ್ದ ಮಾಲೀಕರು ಮತ್ತು ಕೆಲಸದವರನ್ನು ರೋದಿಸುವಂತೆ ಮಾಡಿದೆ.
Karkala Appu, Decorated Winner of Hundreds of Kambala Awards, and Pair of Thonse Buffaloes Burnt Alive in Tragic Fire at Beladi Home.
25-08-25 10:55 pm
Bangalore Correspondent
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
26-08-25 10:36 am
Mangalore Correspondent
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
25-08-25 08:29 pm
HK News Desk
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm
Dharmasthala Case, Pastor John Shamine and No...
25-08-25 02:29 am