ಬ್ರೇಕಿಂಗ್ ನ್ಯೂಸ್
31-05-25 04:33 pm HK News Desk ಕರ್ನಾಟಕ
ಕಾರ್ಕಳ, ಮೇ 31 : ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದ ಬೇಲಾಡಿಯಲ್ಲಿ ಶನಿವಾರ ನಸುಕಿನ ವೇಳೆಗೆ ನಡೆದ ಅಗ್ನಿ ದುರಂತದಲ್ಲಿ ಕರಾವಳಿಯ ಕಂಬಳದಲ್ಲಿ ಜನಪ್ರಿಯರಾಗಿರುವ ಕಾಂತಾವರ ಬೇಲಾಡಿ ಬಾವ ಅಶೋಕ್ ಶೆಟ್ಟಿಯವರಿಗೆ ಸೇರಿದ ಕಂಬಳ ಕೋಣಗಳಾದ ಅಪ್ಪು ಮತ್ತು ತೋನ್ಸೆ ದುರಂತ ಸಾವಿಗೀಡಾಗಿವೆ.
ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದಾಗಿ ದುರಂತ ಸಂಭವಿಸಿದೆ ಎನ್ನಲಾಗುತ್ತಿದ್ದು, ಬೆಳಗ್ಗೆ ಕೆಲಸದಾಳು ಹಟ್ಟಿಗೆ ತೆರಳಿದಾಗ ಬೆಂಕಿಯಿಂದ ಸುಟ್ಟು ಕರಕಲಾಗಿದ್ದು ಕಂಡುಬಂದಿದೆ. ಹಲವು ಕಂಬಳ ಕೂಟಗಳಲ್ಲಿ ಚಾಂಪ್ಯನ್ ಶಿಪ್ ಗಳನ್ನು ಗೆದ್ದಿದ್ದ ಅಪ್ಪು ಮತ್ತು ತೋನ್ಸೆ ಕೋಣಗಳ ಸಾವು ಕಂಬಳ ಪ್ರೇಮಿಗಳಿಗೆ ಆಘಾತ ತಂದಿದೆ. ಬೆಂಕಿ ಹೇಗೆ ಉಂಟಾಯಿತು, ಇದರ ಹಿಂದೆ ಯಾರದ್ದಾದರೂ ಕೈವಾಡ ಇದ್ದಿರಬಹುದೇ ಎನ್ನುವ ಬಗ್ಗೆ ತನಿಖೆ ಆಗಬೇಕಾಗಿದೆ.
ಅಪ್ಪು ಕೋಣಗಳ ಜೋಡಿಯು ಹಲವು ವರ್ಷಗಳಿಂದ ಕಂಬಳ ಕ್ಷೇತ್ರದಲ್ಲಿ ಪ್ರಶಸ್ತಿಗಳನ್ನು ಗೆದ್ದು ಜನಪ್ರಿಯರಾಗಿದ್ದವು. 2022-23ರ ಸಾಲಿನಲ್ಲಿ ಹಲವಾರು ಪ್ರಶಸ್ತಿಗಳನ್ನು ಪಡೆದು ಸರಣಿ ಶ್ರೇಷ್ಠ ಬಿರುದು ಪಡೆದಿತ್ತು. ತೋನ್ಸೆ ಕೋಣವು ನೇಗಿಲು ಕಿರಿಯ, ನೇಗಿಲು ಹಿರಿಯ, ಹಗ್ಗ ಹಿರಿಯ, ಅಡ್ಡ ಹಲಗೆ ಮತ್ತು ಕನೆ ಹಲಗೆ ವಿಭಾಗಗಳಲ್ಲಿ ಸ್ಪರ್ಧಿಸಿ ಎಲ್ಲ ವಿಭಾಗದಲ್ಲಿ ಪ್ರಶಸ್ತಿಗಳನ್ನು ಗೆದ್ದಿತ್ತು. ಈ ಕೋಣವನ್ನು 15 ವರ್ಷಗಳ ಹಿಂದೆ ಅಲೆವೂರು ತೆಂಕುಮನೆ ರಾಘು ಶೆಟ್ಟಿಯವರಿಂದ ಖರೀದಿಸಿ ಬೇಲಾಡಿ ಅಶೋಕ್ ಶೆಟ್ಟಿಯವರು ಕಂಬಳದಲ್ಲಿ ಪಳಗಿಸಿದ್ದರು. ಈ ನಡುವೆ, ಕರಿಂಜೆ ವಿನು ವಿಶ್ವನಾಥ ಶೆಟ್ಟಿಯವರ ಬಳಿಯೂ ಈ ಕೋಣ ಇತ್ತು. ಹಗ್ಗ ಹಿರಿಯ ವಿಭಾಗದಲ್ಲಿ 10-12 ವರ್ಷಗಳಲ್ಲಿ ಅದೆಷ್ಟೋ ಪ್ರಶಸ್ತಿಗಳನ್ನು ತನ್ನದಾಗಿಸಿತ್ತು. ಇಂಥ ಕೋಣಗಳ ಜೋಡಿ ಅಗ್ನಿ ದುರಂತದಲ್ಲಿ ಜೀವಂತ ದಹನವಾಗಿರುವುದು ಕಂಬಳ ಪ್ರಿಯರನ್ನು ಮತ್ತು ಅದನ್ನು ಸಲಹಿ ಸಾಕುತ್ತಿದ್ದ ಮಾಲೀಕರು ಮತ್ತು ಕೆಲಸದವರನ್ನು ರೋದಿಸುವಂತೆ ಮಾಡಿದೆ.
Karkala Appu, Decorated Winner of Hundreds of Kambala Awards, and Pair of Thonse Buffaloes Burnt Alive in Tragic Fire at Beladi Home.
15-10-25 03:35 pm
Bangalore Correspondent
ರಘು ದೀಕ್ಷಿತ್ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ; 50ರ...
15-10-25 03:32 pm
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ...
14-10-25 11:24 am
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
15-10-25 12:09 pm
HK News Desk
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
15-10-25 05:36 pm
Mangalore Correspondent
ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು ;...
15-10-25 12:12 pm
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm