ಬ್ರೇಕಿಂಗ್ ನ್ಯೂಸ್
31-05-25 04:33 pm HK News Desk ಕರ್ನಾಟಕ
ಕಾರ್ಕಳ, ಮೇ 31 : ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದ ಬೇಲಾಡಿಯಲ್ಲಿ ಶನಿವಾರ ನಸುಕಿನ ವೇಳೆಗೆ ನಡೆದ ಅಗ್ನಿ ದುರಂತದಲ್ಲಿ ಕರಾವಳಿಯ ಕಂಬಳದಲ್ಲಿ ಜನಪ್ರಿಯರಾಗಿರುವ ಕಾಂತಾವರ ಬೇಲಾಡಿ ಬಾವ ಅಶೋಕ್ ಶೆಟ್ಟಿಯವರಿಗೆ ಸೇರಿದ ಕಂಬಳ ಕೋಣಗಳಾದ ಅಪ್ಪು ಮತ್ತು ತೋನ್ಸೆ ದುರಂತ ಸಾವಿಗೀಡಾಗಿವೆ.
ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದಾಗಿ ದುರಂತ ಸಂಭವಿಸಿದೆ ಎನ್ನಲಾಗುತ್ತಿದ್ದು, ಬೆಳಗ್ಗೆ ಕೆಲಸದಾಳು ಹಟ್ಟಿಗೆ ತೆರಳಿದಾಗ ಬೆಂಕಿಯಿಂದ ಸುಟ್ಟು ಕರಕಲಾಗಿದ್ದು ಕಂಡುಬಂದಿದೆ. ಹಲವು ಕಂಬಳ ಕೂಟಗಳಲ್ಲಿ ಚಾಂಪ್ಯನ್ ಶಿಪ್ ಗಳನ್ನು ಗೆದ್ದಿದ್ದ ಅಪ್ಪು ಮತ್ತು ತೋನ್ಸೆ ಕೋಣಗಳ ಸಾವು ಕಂಬಳ ಪ್ರೇಮಿಗಳಿಗೆ ಆಘಾತ ತಂದಿದೆ. ಬೆಂಕಿ ಹೇಗೆ ಉಂಟಾಯಿತು, ಇದರ ಹಿಂದೆ ಯಾರದ್ದಾದರೂ ಕೈವಾಡ ಇದ್ದಿರಬಹುದೇ ಎನ್ನುವ ಬಗ್ಗೆ ತನಿಖೆ ಆಗಬೇಕಾಗಿದೆ.





ಅಪ್ಪು ಕೋಣಗಳ ಜೋಡಿಯು ಹಲವು ವರ್ಷಗಳಿಂದ ಕಂಬಳ ಕ್ಷೇತ್ರದಲ್ಲಿ ಪ್ರಶಸ್ತಿಗಳನ್ನು ಗೆದ್ದು ಜನಪ್ರಿಯರಾಗಿದ್ದವು. 2022-23ರ ಸಾಲಿನಲ್ಲಿ ಹಲವಾರು ಪ್ರಶಸ್ತಿಗಳನ್ನು ಪಡೆದು ಸರಣಿ ಶ್ರೇಷ್ಠ ಬಿರುದು ಪಡೆದಿತ್ತು. ತೋನ್ಸೆ ಕೋಣವು ನೇಗಿಲು ಕಿರಿಯ, ನೇಗಿಲು ಹಿರಿಯ, ಹಗ್ಗ ಹಿರಿಯ, ಅಡ್ಡ ಹಲಗೆ ಮತ್ತು ಕನೆ ಹಲಗೆ ವಿಭಾಗಗಳಲ್ಲಿ ಸ್ಪರ್ಧಿಸಿ ಎಲ್ಲ ವಿಭಾಗದಲ್ಲಿ ಪ್ರಶಸ್ತಿಗಳನ್ನು ಗೆದ್ದಿತ್ತು. ಈ ಕೋಣವನ್ನು 15 ವರ್ಷಗಳ ಹಿಂದೆ ಅಲೆವೂರು ತೆಂಕುಮನೆ ರಾಘು ಶೆಟ್ಟಿಯವರಿಂದ ಖರೀದಿಸಿ ಬೇಲಾಡಿ ಅಶೋಕ್ ಶೆಟ್ಟಿಯವರು ಕಂಬಳದಲ್ಲಿ ಪಳಗಿಸಿದ್ದರು. ಈ ನಡುವೆ, ಕರಿಂಜೆ ವಿನು ವಿಶ್ವನಾಥ ಶೆಟ್ಟಿಯವರ ಬಳಿಯೂ ಈ ಕೋಣ ಇತ್ತು. ಹಗ್ಗ ಹಿರಿಯ ವಿಭಾಗದಲ್ಲಿ 10-12 ವರ್ಷಗಳಲ್ಲಿ ಅದೆಷ್ಟೋ ಪ್ರಶಸ್ತಿಗಳನ್ನು ತನ್ನದಾಗಿಸಿತ್ತು. ಇಂಥ ಕೋಣಗಳ ಜೋಡಿ ಅಗ್ನಿ ದುರಂತದಲ್ಲಿ ಜೀವಂತ ದಹನವಾಗಿರುವುದು ಕಂಬಳ ಪ್ರಿಯರನ್ನು ಮತ್ತು ಅದನ್ನು ಸಲಹಿ ಸಾಕುತ್ತಿದ್ದ ಮಾಲೀಕರು ಮತ್ತು ಕೆಲಸದವರನ್ನು ರೋದಿಸುವಂತೆ ಮಾಡಿದೆ.
Karkala Appu, Decorated Winner of Hundreds of Kambala Awards, and Pair of Thonse Buffaloes Burnt Alive in Tragic Fire at Beladi Home.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 02:29 pm
HK News Staffer
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm