ಬ್ರೇಕಿಂಗ್ ನ್ಯೂಸ್
31-05-25 09:38 pm HK News Desk ಕರ್ನಾಟಕ
ಮಂಡ್ಯ, ಮೇ.30: ಕರಾವಳಿ ಭಾಗದಲ್ಲಿ ಸರಣಿ ಕೊಲೆಗಳ ಹಿನ್ನಲೆಯಲ್ಲಿ ಮುಸ್ಲಿಂ ವ್ಯಕ್ತಿಯ ಹತ್ಯೆ ಮುಂದಿಟ್ಟುಕೊಂಡು ಹಿಂದು ಕಾರ್ಯಕರ್ತರನ್ನು ಸುಮ್ಮನೆ ಬಂಧಿಸಲಾಗುತ್ತಿದೆ. ಆ ಮೂಲಕ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಇದಕ್ಕಾಗಿ ಕೋಮು ನಿಗ್ರಹದಳವನ್ನು ರಾಜ್ಯ ಸರಕಾರ ಸ್ಥಾಪನೆ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರದ ಕುಮ್ಮಕ್ಕಿನಿಂದ ಪೊಲೀಸರು ಅತಿರೇಕದ ವರ್ತನೆ ತೋರುತ್ತಿದ್ದಾರೆ. ಹಿಂದು ಕಾರ್ಯಕರ್ತರನ್ನು ಬಂಧಿಸಿದರೆ ಪರಿಸ್ಥಿತಿ ಮಿತಿ ಮೀರಲಿದೆ. ಅದಕ್ಕೆ ಕಾಂಗ್ರೆಸ್ ಸರಕಾರ, ಸಿಎಂ, ಗೃಹ ಸಚಿವರು ಹೊಣೆಯಾಗುತ್ತಾರೆ. ಇದು ಕಾಂಗ್ರೆಸ್ ಸರಕಾರಕ್ಕೆ ಶೋಭೆ ತರಲ್ಲ ಎಂದು ಆಕ್ಷೇಪಿಸಿದರು.
ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆದಾಗ ಇಂಟಲಿಜೆನ್ಸ್ ಬಗ್ಗೆ ಕಾಂಗ್ರೆಸ್ನವರು ಮಾತನಾಡಿದ್ದರು. ಆದರೀಗ ಮಂಗಳೂರಿನಲ್ಲಿ ಕೊಲೆಯಾಗುತ್ತಿದೆ. ಈಗ ರಾಜ್ಯ ಸರಕಾರ ಏನು ಮಾಡುತ್ತಿದೆ? ಇವರ ಬಳಿ ಇಂಟಲಿಜೆನ್ಸ್ ಇಲ್ಲವೇ?" ಎಂದು ಪ್ರಶ್ನಿಸಿದರು.
ರಾಜ್ಯದಲ್ಲಿ ಮಳೆ ಅವಾಂತರ ವಿಚಾರಕ್ಕೆ ಪ್ರತಿಕ್ರಿಯಿಸಿ, ಮಳೆ ಅವಾಂತರ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ನಮ್ಮ ಪಕ್ಷದಿಂದ ತಂಡ ಮಾಡಲು ತೀರ್ಮಾನಿಸಲಾಗಿದೆ. ಪಕ್ಷದ ನಾಯಕರು ಹಾಗೂ ಮುಖಂಡರು ಪ್ರವಾಸ ಕೈಗೊಳ್ಳಲು ಹೇಳಿದ್ದೇನೆ. ರಾಜ್ಯ ಸರಕಾರ ಗ್ಯಾರಂಟಿಯ ಅಮಲಿನಲ್ಲಿದೆ. ಇಷ್ಟೆಲ್ಲ ಮಳೆಯಾದರೂ ಕೂಡ ರೈತರಿಗೆ ಬಿತ್ತನೆ ಬೀಜ ಕೊಟ್ಟಿಲ್ಲ. ಇದರಿಂದ ರೈತರು ಪರದಾಡುತ್ತಿದ್ದಾರೆ. ರಾಜ್ಯ ಸರಕಾರ ಎಚ್ಚೆತ್ತು ರೈತರಿಗೆ ಅನುಕೂಲವಾಗುವ ಕೆಲಸ ಮಾಡಬೇಕು' ಎಂದು ಆಗ್ರಹಿಸಿದರು.
Mangalore Serial Killings, Hindus Unfairly Targeted Over Muslim Youth’s Murder, Warns B Y Vijayendra.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 02:02 pm
HK News Staffer
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm