ಬ್ರೇಕಿಂಗ್ ನ್ಯೂಸ್
01-06-25 11:50 am Bangalore Correspondent ಕರ್ನಾಟಕ
ಬೆಂಗಳೂರು, ಜೂನ್.1: ಮಂಡ್ಯ ಪೊಲೀಸರ ಕರ್ತವ್ಯ ಲೋಪದಿಂದ ಮಗುವೊಂದು ಮೃತಪಟ್ಟ ಬೆನ್ನಲ್ಲೇ ಎಚ್ಚತ್ತಿರುವ ಪೊಲೀಸ್ ಇಲಾಖೆ ತಪಾಸಣೆ ನೆಪದಲ್ಲಿ ಸಕಾರಣವಿಲ್ಲದೆ ವಾಹನಗಳನ್ನು ಏಕಾಏಕಿ ಅಡ್ಡಗಟ್ಟಿ ನಿಲ್ಲಿಸಬಾರದು ಎಂದು ಆದೇಶ ಹೊರಡಿಸಿದೆ.
ಈ ಕುರಿತು ಶನಿವಾರ ರಾಜ್ಯದ ಎಲ್ಲ ಜಿಲ್ಲೆಗಳ ಪೊಲೀಸರಿಗೆ ಸುತ್ತೋಲೆ ಹೊರಡಿಸಿರುವ ಡಿಜಿಪಿ ಡಾ.ಎಂ.ಎ ಸಲೀಂ, ವಾಹನಗಳ ತಪಾಸಣೆ ಸಂಬಂಧ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಆದೇಶಿಸಿದ್ದಾರೆ.
ಹೆದ್ದಾರಿಗಳಲ್ಲಿ ಜಿಗ್ ಜಾಗ್ ಬ್ಯಾರಿಕೇಡ್ ಅಳವಡಿಸಿ ವಾಹನಗಳನ್ನು ತಡೆಯಬಾರದು. ರಸ್ತೆಯಲ್ಲಿ ಏಕಾಏಕಿ ಅಡ್ಡಬಂದು ವಾಹನಗಳನ್ನು ನಿಲ್ಲಿಸಬಾರದು. ವಾಹನಗಳನ್ನು ನಿಲ್ಲಿಸಿ ಕೀ ಕಸಿದು ಅಡ್ಡಿ ಪಡಿಸಬಾರದು. ಬೈಕ್ ಹಿಂಬದಿ ಕುಳಿತಿರುವ ಸವಾರನನ್ನು ಹಿಡಿದೆಳೆಯುವುದು ಮಾಡುವಂತಿಲ್ಲ. ಪ್ರಮುಖವಾಗಿ ಇಂಟಲಿಜೆನ್ಸ್ ಟ್ರಾಫಿಕ್ ಮ್ಯಾನೇಜ್ಮೆಂಟ್ ಸಿಸ್ಟಮ್ ಜಾರಿಯಿರುವ ಬೆಂಗಳೂರು ಸೇರಿದಂತೆ ಇತರ ನಗರಗಳಲ್ಲಿ ತಂತ್ರಜ್ಞಾನ ಆಧರಿತ ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ದಾಖಲಿಸಲು ಆದ್ಯತೆ ನೀಡಬೇಕು ಎಂದು ಸೂಚಿಸಿದ್ದಾರೆ.
ರಸ್ತೆಗಳಲ್ಲಿ ಅತಿ ವೇಗವಾಗಿ ಚಲಾಯಿಸುವ ವಾಹನಗಳನ್ನು ಬೆನ್ನಟ್ಟುವ ಬದಲಿಗೆ ವಾಹನಗಳ ಸಂಖ್ಯೆ ಗುರುತು ಮಾಡಿಕೊಂಡು ಜಿಲ್ಲಾ ಸರಹದ್ದುಗಳ ನಿಯಂತ್ರಣ ಕೊಠಡಿಗಳಿಗೆ ಮಾಹಿತಿ ರವಾನಿಸಿ ಪ್ರಕರಣ ದಾಖಲಿಸಬೇಕು. ಸಂಚಾರ ನಿಯಮ ಉಲ್ಲಂಘನೆ ಸಲುವಾಗಿ ವಾಹನಗಳನ್ನು ತಪಾಸಣೆ ಮಾಡುವಾಗ ಪ್ರತಿಫಲನ ಜಾಕೆಟ್ ಗಳನ್ನು ಧರಿಸಬೇಕು. ಸಂಜೆ ವೇಳೆ ಎಲ್ ಇಡಿ ಬಟನ್ ಗಳನ್ನು ಉಪಯೋಗಿಸಬೇಕು. ಕರ್ತವ್ಯ ನಿರ್ವಹಣೆ ವೇಳೆ ಕಡ್ಡಾಯವಾಗಿ ಬಾಡಿ ವೋರ್ನ್ ಕ್ಯಾಮೆರಾ ಧರಿಸಿರಬೇಕು ಎಂದು ನಿರ್ದೇಶನ ನೀಡಲಾಗಿದೆ.
Director General and Inspector General of Police (DG&IGP) M A Saleem on Saturday issued new guidelines to the traffic policemen in the state.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 02:02 pm
HK News Staffer
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm