ಬ್ರೇಕಿಂಗ್ ನ್ಯೂಸ್
01-06-25 11:50 am Bangalore Correspondent ಕರ್ನಾಟಕ
ಬೆಂಗಳೂರು, ಜೂನ್.1: ಮಂಡ್ಯ ಪೊಲೀಸರ ಕರ್ತವ್ಯ ಲೋಪದಿಂದ ಮಗುವೊಂದು ಮೃತಪಟ್ಟ ಬೆನ್ನಲ್ಲೇ ಎಚ್ಚತ್ತಿರುವ ಪೊಲೀಸ್ ಇಲಾಖೆ ತಪಾಸಣೆ ನೆಪದಲ್ಲಿ ಸಕಾರಣವಿಲ್ಲದೆ ವಾಹನಗಳನ್ನು ಏಕಾಏಕಿ ಅಡ್ಡಗಟ್ಟಿ ನಿಲ್ಲಿಸಬಾರದು ಎಂದು ಆದೇಶ ಹೊರಡಿಸಿದೆ.
ಈ ಕುರಿತು ಶನಿವಾರ ರಾಜ್ಯದ ಎಲ್ಲ ಜಿಲ್ಲೆಗಳ ಪೊಲೀಸರಿಗೆ ಸುತ್ತೋಲೆ ಹೊರಡಿಸಿರುವ ಡಿಜಿಪಿ ಡಾ.ಎಂ.ಎ ಸಲೀಂ, ವಾಹನಗಳ ತಪಾಸಣೆ ಸಂಬಂಧ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಆದೇಶಿಸಿದ್ದಾರೆ.
ಹೆದ್ದಾರಿಗಳಲ್ಲಿ ಜಿಗ್ ಜಾಗ್ ಬ್ಯಾರಿಕೇಡ್ ಅಳವಡಿಸಿ ವಾಹನಗಳನ್ನು ತಡೆಯಬಾರದು. ರಸ್ತೆಯಲ್ಲಿ ಏಕಾಏಕಿ ಅಡ್ಡಬಂದು ವಾಹನಗಳನ್ನು ನಿಲ್ಲಿಸಬಾರದು. ವಾಹನಗಳನ್ನು ನಿಲ್ಲಿಸಿ ಕೀ ಕಸಿದು ಅಡ್ಡಿ ಪಡಿಸಬಾರದು. ಬೈಕ್ ಹಿಂಬದಿ ಕುಳಿತಿರುವ ಸವಾರನನ್ನು ಹಿಡಿದೆಳೆಯುವುದು ಮಾಡುವಂತಿಲ್ಲ. ಪ್ರಮುಖವಾಗಿ ಇಂಟಲಿಜೆನ್ಸ್ ಟ್ರಾಫಿಕ್ ಮ್ಯಾನೇಜ್ಮೆಂಟ್ ಸಿಸ್ಟಮ್ ಜಾರಿಯಿರುವ ಬೆಂಗಳೂರು ಸೇರಿದಂತೆ ಇತರ ನಗರಗಳಲ್ಲಿ ತಂತ್ರಜ್ಞಾನ ಆಧರಿತ ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ದಾಖಲಿಸಲು ಆದ್ಯತೆ ನೀಡಬೇಕು ಎಂದು ಸೂಚಿಸಿದ್ದಾರೆ.
ರಸ್ತೆಗಳಲ್ಲಿ ಅತಿ ವೇಗವಾಗಿ ಚಲಾಯಿಸುವ ವಾಹನಗಳನ್ನು ಬೆನ್ನಟ್ಟುವ ಬದಲಿಗೆ ವಾಹನಗಳ ಸಂಖ್ಯೆ ಗುರುತು ಮಾಡಿಕೊಂಡು ಜಿಲ್ಲಾ ಸರಹದ್ದುಗಳ ನಿಯಂತ್ರಣ ಕೊಠಡಿಗಳಿಗೆ ಮಾಹಿತಿ ರವಾನಿಸಿ ಪ್ರಕರಣ ದಾಖಲಿಸಬೇಕು. ಸಂಚಾರ ನಿಯಮ ಉಲ್ಲಂಘನೆ ಸಲುವಾಗಿ ವಾಹನಗಳನ್ನು ತಪಾಸಣೆ ಮಾಡುವಾಗ ಪ್ರತಿಫಲನ ಜಾಕೆಟ್ ಗಳನ್ನು ಧರಿಸಬೇಕು. ಸಂಜೆ ವೇಳೆ ಎಲ್ ಇಡಿ ಬಟನ್ ಗಳನ್ನು ಉಪಯೋಗಿಸಬೇಕು. ಕರ್ತವ್ಯ ನಿರ್ವಹಣೆ ವೇಳೆ ಕಡ್ಡಾಯವಾಗಿ ಬಾಡಿ ವೋರ್ನ್ ಕ್ಯಾಮೆರಾ ಧರಿಸಿರಬೇಕು ಎಂದು ನಿರ್ದೇಶನ ನೀಡಲಾಗಿದೆ.
Director General and Inspector General of Police (DG&IGP) M A Saleem on Saturday issued new guidelines to the traffic policemen in the state.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
18-04-26 03:50 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm