ಬ್ರೇಕಿಂಗ್ ನ್ಯೂಸ್
01-06-25 09:37 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 1 : ವಿಶ್ವ ತಂಬಾಕು ರಹಿತ ದಿನದಂದು 'ಸಾರ್ವಜನಿಕ ಆರೋಗ್ಯ' ರಕ್ಷಣೆಯತ್ತ ರಾಜ್ಯ ಸರ್ಕಾರದಿಂದ ಮಹತ್ವದ ಅಧಿಸೂಚನೆ ಹೊರಡಿಸಲಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಹೊಗೆ ರಹಿತ ತಂಬಾಕು ಪದಾರ್ಥಗಳ ಬಳಕೆಯನ್ನು ನಿಷೇಧಿಸಲಾಗಿದೆ. COTPA ಕಾಯ್ದೆಗೆ ತಿದ್ದುಪಡಿ ತಂದು ಹೊಗೆ ರಹಿತ ತಂಬಾಕು ಪದಾರ್ಥಗಳಿಗೆ ಕಡಿವಾಣ ಹಾಕುವುದರೊಂದಿಗೆ ಹುಕ್ಕಾ ಬ್ಯಾನ್ ಮಾಡಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಕ್ರಮಕ್ಕೆ ಇದೀಗ ರಾಷ್ಟ್ರಪತಿಗಳಿಂದಲೂ ಮನ್ನಣೆ ದೊರೆತಿದ್ದು, ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದೆ.
ರಾಜ್ಯದಲ್ಲಿ ಇನ್ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನವಷ್ಟೇ ಅಲ್ಲದೇ ಹೊಗೆ ರಹಿತ ತಂಬಾಕು ಪದಾರ್ಥಗಳನ್ನ ಸೇವಿಸಿ ಉಗಿಯುವಂತಿಲ್ಲ. ಸಿಗರೇಟ್ ಹೊರತಾಗಿಯೂ ಹೊಗೆ ರಹಿತ ತಂಬಾಕು ಪದಾರ್ಥಗಳು ಸಾರ್ವಜನಿಕ ಆರೋಗ್ಯಕ್ಕೆ ಹಾನಿ ಉಂಟು ಮಾಡುತ್ತಿದ್ದವು. ತಂಬಾಕು ಪದಾರ್ಥಗಳನ್ನ ಸೇವಿಸಿ ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲಿ ಬೇಕೆಂದರಲ್ಲಿ ಉಗಿಯುವುದರಿಂದ ಗಾಳಿಯಲ್ಲಿ ಒಬ್ಬರಿಂದ ಒಬ್ಬರಿಗೆ ವೈರಸ್ ಹರಡಬಹುದು. ವಿಶೇಷವಾಗಿ ಕೋವಿಡ್ 19 ವೈರಸ್ ನಿಂದ ಸಾರ್ವಜನಿಕರು ತಮ್ಮನ್ನ ತಾವು ರಕ್ಷಿಸಿಕೊಕೊಳ್ಳುವುದು ಸವಾಲಾಗಿತ್ತು. ಅಲ್ಲದೇ ಟಿ.ಬಿ ಹೊಂದಿರುವ ರೋಗಿಗಳಿಗೂ ತೊಂದರೆ ಉಂಟಾಗಿತ್ತು.
ಈ ಸಮಸ್ಯೆಗಳನ್ನ ಸೂಕ್ಷ್ಮವಾಗಿ ಗಮನಿಸಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಾರ್ವಜನಿಕ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಈ ಹಿಂದೆ ಇದ್ದ COPTA ಕಾಯ್ದೆಗೆ ತಿದ್ದುಪಡಿ ತಂದು ರಾಜ್ಯದ ಎರಡು ಸದನದಲ್ಲಿ ಅನುಮೋದನೆ ಪಡೆದಿದ್ದರು. ಇದು ಕೇಂದ್ರದ ಕಾಯ್ದೆಯಾಗಿದ್ದರಿಂದ ರಾಷ್ಟ್ರಪತಿಯವರ ಅನುಮೋದನೆಗೆ ಕಳಿಸಲಾಗಿತ್ತು. ರಾಜ್ಯ ಸರ್ಕಾರದ ಈ ಮಹತ್ವದ ಹೆಜ್ಜೆಗೆ ರಾಷ್ಟ್ರಪತಿಗಳಿಂದ ಅನುಮೋದನೆ ದೊರೆತಿದ್ದು, ರಾಜ್ಯ ಸರ್ಕಾರಿಂದ ಅಧಿಸೂಚನೆ ಹೊರಡಿಸಲಾಗಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಸೇವನೆಗೆ 200 ರೂ. ಇದ್ದ ದಂಡವನ್ನು 1000 ರೂಪಾಯಿ ವರೆಗೆ ಹೆಚ್ಚಿಸಲಾಗಿದೆ. 21 ವರ್ಷದ ಒಳಗಿನವರು ತಂಬಾಕು ಪದಾರ್ಥಗಳನ್ನ ಮಾರಾಟ ಮಾಡದಂತೆ ನಿಷೇಧ ಹೇರಲಾಗಿದೆ. ಉಪಹಾರ ಗೃಹ, ಪಬ್, ಬಾರ್, ರೆಸ್ಟೋರೆಂಟ್ ಗಳಲ್ಲಿ ಹುಕ್ಕಾ ಬ್ಯಾನ್ ಮಾಡಲಾಗಿದ್ದು, ಹುಕ್ಕಾ ಬಾರ್ ವಿರುದ್ಧ ಕನಿಷ್ಠ 50 ಸಾವಿರದಿಂದ 1 ಲಕ್ಷ ದಂಡ, ಮೂರು ವರ್ಷ ಜೈಲು ಶಿಕ್ಷೆ ವಿಧಿಸಲು ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.
Karnataka Tobacco Use Banned in Public Places rs 1,000 Fine, Hookah Also Prohibited.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 02:02 pm
HK News Staffer
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm