ಬ್ರೇಕಿಂಗ್ ನ್ಯೂಸ್
03-06-25 10:50 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 3 : ನಟ ಕಮಲಹಾಸನ್ ನಟನೆಯ ‘ಥಗ್ ಲೈಫ್ ' ಸಿನಿಮಾವನ್ನು ಕರ್ನಾಟಕದಲ್ಲಿ ಸದ್ಯಕ್ಕೆ ಬಿಡುಗಡೆ ಮಾಡದಿರಲು ಚಿತ್ರತಂಡ ಒಪ್ಪಿಕೊಂಡಿದೆ. ಚಿತ್ರ ಬಿಡುಗಡೆಗಾಗಿ ಭದ್ರತೆ ಕೋರಿ ಸಲ್ಲಿಸಲಾಗಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಮುಂದಿನ ವಿಚಾರಣೆಯನ್ನು ಜೂನ್ 10ಕ್ಕೆ ಮುಂದೂಡಿದೆ.
ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ನಿರ್ಮಾಪಕರ ಹೇಳಿಕೆಯನ್ನು ದಾಖಲಿಸಿದ್ದು, ಈ ವೇಳೆ ಭಾಷೆಯ ವಿಚಾರದಲ್ಲಿ ಮುಂದಡಿ ಇಡುವಾಗ ವಿವೇಚನೆ ಬಳಸುವಂತೆ ಕಿವಿಮಾತು ಹೇಳಿತು. ಕರ್ನಾಟಕದಲ್ಲಿ ವಿರೋಧ ಕೇಳಿಬಂದ ಹಿನ್ನೆಲೆಯಲ್ಲಿ ನಿರ್ಮಾಪಕರು ರಾಜ್ಯದಲ್ಲಿ ಸದ್ಯಕ್ಕೆ ಚಿತ್ರ ಬಿಡುಗಡೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ಕನ್ನಡ ತಮಿಳು ಮೂಲದಿಂದ ಹುಟ್ಟಿದೆ ಎಂದು ನಟ ಕಮಲ್ ಹಾಸನ್ ಹೇಳಿಕೆ ನೀಡಿದ್ದಕ್ಕೆ ಕರ್ನಾಟಕದಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ. ಕಮಲ್ ನಟನೆಯ ಥಗ್ ಲೈಫ್ ಸಿನಿಮಾ ಬಿಡುಗಡೆ ಮಾಡದಂತೆ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಹೀಗಾಗಿ ಕರ್ನಾಟಕ ಸರ್ಕಾರವು ಸಿನಿಮಾ ಬಿಡುಗಡೆಗೆ ಭದ್ರತೆ ನೀಡಬೇಕು ಎಂದು ಕೋರಿ ಚಿತ್ರ ತಂಡವು ಹೈಕೋರ್ಟ್ ಮೊರೆ ಹೋಗಿತ್ತು.
ಕ್ಷಮೆ ಕೇಳಿ ಎಂದಿದ್ದ ಹೈಕೋರ್ಟ್
ನಟ ಕಮಲ್ ಹಾಸನ್ ಅವರಲ್ಲಿ ಹೇಳಿಕೆ ಸಂಬಂಧಿಸಿ ಕನ್ನಡಿಗರ ಕ್ಷಮೆ ಕೋರುವಂತೆ ಹೈಕೋರ್ಟ್ ಸೂಚಿಸಿತ್ತು. ಆದರೆ ನಟನ ಪರ ಹಾಜರಾದ ವಕೀಲ ಧ್ಯಾನ್ ಚಿನ್ನಪ್ಪ, ಪೀಠದ ಭಾವನೆಗಳನ್ನು ಕಮಲ್ ಹಾಸನ್ ಅವರಿಗೆ ತಿಳಿಸಿದ್ದೇನೆ. ಮೆರಿಟ್ ಮೇಲೆ ವಾದಿಸಲಾಗುವುದು ಎಂದು ಹೇಳಿ, ನಟ ಕಮಲ್ ಅವರು ಕರ್ನಾಟಕ ವಾಣಿಜ್ಯ ಮಂಡಳಿಗೆ ಬರೆದಿರುವ ಪತ್ರವನ್ನು ಕೋರ್ಟ್ಗೆ ಓದಿ ಹೇಳಿದರು.
ಪತ್ರವನ್ನು ಕೇಳಿಸಿಕೊಂಡ ನ್ಯಾಯಮೂರ್ತಿಗಳು, " ಎಲ್ಲವೂ ಸರಿಯಾಗಿದೆ. ಇದರ ಜೊತೆಗೆ ಯಾರ ಭಾವನೆಗಾದರೂ ನಾನು ನೋವು ಉಂಟು ಮಾಡಿದ್ದರೆ ಎಂದು ಹೇಳಿದ್ದರೆ ಸರಿ ಆಗಿರುತ್ತಿತ್ತು" ಎಂದರು.
ಕಮಲ್ ಅವರು ಪತ್ರದಲ್ಲಿ ಕನ್ನಡದ ಬಗ್ಗೆ ಇರುವ ತಮ್ಮ ಗೌರವವನ್ನು ವ್ಯಕ್ತಪಡಿಸಿದ್ದಾರೆ. ಇದೇ ರೀತಿ ಕ್ಷಮೆ ಕೇಳಬೇಕೆಂದು ಹೇಳಲು ಸಾಧ್ಯವಿಲ್ಲ. ಹಾಗಂತ, ನಾವು ಭಾಷೆ ಆಧಾರದಲ್ಲಿ ವಿಭಜನೆಯಾಗಬಾರದು, ದೇಶ- ಭಾಷೆ ಒಂದೇ, ಕನ್ನಡವೂ ಇರಬೇಕು, ತಮಿಳೂ ಇರಬೇಕು ಎಂದು ಬರೆದ ಪತ್ರವನ್ನು ಉಲ್ಲೇಖಿಸಿ ವಕೀಲ ಧ್ಯಾನ್ ಚಿನ್ನಪ್ಪ ಹೈಕೋರ್ಟ್ನಲ್ಲಿ ವಾದ ಮಂಡಿಸಿದರು. ಈ ವಿಚಾರದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯೊಂದಿಗೆ ಚರ್ಚೆ ನಡೆಸಲು ಸಿದ್ದವಿದ್ದೇವೆ. ಅದಕ್ಕಾಗಿ ಒಂದು ವಾರ ವಿಚಾರಣೆ ಮುಂದೂಡಬೇಕು ಎಂದು ಮನವಿ ಮಾಡಿದರು.
ನಟ ಕಮಲ್ ಅವರಲ್ಲಿ ಹೇಳಿಕೆಯ ಬಗ್ಗೆ ವಾಣಿಜ್ಯೋದ್ಯಮ ಮಂಡಳಿಯಿಂದ ಕ್ಷಮೆ ಕೋರಲು ಕೇಳಲಾಗಿತ್ತು. ಆದರೆ ಕ್ಷಮೆ ಕೇಳುವ ಬದಲು ತನ್ನ ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡಿ ಕಮಲ್ ಪತ್ರ ಬರೆದಿದ್ದಾರೆ. ಈ ಕುರಿತು ಕಮಲ್ ಅವರು ವಾಣಿಜ್ಯ ಮಂಡಳಿ ಸಮಾಲೋಚನೆ ಜೊತೆ ನಡೆಸಲು ನಿರ್ಧರಿಸಿದ್ದು, ಸದ್ಯ ವಿಚಾರಣೆ ಮುಂದೂಡುವಂತೆ ನಟನ ಪರ ವಕೀಲರು ಕೋರಿದ್ದಾರೆ. ವಿಚಾರಣೆಯನ್ನು ಜೂನ್ 10ಕ್ಕೆ ಮುಂದೂಡಲಾಗಿದೆ.
Thug Life Movie Release Stalled in Karnataka; Kamal Haasan's Remarks Spark Controversy
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
18-04-26 03:50 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm